ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

Date:

ಕೋಲಾರ ತಾಲೂಕಿನ ನರಸಾಪುರ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಅವ್ಯವಸ್ಥೆಯಿಂದ ಗ್ರಾಮದ ಮುಖ್ಯರಸ್ತೆ ಕೆಸರುಗದ್ದೆಯಂತಾಗಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ.

“ನರಸಾಪುರ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾರ್ಯ ನಿರ್ವಹಣೆಯಿಂದ ತೀವ್ರ ತೊಂದರೆಯಾಗುತ್ತಿದೆ. ನಿರಂತರವಾಗಿ ಸುರಿದ ಭಾರೀ ಮಳೆಗೆ ಮುಖ್ಯ ರಸ್ತೆಗಳೆಲ್ಲ ಹದಗೆಟ್ಟಿದ್ದು, ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ರಸ್ತೆಗಳಲ್ಲಿ ವಾಹನಗಳು ಸುರಕ್ಷಿತವಾಗಿ ಓಡಾಡಲು ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.

ನರಸಾಪುರ ಗ್ರಾಮದ ಮುಖಂಡ ಎನ್ ಲೊಕೇಶ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮದ ಮುಖ್ಯರಸ್ತೆಯ ಅಗಲೀಕರಣದ ಕಾಮಗಾರಿಯ ಗುತ್ತಿಗೆ ಪಡೆದಂತಹ ಗುತ್ತಿಗೆದಾರನ ವಿಳಂಬ ಕಾಮಗಾರಿಯಿಂದ ನರಸಾಪುರ ಗ್ರಾಮದ ಒಳಗಿನ ಮುಖ್ಯ ರಸ್ತೆಯು ತೀರಾ ಕೆಸರು ಗದ್ದೆಯಂತಾಗಿದ್ದು, ವಾಹನಗಳು ಸುರಕ್ಷಿತವಾಗಿ ಸಂಚರಿಸುವುದಕ್ಕಂತೂ ತುಂಬಾ ಕಷ್ಟವಾಗಿದೆ. ಇದಕ್ಕೆ ಗುತ್ತಿಗೆದಾರನು ಅನುಸರಿಸುತ್ತಿರುವ ಮಂದಗತಿಯೇ ಕಾರಣವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಸ್ತೆಯ ಅಗಲೀಕರಣದ ಕಾಮಗಾರಿಯ ಕೆಲಸದ ಮಧ್ಯೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಎಲಕ್ಕಿಂತ ಹಳ್ಳ ಕೊಳ್ಳಗಳೇ ಜಾಸ್ತಿಯಾಗಿದ್ದು, ಮಳೆ ನೀರು ತುಂಬಿ ರಸ್ತೆಗಳು ಸಾರ್ವಜನಿಕರು ಓಡಾಡಲು ಕಷ್ಟವಾಗಿದೆ. ಕಾಮಗಾರಿಯನ್ನು ಇತ್ತೀಚೆಗೆ ಪ್ರಾರಂಭ ಮಾಡಿದ್ದು, ಕಾಮಗಾರಿ ವಿಳಂಬ ರೀತಿಯಲ್ಲಿ ಸಾಗುತ್ತಿದೆ. ಇದಕ್ಕೆ ಸಾರ್ವಜನಿಕರು ತುಂಬಾ ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಬೇಗನೆ ಪೂರ್ಣಗೊಳಿಸುವ ಕ್ರಮವಹಿಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಅಂಗವಿಕಲ ಸಹೋದರಿಯರಿಗೆ ಬೇಕಿದೆ ಸಹಾಯಹಸ್ತ!

ಗ್ರಾಮದ ಮುಖಂಡ ಅವಿನಾಶ್ ಮಾತನಾಡಿ, “ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ಬಸ್ ನಿಲ್ದಾಣವನ್ನು ನೆಲಸಮ ಮಾಡಿ ಪ್ರಯಾಣಿಕರಿಗೆ ತಂಗುದಾಣವಿಲ್ಲದೆ ಕೆಸರು ಗದ್ದೆಯಂತಾಗಿರುವ ರಸ್ತೆಯ ಮಧ್ಯೆ ನಿಂತು ಬಸ್‌ಗಳಿಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಪ್ರಯಾಣಿಕರು, ವೃದ್ಧರು ಮತ್ತು ವಿಶೇಷ ಚೇತನರಿಗೆ ಬಸ್ ನಿಲ್ದಾಣವಿಲ್ಲದೆ ಮಳೆ ಬಿಸಿಲು ಗಾಳಿ ಎನ್ನದೆ ರಸ್ತೆಯ ಮಧ್ಯೆ ನಿಲ್ಲಲು ಪ್ರಯಾಣಿಕರು ಹರಸಾಹಸ ಪಡುತ್ತಿದ್ದಾರೆ” ಎಂದು ಆರೋಪಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...