ಕೋಲಾರ | ನಾಪತ್ತೆಯಾಗಿದ್ದ ಟೊಮೆಟೊ ಲಾರಿ ಪತ್ತೆ; 21 ಲಕ್ಷ ರೂ.ಗಳೊಂದಿಗೆ ಚಾಲಕ ಪರಾರಿ

Date:

ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆಯಾಗಿದೆ. ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಬೇಕಿದ್ದ ಲಾರಿ ಗುಜರಾತ್​ನ ಅಹಮದಾಬಾದ್​ನಲ್ಲಿ ಸಿಕ್ಕಿದ್ದು, ಲಾರಿ ಚಾಲಕ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಚಾಲಕ ಅನ್ವರ್​ ಲಾರಿಯಲ್ಲಿ ಅಳವಡಿಸಿದ್ದ ಜಿಪಿಎಸ್ ಕಿತ್ತೆಸೆದು ಅಹಮದಾಬಾದ್​ಗೆ ಚಲಾಯಿಸಿಕೊಂಡು ಹೋಗಿದ್ದಾನೆ. ಬಳಿಕ ಅಲ್ಲಿ ಟೊಮೆಟೊವನ್ನು ಅರ್ಧ ದರಕ್ಕೆ ಮಾರಾಟ ಮಾಡಿದ್ದು, ಇದೀಗ ತಲೆಮರೆಸಿಕೊಂಡಿದ್ದಾನೆ.

ಮೆಹಕ್ ಟ್ರಾನ್ಸ್ ಪೋರ್ಟ್ ಮಾಲೀಕ ಸಾದಿಕ್, ಕಳೆದ ರಾತ್ರಿಯೇ ಅಹಮದಾಬಾದ್​ನತ್ತ ಹೊರಟ್ಟಿದ್ದು, ಲಾರಿ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಟೊಮೆಟೊ ಮಾರಾಟದಿಂದ ಬಂದ ಹಣದೊಂದಿಗೆ ನಾಪತ್ತೆಯಾಗಿರುವ ಚಾಲಕ ಅನ್ವರ್ ವಿರುದ್ಧ ಅಹಮದಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ನಿರ್ಧರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋಲಾರದಿಂದ ಟೊಮೆಟೋ ತುಂಬಿಕೊಂಡು ಜೈಪುರಕ್ಕೆ ಹೊರಟಿದ್ದ ಲಾರಿ ನಾಪತ್ತೆ!

ಟೊಮೆಟೊ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಜಮೀನಿನಲ್ಲಿದ್ದ ಬೆಳೆ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಇದರ ನಡುವೆ ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ಮೌಲ್ಯದ ಟೊಮೆಟೊ ಹೊತ್ತು ರಾಜಸ್ಥಾನ ಕಡೆ ಹೊರಟಿದ್ದ ಲಾರಿ ನಾಪತ್ತೆಯಾಗಿತ್ತು. ಕೋಲಾರ ಎಪಿಎಂಸಿ ಮಾರುಕಟ್ಟೆಯ ಮುನಿರೆಡ್ಡಿ ಎಂಬುವರು ಸುಮಾರು 21 ಲಕ್ಷ ರೂ. ಮೌಲ್ಯದ ಸುಮಾರು 750 ಕ್ರೇಟ್‌ (11 ಟನ್‌) ಟೊಮೆಟೊವನ್ನು ಜು.27ರಂದು ರಾಜಸ್ಥಾನದ ಜೈಪುರಕ್ಕೆ ಮೆಹತ್‌ ಟ್ರಾನ್ಸ್‌ಪೋರ್ಟ್ ಗೆ ಸೇರಿದ ಲಾರಿಯ ಮೂಲಕ ಕಳುಹಿಸಿಕೊಟ್ಟಿದ್ದರು. ಈ ಸಂಬಂಧ ಕೋಲಾರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...