ಕೋಲಾರ | ಕೆ ಬಿ ಹೊಸಹಳ್ಳಿಯಲ್ಲಿ ಬಂಡೆ ಬ್ಲಾಸ್ಟ್ ನಿಲ್ಲಿಸುವಂತೆ ಪ್ರಾಂತ ರೈತ ಸಂಘ ಆಗ್ರಹ

Date:

ಕೋಲಾರ ತಾಲೂಕಿನ ಕೆ ಬಿ ಹೊಸಹಳ್ಳಿ ಭಾಗದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಬಂಡೆಗಳನ್ನು ಓವರ್ ಬ್ಲಾಸ್ಟ್ ಮಾಡುವುದರಿಂದ ಮನೆಗಳು ಬಿರುಕು ಬಿಟ್ಟು, ನೆರೆ ಹೊಡೆದು ತೊಂದರೆಯಾಗುತ್ತಿರುವುದರಿಂದ ಬಂಡೆ ಬ್ಲಾಸ್ಟ್ ಮಾಡುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕೋಲಾರ ಜಿಲ್ಲಾ ಅಧ್ಯಕ್ಷ ಟಿ ಎಂ ವೆಂಕಟೇಶ್ ಮಾತನಾಡಿ, “ನರಸಾಪುರ ಹೋಬಳಿಯ ಕೆ ಬಿ ಹೊಸಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ 110, 130 ರಲ್ಲಿ ಬಂಡೆಗಳನ್ನು ಬ್ಲಾಸ್ಟ್ ಮಾಡಲು ನೀಡಿರುವ ನಿಯಮಗಳನ್ನು ಗಾಳಿಗೆ ತೂರಿ ಮನಸೋ ಇಚ್ಛೆ ರಾತ್ರಿ ಸಮಯದಲ್ಲಿ ಓವ‌ರ್ ಬ್ಲಾಸ್ಟ್ ಮಾಡುವುದರಿಂದ ಆ ಭಾಗದ ಗ್ರಾಮದಲ್ಲಿ ಜನರು ನೆಮ್ಮದಿಯಿಂದ ಜೀವನ ಮಾಡಲು ಆಗುತ್ತಿಲ್ಲ. ಬಂಡೆಗಳನ್ನು ಬ್ಲಾಸ್ಟ್ ಮಾಡುವುದರಿಂದ ಮನೆಗಳು ಬಿರುಕು ಬಿಟ್ಟು ಮಳೆಗಾಲದಲ್ಲಿ ಮನೆಗೆಳು ಸೋರುವ ಮತ್ತು ಬೀಳುವ ಅಪಾಯದ ಪರಿಸ್ಥಿತಿಗಳು ನಿರ್ಮಾಣವಾಗಿರುತ್ತಿವೆ. ಈಗಾಗಲೇ ಮನೆಗಳಿಗೆ ಹಾಕಿರುವ ಕೂಚ ದೂಲಗಳು ನೆರೆ ಬಿಟ್ಟಿರುವುದರಿಂದ ರಾತ್ರಿ ಸಮಯದಲ್ಲಿ ನೆಮ್ಮದಿಯಾಗಿ ನಿದ್ದೆ ಮಾಡಲು ಕೂಡ ಆಗುವುದಿಲ್ಲ. ಬಂಡೆಯ ಪಕ್ಕದಲ್ಲಿ ಅರಣ್ಯ ಇದ್ದು, ಈ ಅರಣ್ಯದಲ್ಲಿರುವ ಪ್ರಾಣಿ ಪಕ್ಷಿಗಳಿಗೆ ತೊಂದರೆಯಾಗುತ್ತಿದೆ ಹಾಗೂ ಬಂಡೆಯ ಕಲ್ಲಿನ ದೂಳಿನಿಂದ ಬಂಡೆಯ ಸುತ್ತ ಮುತ್ತಲೂ ರೈತರು ಯಾವುದೇ ರೀತಿಯ ತರಕಾರಿ ಮತ್ತು ರೇಷ್ಮೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ದನ-ಕರುಗಳ ಮೇವಿಗೂ ತುಂಬಾ ತೊಂದರೆಯಾಗುತ್ತಿದೆ” ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

