ಕೋಲಾರ | ಜ.17ರಂದು ಜಲಾಗ್ರಹ ಸಮಾವೇಶ

Date:

ಬಯಲು ಸೀಮೆಯ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ನದಿ, ನಾಲೆ, ಕರೆ, ಕಟ್ಟೆಗಳು ಬತ್ತಿಹೋಗಿವೆ. ಈ ಮಳೆಯಾಶ್ರಿತ ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಜನವರಿ 17ರಂದು ‘ಜಲಾಗ್ರಹ ಸಮಾವೇಶ’ ಆಯೋಜಿಸಲಾಗಿದೆ ಎಂದು ‘ಶಾಶ್ವತ ನೀರಾವರಿ ಹೋರಾಟ ಸಮಿತಿ’ ತಿಳಿಸಿದೆ.

ಸಮಾವೇಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಹೋರಾಟ ಸಮಿತಿ, “ಬರಪೀಡಿತ ಜಿಲ್ಲೆಗಳ ನೀರಿಯ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲು ಜನವರಿ 17ರಂದು ‘ಜಲಾಗ್ರಹ ಸಮಾವೇಶ’ ಹಮ್ಮಿಕೊಳ್ಳಲಾಗಿದೆ. ಸಮಾವೇಶವು ಜ.17ರ 11ಗಂಟೆಗೆ ಕೋಲಾರದ ಕಾಲೇಜು ಸರ್ಕಲ್‌ನಲ್ಲಿ ಆರಂಭವಾಗಲಿದೆ” ಎಂದು ತಿಳಿಸಿದೆ.

“ಬರಪೀಡಿತ ಜಿಲ್ಲೆಗಳ ಜನರು ಕುಡಿಯುವ ನೀರು ಮತ್ತು ವ್ಯವಸಾಯಕ್ಕಾಗಿ ಸುಮಾರು 1,500 ಅಡಿ ಆಳದವರೆಗೆ ಕೊಳವೆಬಾವಿಗಳನ್ನು ಕೊರೆಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಪರಿಣಾಮ, ಅಂತರ್ಜಲ ಪಾತಾಳಕ್ಕೆ ಕುಸಿದಿದೆ. ಅತ್ಯಂತ ಆಳದಲ್ಲಿ ಸಿಗುವ ನೀರು ಕುಡಿಯಲು ಮಾತ್ರವಲ್ಲದೆ ಕೃಷಿಗೂ ಯೋಗ್ಯವಿಲ್ಲ. ಈ ನೀರಿನ್ನು ಪ್ರತಿಷ್ಠಿತ ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳು ಪ್ರಯೋಗಾಲಯಕ್ಕೆ ಒಳಪಡಿಸಿದ್ದು, ನೀರಿನಲ್ಲಿ ಫ್ಲೋರೈಡ್ ಮತ್ತು ನೈಟ್ರೇಟ್‌ಗಳ ಜೊತೆಗೆ ಅಪಾಯಕಾರಿ ಯುರೇನಿಯಂ ಪತ್ತೆಯಾಗಿರುವುದು ದೃಢಪಟ್ಟಿದೆ. ಇದು ಕುಡಿಯುವ ನೀರು ಹಾಗೂ ಕೃಷಿ ಬೆಳೆಗಳನ್ನು ವಿಷಪೂರಿತಗೊಳಿಸುವುದರ ಜೊತೆಗೆ ಜನರು ಮತ್ತು ಜಾನುವಾರುಗಳನ್ನು ಮಾರಣಾಂತಿಕ ಖಾಯಿಲೆಗಳಿಗೆ ದೂಡುತ್ತಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ತಮಿಳುನಾಡು ಚುನಾವಣೆ | ದಳಪತಿ ವಿಜಯ್ ಸೆಳೆಯಲು ಖೆಡ್ಡಾ ತೋಡಿತೇ ಬಿಜೆಪಿ?

