ಕೋಲಾರ | ಗ್ರಾ.ಪಂ. ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹ: ಜು.28ರಂದು ಬೃಹತ್ ಹೋರಾಟ

Date:

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ನಿರಂತರವಾಗಿ ಹೋರಾಟಗಳನ್ನು ನಡೆಸುತ್ತಿದ್ದರೂ ಕೂಡ ಆಳುವ ಸರ್ಕಾರಗಳು ಗ್ರಾಮ ಪಂಚಾಯಿತಿ ನೌಕರರನ್ನು ನಿರ್ಲಕ್ಷಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜುಲೈ 28ರಂದು ಕೋಲಾರ ಜಿಲ್ಲಾ ಪಂಚಾಯತ್‌ ಎದುರು ಬೃಹತ್ ಹೋರಾಟ ಕೈಗೊಳ್ಳಲಾಗಿದ್ದು, ಎಲ್ಲ ನೌಕರರೂ ಭಾಗವಹಿಸಬೇಕು ಎಂದು ರೈತ ಕಾರ್ಮಿಕ ಮುಖಂಡ ಪಾತಕೋಟ ನವೀನ್ ಕುಮಾರ್ ಕರೆ ನೀಡಿದರು.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮ ಪಂಚಾಯಿತಿ ಎದರು ಜುಲೈ 23ರ ಬುಧವಾರ ಹಮ್ಮಿಕೊಂಡಿದ್ದ ಪಂಚಾಯಿತಿ ನೌಕರ ಸಂಘದ ಹೋಬಳಿ ಮಟ್ಟದ ಸಮಾವೇಶದಲ್ಲಿ ಮಾತನಾಡಿದರು.

“ಕನಿಷ್ಠ ವೇತನ ₹36,000 ನೀಡುವುದಾಗಲಿ, ನಿವೃತ್ತಿ ವೇತನ, ಪ್ರಮೋಷನ್ ನೀಡುವುದು, ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿಗೆ ಜಾರಿ ಮಾಡುತ್ತಿಲ್ಲ, ಇತ್ತೀಚೆಗೆ ಕರ ವಸೂಲಿಗಾರ ಮತ್ತು ಜಲಗಾರರಿಂದ ಕಂದಾಯ ವಸೂಲಿ ವಿಚಾರದಲ್ಲಿ ಮೇಲಧಿಕಾರಿಗಳಿಂದ ನಿರಂತರ ಕಿರುಕುಳ ನೀಡುತ್ತಿರುವುದು ನಿಲ್ಲಬೇಕು. ಜಲಗಾರರಿಗೆ ಬ್ಯಾಟರಿ ಮತ್ತು ಶ್ಯೂಗಳನ್ನು ಕೊಡಬೇಕು ಹಾಗೂ ನೌಕರರಿಗೆ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿ ಮಾಡುವಂತೆ ಒತ್ತಾಯಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಚಾಯಿತಿ ನೌಕರ ಸಂಘದ ತಾಲೂಕು ಮುಖಂಡ ಟಿ ಎನ್ ಆಂಜನಪ್ಪ ಮಾತನಾಡಿ, “ನಮ್ಮ ನೌಕರರು ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಿಐಟಿಯು ಸಂಘಟನೆಯಲ್ಲಿ ಸಂಘಟಿತರಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದಾಗಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ರಾಜ್ಯದಲ್ಲಿ 11.80 ಲಕ್ಷ ಮಂದಿ ಅನಧಿಕೃತ ಪಿಂಚಣಿದಾರರು ಪತ್ತೆ: ಸಚಿವ ಕೃಷ್ಣ ಭೈರೇಗೌಡ

ಈ ಸಂದರ್ಭದಲ್ಲಿ ಹೋಬಳಿ ಮಟ್ಟದ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮುದಿ ಮಡುಗು ರೆಡ್ಡಪ್ಪ, ಕಾರ್ಯದರ್ಶಿಯಾಗಿ ಎರಮವಾರಪಲ್ಲಿ ರಾಜು ಎಸ್ ಎನ್, ಸಂಘಟನಾ ಕಾರ್ಯದರ್ಶಿಯಾಗಿ ರಾಯಲ್ಪಾಡು ರವೀಂದ್ರ, ಖಜಾಂಚಿಯಾಗಿ ಕೂರಿಗೆಪಲ್ಲಿ ಚಲಪತಿ, ಸದಸ್ಯರುಗಳಾಗಿ ಶಿವಪ್ಪ, ನಾಗರಾಜ್, ಅಶೋಕ ಸಿಎನ್, ಗಂಗೆರೆಡ್ಡಿ, ನರಸಿಂಹ ರೆಡ್ಡಿ, ರಾಮರೆಡ್ಡಿ ಟಿಜಿ, ವೆಂಕಟರಾಮರೆಡ್ಡಿ, ಕೆ ವೈ ನಾರಾಯಣಸ್ವಾಮಿ ಆಯ್ಕೆಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...