ಕೋಲಾರ | 106 ಅಕ್ರಮ ವೈದ್ಯಕೀಯ ಕ್ಲಿನಿಕ್‌ಗಳು ಪತ್ತೆ; ಕೂಡಲೇ ತೆರವುಗೊಳಿಸಲು ಜಿಲ್ಲಾಧಿಕಾರಿ ಆದೇಶ

Date:

ಅನಧಿಕೃತವಾಗಿ ಸ್ಥಾಪಿಸಿರುವ ವೈದ್ಯಕೀಯ ಕ್ಲಿನಿಕ್‌ಗಳು ಮತ್ತು ಅನಧಿಕೃತ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕೆಪಿಎಂಇ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಕೋಲಾರ ಜಿಲ್ಲೆಯಲ್ಲಿ 106 ಅಕ್ರಮ ವೈದ್ಯಕೀಯ ಕ್ಲಿನಿಕ್‌ಗಳನ್ನು ಗುರುತಿಸಲಾಗಿದ್ದು, ಮುಂದಿನ 15 ದಿನಗಳೊಳಗೆ ಅನಧಿಕೃತ ಕ್ಲಿನಿಕ್‌ಗಳನ್ನು ತೆರವುಗೊಳಿಸಬೇಕು” ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ್ ಅವರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಲೂಕು ಆರೋಗ್ಯಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ನಡೆಸಲಾಗುತ್ತಿರುವ ಅಕ್ರಮ ಕ್ಲಿನಿಕ್‌ಗಳು, ಅನಧಿಕೃತ ಸ್ಕ್ಯಾನಿಂಗ್ ಸೆಂಟರ್‌ಗಳ ಬಗ್ಗೆ ವಿವರವಾದ ಮಾಹಿತಿಯನ್ನು ಕಾಲಕಾಲಕ್ಕೆ ಜಿಲ್ಲಾ ಆರೋಗ್ಯಾಧಿಕಾರಿಗೆ ನೀಡಬೇಕು” ಎಂದು ತಿಳಿಸಿದರು.

“ಡಿಎಚ್‌ಒ ಅವರು ವಿಳಂಬ ನೀತಿಯನ್ನು ಅನುಸರಿಸದೇ ಸೀಜರ್‌ಗಳೊಂದಿಗೆ ಕ್ಷಿಪ್ರ ಗತಿಯಲ್ಲಿ ರೈಡ್‌ ನಡೆಸಿ ಅನಧಿಕೃತ ಸಂಸ್ಥೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳಿಗೆ ಪೂರಕ ದಾಖಲೆಗಳ ಸಾಕ್ಷಿಯನ್ನು ಹುಡುಕದೇ ವಿಡಿಯೋ ಚಿತ್ರೀಕರಣದಂತಹ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಪೂರಕ ಸಾಕ್ಷಾಧಾರಗಳನ್ನು ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಲ್ಲಿ ಅನಧಿಕೃತ ಸಂಸ್ಥೆಗಳನ್ನು ಮುಚ್ಚುವ ಇಚ್ಛಾಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಯಾವುದೇ ಮುಲಾಜಿಗೆ ಒಳಪಡದೇ ತಮ್ಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಬೇಕು” ಎಂದು ಸಲಹೆ ನೀಡಿದರು.

“ಅನಧಿಕೃತ ಕ್ಲಿನಿಕ್‌ಗಳು ಕಂಡು ಬಂದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮೊದಲು ವೈದ್ಯರ ಮತ್ತು ವೈದ್ಯಕೀಯ ಸಂಸ್ಥೆಯ ಅಥವಾ ವೈದ್ಯಕೀಯ ಉಪಕರಣಗಳ ಬಗ್ಗೆ ಸೂಕ್ತ ದಾಖಲೆಗಳನ್ನು ಒದಗಿಸುವಂತೆ ನೋಟೀಸ್ ನೀಡಬೇಕು. ನಿಗಧಿತ ಅವಧಿಯೊಳಗೆ ಪೂರಕ ದಾಖಲೆಗಳನ್ನು ಸಲ್ಲಿಸದಿರುವವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಶಿಫಾರಸು ಮಾಡಬೇಕು. ಈ ಮೂಲಕ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ಮಾತ್ರ ಲಭ್ಯವಾಗುವಂತೆ ನೋಡಿಕೊಳ್ಳುವುದು ಆರೋಗ್ಯ ಇಲಾಖೆಯ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ನೌಕರಿ ಕೊಡಿಸುವ ನೆಪದಲ್ಲಿ ವಂಚನೆ; ಜಾಗೃತಿ ವಹಿಸಲು ಎಸ್‌ಪಿ ಸೂಚನೆ

“ಕೆಪಿಎಂಇ ಕಾಯ್ದೆಯಡಿ ಜಿಲ್ಲಾ ಸಕ್ಷಮ ಪ್ರಾಧಿಕಾರದ ಎದುರು ಅನಧಿಕೃತ ಸಂಸ್ಥೆಗಳ ಮುಖ್ಯಸ್ಥರು ಹಾಜರಾಗಿ ಸೂಕ್ತ ದಾಖಲೆಗಳನ್ನು ಸಲ್ಲಿಸಿ ತಮ್ಮ ಕ್ಲಿನಿಕ್‌ಗಳನ್ನು ಸಕ್ರಮಗೊಳಿಸಿಕೊಳ್ಳಲು ಸರ್ಕಾರವು ಅವಕಾಶ ಕಲ್ಪಿಸಿದ್ದಾಗ್ಯೂ ಹಲವು ಸಂಸ್ಥೆಗಳು ಈವರೆಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ನಕಲಿ ಕ್ಲಿನಿಕ್‌ಗಳು ಹಾಗೂ ನಕಲಿ ವೈದ್ಯರ ಹಿಡಿತದಿಂದ ಜಿಲ್ಲೆಯನ್ನು ಆದಷ್ಟು ಬೇಗ ಮುಕ್ತಗೊಳಿಸುವುದರ ಜೊತೆಗೆ ಸಾರ್ವಜನಿಕರ ಜೀವಗಳ ಸಂರಕ್ಷಣೆಗಾಗಿ ಜಿಲ್ಲಾಡಳಿತ ಸದಾ ಬದ್ಧವಾಗಿರುತ್ತದೆ” ಎಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಐಎಂಎ ಅಧ್ಯಕ್ಷ ಡಾ. ನಾರಾಯಣಸ್ವಾಮಿ, ಡಾ. ವಿಜಯಕುಮಾರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ನಾರಾಯಣಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದನ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಪ್ರಸನ್ನ ಕುಮಾರ್ ಸೇರಿದಂತೆ ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...