ಆದಿಮ ರಂಗಶಾಲೆಯ ಗಾಯಕರೇ ನಾಯಕರಾಗಿರುವ ನೆಲ ಕೋಲಾರ: ರಾಜಪ್ಪ ದಳವಾಯಿ

Date:

ಗಾಯಕರೇ ನಾಯಕರಾಗಿರುವ ನೆಲ ಕೋಲಾರ. ಹೋರಾಟ, ಬದುಕು, ಅಸಂಖ್ಯಾತರ ಒಲವೇ ಆದಿಮ. ಮೊದಲು ಆದಿಮವನ್ನು, ಈ ನೆಲದ ಸಂಸ್ಕೃತಿಯನ್ನು ಅರಿಯಬೇಕು. ರಾಜ್ಯದಲ್ಲಿ ಹಲವು ರಂಗಶಾಲೆಗಳಿದ್ದು, ಅವುಗಳಿಗಿಂತ ವಿಭಿನ್ನವಾಗಿ ಆದಿಮ ರಂಗಶಾಲೆ ಶಿಕ್ಷಣ ಕೆಲಸ ನಡೆಯುತ್ತಿರುವುದು ಖುಷಿಯ ವಿಚಾರ ಎಂದು ನಾಟಕಕಾರ ರಾಜಪ್ಪ ದಳವಾಯಿ ಅಭಿಪ್ರಾಯಪಟ್ಟರು.

ಕೋಲಾರ ತಾಲೂಕಿನ ತೇರಹಳ್ಳಿ ಬೆಟ್ಟದ ಶಿವಗಂಗೆಯಲ್ಲಿ ಆದಿಮ ಸಾಂಸ್ಕೃತಿಕ ಕೇಂದ್ರದ ಡ್ರಾಮಾ ಡಿಪ್ಲೊಮಾ ಆರಂಭದ ಪ್ರಯುಕ್ತ ಆದಿಮ ರಂಗ ಶಿಕ್ಷಣ ಕೇಂದ್ರದ ಬೋಧನಾ ಪ್ರಕ್ರಿಯೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, “ಕಲೆ ನಿಂತ ನೀರಲ್ಲ; ಸದಾ ಹರಿಯುತ್ತಿರುತ್ತದೆ, ಅತ್ಯಂತ ಸೃಜನಾತ್ಮಕವಾಗಿರುತ್ತದೆ. ಹಾಗೆ ಕ್ರಿಯಾಶೀಲರಾದಾಗ ಮಾತ್ರ ಯಾವುದೇ ಕಲಾವಿದ ಏನಾದರೂ ಸಾಧಿಸಲು ಸಾಧ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬದುಕಿ ಸಾಯಬೇಕು, ಸಾಯುವುದಕ್ಕೆ ಬದುಕಬಾರದು. ಬದುಕು ಬಹಳ ವಿಸ್ತಾರವಾದದು” ಎಂದು ನುಡಿದರು.

ದಲಿತ ಮುಖಂಡ ಸಿ ಎಂ ಮುನಿಯಪ್ಪ ಮಾತನಾಡಿ, “ನಟನಾ ಕಲಿಕೆಯ ಡಿಪ್ಲೊಮಾ ಕೋರ್ಸ್ ಮಾಡಲು ಹಲವರು ಬಂದಿದ್ದಾರೆ. ಆದಿಮದಂತಹ ಪರಿಸರದಲ್ಲಿ ಕಲಿಕೆ ಆರಂಭಿಸುತ್ತಿದ್ದಾರೆ. ನಾಳೆ ಯಾರು ಏನಾಗುವಿರೋ ಹೇಳಲು ಸಾಧ್ಯವಿಲ್ಲ. ರಂಗಭೂಮಿಯಲ್ಲಿ ಯಶಸ್ವಿ ಕಾಣಬೇಕೆಂದರೆ ಮೊದಲು ವೇದಿಕೆ ಭಯ ಬಿಡಬೇಕು. ಶ್ರದ್ಧೆಯಿಂದ ಕಲಿತರೆ ಯಾವುದೇ ಪಾತ್ರ ಮಾಡಲು ಕಷ್ಟವಾಗುವುದಿಲ್ಲ” ಎಂದರು.

ಆದಿಮ ಕಾರ್ಯದರ್ಶಿ ಹ.ಮಾ.ರಾಮಚಂದ್ರ ಆಶಯ ನುಡಿಗಳನ್ನಾಡಿ ರಂಗವಿದ್ಯಾರ್ಥಿಗಳಿಗೆ ಕೆಲವು ಸಲಹೆ, ಸೂಚನೆ ನೀಡಿದರು. ಚಿಂದಿ ಹಾಯಿಸುವ ಹುಡುಗರ ಕಾರ್ಯವೈಖರಿ ಉದಾಹರಣೆಯಾಗಿ ಕೊಟ್ಟದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಬೆಟ್ಟಹೊಸಪುರ ಅಂಗನವಾಡಿಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ

ಆದಿಮ ಅಧ್ಯಕ್ಷ ಎನ್ ಮುನಿಸ್ವಾಮಿ, “ಎಲ್ಲರ ಮಾತುಗಳಂತೆ ತಮ್ಮ ಕಲಿಕೆ ಕ್ರಮಬದ್ಧವಾಗಿ, ಕ್ರಿಯಾಶೀಲವಾಗಿ ಸಾಗಲಿ. ಜಗತ್ತಿನಲ್ಲಿ ಕಲೆ ಮತ್ತು ಪ್ರೀತಿ ಒಂದಾಗಬೇಕಿದೆ. 84 ಕೋಟಿ ಜೀವರಾಶಿಗಳಲ್ಲಿ ಮನುಷ್ಯನಿಗೆ ಮಾತ್ರ ದುಃಖ, ನೋವು, ಸಂಕಟ ಇದೆ. ಅದಕ್ಕಾಗಿ ಕಲೆ ಮತ್ತು ಪ್ರೀತಿ ಒಂದಾಗಬೇಕಿದೆ” ಎಂದರು.

ನೀಲಕಂಠೇಗೌಡ, ಪ್ರಾಂಶುಪಾಲ ಜಗದೀಶ್ ಆರ್ ಜಾಣಿ, ಎನ್‌ಎಸ್‌ಡಿ ಬಿ ಎಂ ಶ್ರೀನಿವಾಸ್, ಡಿ ಆರ್ ರಾಜಪ್ಪ, ಅಗ್ರಹಾರ ರಮೇಶ್, ಗ ನಾ ಅಶ್ವತ್, ಶ್ರೀನಿವಾಸ್ ತುರಂಡಹಳ್ಳಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...