WhatsApp Image 2025 07 24 at 4.01.29 PM

ಸಂಘಟನೆಯ ಜಿಲ್ಲಾ ಪ್ರಧಾನ‌ ಕಾರ್ಯದರ್ಶಿ ಪಾತಕೋಟೆ ನವೀನ್ ಕುಮಾರ್ ಮಾತನಾಡಿ, “ಬಂಡೆ ಬ್ಲಾಸ್ಟ್‌ ಮಾಡಿ ತೆಗೆಯುವ ಕಲ್ಲುಗಳನ್ನು ಟಿಪ್ಪರ್‌ಗಳ ಮೂಲಕ ಅಗತ್ಯಕ್ಕಿಂತ ಹೆಚ್ಚಿನ ಭಾರ ತುಂಬಿಸಿ ಊರಿನ ಮಧ್ಯೆ ಸಾಮಾನ್ಯ ರಸ್ತೆಗಳಲ್ಲಿ ಸಾಗಿಸುತ್ತಾರೆ. ಇದರಿಂದ ರಸ್ತೆಗಳು ಹಾಳಾಗುತ್ತಿವೆ. ಊರಿನ ಒಳಭಾಗದಲ್ಲಿ ರಸ್ತೆಯ ಪಕ್ಕದಲ್ಲಿ ಶಾಲೆಯಿದ್ದು, ಸಣ್ಣ ಮಕ್ಕಳು ಮಹಿಳೆಯರು ಹೆಚ್ಚು ಒಡಾಡುತ್ತಾರೆ. ಅತೀ ವೇಗದಲ್ಲಿ ತುಂಬಿದ ಟಿಪ್ಟರ್‌ಗಳು ಒಡಾಡುವುದರಿಂದ ಜನ ಭಯಬೀತರಾಗಿ ಬದುಕುವ ಪರಿಸ್ಥಿತಿ ಇದೆ.
ಈಗಾಗಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಿಗೆ ಸಂಘಟನೆ ಮತ್ತು ಗ್ರಾಮಸ್ಥರಿಂದ ಎರಡು ಮೂರು ಬಾರಿ ಮನವಿ ಪತ್ರ ನೀಡಿದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಮತ್ತು ಕ್ರಷರ್ ಮಾಲೀಕರನ್ನು ವಿಚಾರಣೆ ಮಾಡಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಓವ‌ರ್ ಬ್ಲಾಸ್ಟ್‌ಗೆ ಕಡಿವಾಣ ಹಾಕಿ, ಗ್ರಾಮದ ಜನರು ನಿರ್ಭೀತಿಯಿಂದ ಜೀವನ ಮಾಡಲು ಅನುವು ಮಾಡಿಕೊಡಬೇಕೆಂದು” ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ಮನೆಯಲ್ಲೇ ಕೆಮಿಕಲ್ ಮಿಶ್ರಿತ ಹಾಲು ತಯಾರಿ; ದೂರು ದಾಖಲು

ಪ್ರತಿಭಟನೆಯ ನೇತೃತ್ವವನ್ನು ಸಂಘಟನೆಯ ತಾಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮುಖಂಡರಾದ ವಿ.ವೆಂಕಟೇಶಪ್ಪ, ಕೆ ಎಂ ನಾರಾಯಣಸ್ವಾಮಿ, ಚಿನ್ನಮ್ಮ, ಅಪ್ಪಯ್ಯಣ್ಣ, ಮಂಜುಳಾ, ರಾಜೇಂದ್ರ, ಹರೀಶ್, ವಿಜಯ ರಾಘವರೆಡ್ಡಿ, ಮಂಜುನಾಥ್, ಚಂದ್ರಶೇಖರ್, ಚಂದ್ರಪ್ಪ, ವೆಂಕಟೇಶರೆಡ್ಡಿ, ನಾರಾಯಣರೆಡ್ಡಿ, ಶೈಲಜಾ, ಪ್ರಭಮ್ಮ, ರಾಜಮ್ಮ ಮುಂತಾದವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...