ಕೋಲಾರ | ರೈತರ ಕೃಷಿ ಭೂಮಿ ತಂಟೆಗೆ ಸರ್ಕಾರ ಬರೋದು ಸರಿಯಲ್ಲ: ನಳಿನಿ ಗೌಡ

Date:

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ರೈತರ ಕೃಷಿ ಭೂಮಿ ಭೂಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸುವ ಜೊತೆಗೆ ಅಭಿವೃದ್ದಿ ಹೆಸರಿನಲ್ಲಿ ರೈತರ ಅಭಿಪ್ರಾಯವಿಲ್ಲದೆ ಕೃಷಿ ಭೂಮಿಯ ತಂಟೆಗೆ ಬರಬಾರದೆಂದು ಸರ್ಕಾರಕ್ಕೆ ಈ ರೈತ ಪರ ಗೆಲವು ಎಚ್ಚರಿಕೆ ಎಂದು ರೈತ ಸಂಘದ ಕೋಲಾರದ ಮಹಿಳಾ ಜಿಲ್ಲಾಧ್ಯಕ್ಷೆ ಎ ನಳಿನಿ ಗೌಡ ಅಭಿಪ್ರಾಯಪಟ್ಟರು.

“ಪ್ರೊ. ನಂಜುಂಡಸ್ವಾಮಿರವರ ಹೋರಾಟದ ಹಾದಿಯಲ್ಲಿ ಹೆಜ್ಜೆ ಹಾಕಿದ್ದ ಜನಪರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತ ಸಂಘದ ನಾಯಕರ ಪ್ರೇರಣೆಯ ಮಾತುಗಳೇ ಇಂದು ಅವರ ನಿರ್ಧಾರಕ್ಕೆ ಸ್ಪೂರ್ತಿಯಾಗಿವೆ. ರೈತರ ನೋವು ನಲಿವು ಜೊತೆಗೆ ಕೃಷಿ ಭೂಮಿ ಕಳೆದುಕೊಂಡರೆ ಮುಂದೆ ಅನುಭವಿಸುವ ರೈತರ ಸಂಕಷ್ಟಗಳನ್ನು ಅರಿತ ನಂತರವೇ ರೈತರ ಪರ ನಿಂತಿರುವುದು ರೈತ ಹೋರಾಟಕ್ಕಿರುವ ಶಕ್ತಿ” ಎಂದರು.

“ಪೂರ್ವಜರ ಕಾಲದಿಂದ ಕೃಷಿಯನ್ನೇ ನಂಬಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತಿದ್ದ ರೈತರ ಮೇಲೆ ಸರ್ಕಾರ ಕೈಗಾರಿಕೆ ಹೆಸರಿನಲ್ಲಿ ಸಾವಿರಾರು ಎಕರೆ ಭೂಸ್ವಾಧಿನ ಅದನ್ನೆ ನಂಬಿರುವ 13 ಹಳ್ಳಿಯ ಸಾವಿರಾರು ರೈತರನ್ನು ಬೀದಿಗೆ ತಳ್ಳುವ ಕೃಷಿ ಭೂಮಿ ಭೂಸ್ವಾದಿ ವಿರುದ್ದ ನಿರಂತರವಾಗಿ ಸರ್ಕಾರ ಹಾಗೂ ಕೆ.ಎ.ಐ.ಡಿ.ಬಿ ಸಂಸ್ಥೆ ವಿರುದ್ದ ಒಗ್ಗಟ್ಟಿನ ಹೋರಾಟಕ್ಕೆ ಮಣಿದು ಭೂಸ್ವಾಧಿನ ಸಂಪೂರ್ಣವಾಗಿ ಕೈಬಿಟ್ಟಿರುವುದು ಸ್ವಾಗತಾರ್ಹ” ಎಂದ ಅವರು, ಪ್ರೊ. ನಂಜುಂಡಸ್ವಾಮಿಯವರ ಹೋರಾಟದ ಹಾದಿಯಂತೆ ಈ ಹೋರಾಟ ಐತಿಹಾಸಿಕ ಗೆಲವಿಗೆ ಶ್ರಮಿಸಿದ ರಾಷ್ಟೀಯ ಮತ್ತು ರಾಜ್ಯ ರೈತ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ವಿಪತ್ತು ನಿರ್ವಹಣೆ ಯೋಜನೆ ಪರಿಷ್ಕರಣೆ-2025ರ ತರಬೇತಿ

“ಚನ್ನರಾಯಪಟ್ಟಣ ರೈತರ ಐತಿಹಾಸಿಕ ಹೋರಾಟವನ್ನು ಹತ್ತಿಕ್ಕಲು ಕೆಲವು ರಿಯಲ್ ಎಸ್ಟೇಟ್ ರೈತ ವಿರೋಧಿ ಕಾಂಗ್ರೆಸ್ ನಾಯಕರು ಭೂಮಿ ಕೊಡುತ್ತೇವೆ ಎಂಬ ಮಾಡಿದ ಷಡ್ಯಂತ್ರ ಫಲಿಸಲಿಲ್ಲ. ಇದಕ್ಕೆ ಕಾಲವೇ ಉತ್ತರ ಕೊಡುತ್ತದೆ” ಎಂದು ಭೂಗಳ್ಳರಿಗೆ ಎಚ್ಚರಿಕೆ ಸಂದೇಶ ನೀಡಿದರು.

“ರಾಜ್ಯದ ಯಾವುದೇ ಮೂಲೆಯಲ್ಲಿ ರೈತರಿಗೆ ತೊಂದರೆ ಆದರೆ ಜಿಲ್ಲೆಯ ರೈತ ಸಂಘ ನಿರಂತರವಾಗಿ ರೈತ ಪರ ನಿಲ್ಲುವ ಜೊತೆಗೆ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಭೂಸ್ವಾಧಿನ ವಿರುದ್ದ ಹೋರಾಟಕ್ಕೂ ಜಿಲ್ಲಾ ರೈತ ಸಂಘದಿಂದ ಬೆಂಬಲ ಸೂಚಿಸುವ ಜೊತೆಗೆ ಸರ್ಕಾರಗಳು ಇನ್ನು ಮುಂದೆ ಆದರೂ ಕೈಗಾರಿಕೆ ರಸ್ತೆ ಹಾಗೂ ಲೇಔಟ್ ನಿವೇಶನ ಹೆಸರಿನಲ್ಲಿ ಕೃಷಿ ಭೂಮಿ ಭೂಸ್ವಾಧಿನ ನಿಲ್ಲಿಸುವ ಮುಖಾಂತರ ರೈತರ ಪರ ನಿಲ್ಲಬೇಕು” ಎಂದು ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...