“ಬರಪೀಡಿತ ಜಿಲ್ಲೆಗಳ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನೆಪದಲ್ಲಿ 24 ಸಾವಿರ ಕೋಟಿ ಖರ್ಚು ಮಾಡುತ್ತಿರುವ ಅವೈಜ್ಞಾನಿಕ ಎತ್ತಿನಹೊಳೆ ಯೋಜನೆಯಿಂದ ಇಲ್ಲಿಯವರೆಗೂ ಒಂದು ಬೊಗಸೆ ಕುಡಿಯುವ ನೀರು ಪೂರೈಸಲಾಗಿಲ್ಲ. ಅಲ್ಲದೆ, ಅಂತರ್ಜಲ ಮರುಪೂರಣ ಮಾಡುವ ನೆಪದಲ್ಲಿ ಬೆಂಗಳೂರು ನಗರದ ಅರೆಸಂಸ್ಕರಿತ ತ್ಯಾಜ್ಯ ನೀರನ್ನು ಕೆಲವು ಆಯ್ದ ಕೆರೆಗಳಿಗೆ ಹರಿಸುತ್ತಿರುವುದರಿಂದ ಕುಡಿಯುವ ನೀರಿನ ಮೂಲಗಳು ಕಲುಷಿತಗೊಳ್ಳುತ್ತಿವೆ” ಎಂದು ಹೋರಾಟ ಸಮಿತಿ ವಿವರಿಸಿದೆ.

“ನಗರ ಪ್ರದೇಶಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಮರುಬಳಕೆ ಮಾಡಿಕೊಳ್ಳಲು 2013ರಲ್ಲಿ, ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯ, ಕೇಂದ್ರ ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಎಂಜಿನಿಯರಿಂಗ್ ಸಂಸ್ಥೆ (CPHEEO), ನವದೆಹಲಿ ಮತ್ತು ಜಪಾನ್ ಅಂತರರಾಷ್ಟ್ರೀಯ ಸಹಕಾರ ಸಂಸ್ಥೆ (JICA) ಜಂಟಿಯಾಗಿ ಕೇಂದ್ರಸರ್ಕಾರ ರೂಪಿಸಿರುವ ಮಾರ್ಗಸೂಚಿಗಳನ್ನು ಕರ್ನಾಟಕ ಸರ್ಕಾರವು ಪಾಲಿಸದೆ ಸಂಪೂರ್ಣವಾಗಿ ಉಲ್ಲಂಘಿಸಿ, ಬೆಂಗಳೂರಿನ ಹೆಬ್ಬಾಳ ನಾಗವಾರ ಕಣಿವೆ (ಎಚ್‌ಎನ್ ವ್ಯಾಲಿ) ಮತ್ತು ಕೋರಮಂಗಲ-ಚೆಲ್ಲಘಟ್ಟ ವ್ಯಾಲಿ (ಜೆಸಿ ವ್ಯಾಲಿ) ಮತ್ತು ವೃಷಭಾವತಿ ವ್ಯಾಲಿಗಳಿಂದ ಎರಡೇ ಹಂತಗಳಲ್ಲಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೆಲವು ಆಯ್ದ ನೀರಾವರಿ ಕೆರೆಗಳಿಗೆ ಹರಿಸುತ್ತಿದೆ. ಇದರಿಂದ ಅಂತರ್ಜಲ ವಿಷಪೂರಿತವಾಗಿ ಜನ ಮತ್ತು ಜಾನುವಾರುಗಳ ಜೀವಕ್ಕೆ ಸಂಚಕಾರ ಉಂಟಾಗಲಿದೆ” ಎಂದು ತಿಳಿಸಿದೆ.

“ಕೃಷ್ಣಾ-ಪೆನ್ನಾರ್ ಜೋಡಿಸುವ ಮೂಲಕ ಕೃಷ್ಣಾ ನದಿ ನೀರನ್ನು ಬಯಲು ಸೀಮೆಗೆ ತಂದು, ಬರಪೀಡಿತ ಜಿಲ್ಲೆಗಳ ನೀರಿನ ಬವಣೆಯನ್ನು ಶಾಶ್ವತವಾಗಿ ಪರಿಹರಿಸಬಹುದಾದರೂ ಸರ್ಕಾರಗಳು ಅದರ ಕಡೆ ಗಮನಹರಿಸುತ್ತಿಲ್ಲ” ಎಂದು ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...