ಕೋಲಾರ | ಸಂಸದರು ಯುವಕರಲ್ಲಿ ಹಿಂದು ದ್ವೇಷದ ಬೀಜ ಬಿತ್ತಿ ದಿಕ್ಕು ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ

Date:

ಬೀದಿ ರಂಪಾಟ ಮಾಡಿದ ತಪ್ಪನ್ನು ಮರೆ ಮಾಚಿಕೊಳ್ಳಲು ವಿನಾಕಾರಣ ಕಾಂಗ್ರೆಸ್ ಶಾಸಕರ ವಿರುದ್ಧ ಆರೋಪ ಮಾಡುತ್ತಿರುವ ಸಂಸದ ಎಸ್ ಮುನಿಸ್ವಾಮಿ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಕಾಂಗ್ರೆಸ್‍ನಿಂದಲೂ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ ಲಕ್ಷ್ಮಿನಾರಾಯಣ ಎಚ್ಚರಿಕೆ ನೀಡಿದರು.

ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುನಿಸ್ವಾಮಿ ಸಂಸದರಾಗಿ ಆಯ್ಕೆಯಾಗಿ 4 ವರ್ಷ ಪೂರೈಸಿದ್ದಾರೆ. ರೈತರು, ಮಹಿಳೆಯರು ಮತ್ತು ವಿದ್ಯಾರ್ಥಿಗಳ ಪರ ಯಾವತ್ತೂ ಹೋರಾಟ ಮಾಡಲಿಲ್ಲ. ಈಗ ವೈಯಕ್ತಿಕ ಕಾರಣಕ್ಕೆ ಬಿಜೆಪಿಯನ್ನು ಬಳಕೆ ಮಾಡಿಕೊಂಡಿದ್ದು, ಅನುಚಿತವಾಗಿ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದರು.

“ಯುವಕರಲ್ಲಿ ಹಿಂದುತ್ವ ದ್ವೇಷದ ಬೀಜ ಬಿತ್ತಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಮೆದುಳಿಗೂ ಹಾಗೂ ನಾಲಿಗೆಗೂ ಸಂಪರ್ಕವೇ ಇಲ್ಲ. ಮತ್ತೆ ಅಧಿಕಾರಕ್ಕೆ ಬರಲು ಇಂಥ ಗೊಂದಲ ಸೃಷ್ಟಿಸುತ್ತಿದ್ದಾರೆ‌” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನತಾ ದರ್ಶನದಲ್ಲಿ ಮುನಿಸ್ವಾಮಿ ನಡವಳಿಕೆ ನಗೆಪಾಟಲಿಗೀಡಾಗಿದೆ. ಸಾರ್ವಜನಿಕರ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಯಾಗಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಅರಿವೇ ಅವರಿಗೆ ಇಲ್ಲ.  ಇಂತಹ ಸಂಸದರು ಬಿಜೆಪಿಗೆ ಕಳಂಕ” ಎಂದು ಆರೋಪಿಸಿದರು.

“ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಕೆ ಎಚ್ ಮುನಿಯಪ್ಪ, ರಮೇಶ್‌ ಕುಮಾರ್‌ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ಮುಖಂಡರುಗಳಾದ ಸಿ ಟಿ ರವಿ, ಮುನಿಸ್ವಾಮಿ, ಸದಾನಂದಗೌಡ, ಎನ್‌ ರವಿ ಕುಮಾರ್‌ ಆರೋಪ ಮಾಡಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ಏಕೆ ತನಿಖೆ ನಡೆಸಿ ಕ್ರಮ ವಹಿಸಲಿಲ್ಲ?” ಎಂದು ಕಿಡಿಕಾರಿದರು.

“ಮುನಿಸ್ವಾಮಿ ಅವರನ್ನು ಕೋಲಾರದ ಜನ ಎಂದಿಗೂ ಕ್ಷಮಿಸುವುದಿಲ್ಲ, ಬಿಜೆಪಿ ಅಧಿಕಾರದಲ್ಲಿ ಇದ್ದಾಗ ನಾರಾಯಣ ಇಲ್ಲಿಗೆ ವರ್ಗಾವಣೆಯಾಗಿ ಬಂದರೇ ಹೊರತು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಲ್ಲ” ಎಂದರು.

ಜಿಲ್ಲಾ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್‌ ಮಾತನಾಡಿ, “‘ಕಾಂಗ್ರೆಸ್ ಶಾಸಕರನ್ನು ಭೂಗಳ್ಳರೆಂದು ಹೇಳಿಕೆ ನೀಡಿ ಕಾರ್ಯಕ್ರಮದಲ್ಲಿ ಗೊಂದಲ ಸೃಷ್ಟಿಯಾಗಲು ಮುನಿಸ್ವಾಮಿ ಅವರೇ ಕಾರಣರಾದರು. ಆ ಸಂದರ್ಭದಲ್ಲಿ ಉಂಟಾದ ಗದ್ದಲವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ ನಾರಾಯಣ ಬಹಳ ಮುತುವರ್ಜಿಯಿಂದ ನಿಭಾಯಿಸಿದ್ದಾರೆ. ಇಂಥ ಅಧಿಕಾರಿಯನ್ನು ಕಾಂಗ್ರೆಸ್ ಏಜೆಂಟ್‌ ಎಂಬುದಾಗಿ ಹೇಳಿರುವ ಸಂಸದರಿಗೆ ನಾಚಿಕೆಯಾಗಬೇಕು. ಬಿಜೆಪಿಯವರ ರೀತಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಂಸ್ಕೃತಿ ಕಾಂಗ್ರೆಸ್‍ಗೆ ಇಲ್ಲ” ಎಂದು ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪತ್ನಿಗೆ ಮಾತ್ರವಲ್ಲ, ತಂದೆಗೂ ವಿಮೆ ಹಣ ನೀಡುವಂತೆ ಗ್ರಾಹಕ ಆಯೋಗ ತೀರ್ಪು

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಕೆ ಜಯದೇವ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯ್ ಶಂಕರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಕೆಪಿಸಿಸಿ ಒಬಿಸಿ ಕಾರ್ಯದರ್ಶಿ ಮಂಜುನಾಥ್, ಡಿಸಿಸಿ ಬ್ಯಾಂಕ್‌ ನಾಮನಿರ್ದೇಶಿತ ನಿರ್ದೇಶಕ ಎಲ್ ಎ ಮಂಜುನಾಥ್, ಬಿ ಟಿ ಮಂಜುನಾಥ್, ರಾಮಯ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...