ಕೋಲಾರ | ನೈಸ್ ಕಂಪನಿ ಕಾಮಗಾರಿ ನಡೆಸದಂತೆ ಪ್ರಾಂತ ರೈತ ಸಂಘ ಒತ್ತಾಯ

Date:

ರಾಜ್ಯ ಸರ್ಕಾರದ ವತಿಯಿಂದ ಬಿಎಂಐಸಿ ನೈಸ್ ಕಂಪನಿಗೆ ಯಾವುದೇ ರಸ್ತೆ ನಿರ್ಮಾಣ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಿ ಹಾಗೂ ಅಕ್ರಮ-ಕಾನೂನು ಬಾಹಿರ ರಸ್ತೆ ಕಾಮಗಾರಿ ವಿರುದ್ಧ ಪ್ರತಿಭಟಿಸುವ ರೈತರಿಗೆ ಹಾಗೂ ರೈತ ಮುಖಂಡರಿಗೆ ರಕ್ಷಣೆ ನೀಡಲು ಆಗ್ರಹಿಸಿ ಕೋಲಾರ ನಗರದ ಉಪ ತಹಶೀಲ್ದಾರ್ ಅವರಿಗೆ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಕುರಿತು ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, “ಸುಮಾರು 1997ರಲ್ಲಿ ಕರ್ನಾಟಕ ಸರ್ಕಾರ ನೈಸ್ ಕಂಪನಿ ಜೊತೆ ಕ್ರಿಯಾ ಒಪ್ಪಂದದಂತೆ 111 ಕಿ.ಮೀ ಬೆಂಗಳೂರಿನಿಂದ ಮೈಸೂರಿನವರೆಗೆ ವೇಗದ ಹೆದ್ದಾರಿ ರಸ್ತೆ, ಬೆಂಗಳೂರಿನಲ್ಲಿ 41 ಕಿ.ಮೀ. ಪೆರಿಪೆರಲ್ ರಸ್ತೆ, 9.8 ಕಿ.ಮೀ. ಲಿಂಕ್ ರಸ್ತೆ ಹಾಗೂ ನಿಯೋಜಿತ ಸ್ಥಳಗಳಲ್ಲಿ ಐದು ಟೌನ್ ಶಿಪ್ ಗಳನ್ನು ನಿರ್ಮಾಣ ಮಾಡಬೇಕಾಗಿತ್ತು. ಆದರೆ ಈ ಒಪ್ಪಂದ ಆಗಿ 28 ವರ್ಷಗಳೇ ಕಳೆದಿದ್ದರೂ ಈ ಯೋಜನೆ ಕಾರ್ಯಗತವಾಗಿಲ್ಲ. ಆದರೂ ಈ ಯೋಜನೆಗೆ ಗುರುತಿಸಲಾಗಿದ್ದ ರೈತರ ಭೂ ಸ್ವಾಧೀನವನ್ನು ರದ್ದುಪಡಿಸದೇ ಹಾಗೇಯೆ ಮುಂದುವರೆಸಿಕೊಂಡು ಬರುತ್ತಿರುವುದು ಅತ್ಯಂತ ಯಾತನೆಯನ್ನು ಮತ್ತು ಅನ್ಯಾಯವನ್ನು ಈ ಯೋಜನಾ ವ್ಯಾಪ್ತಿಯ ರೈತರು ಅನುಭವಿಸುವಂತೆ ಮಾಡಿದ್ದಾರೆ” ಎಂದು‌ ಆರೋಪಿಸಿದರು.

“ನೈಸ್ ಕಂಪನಿಯ ಪಾಲುದಾರಿಕೆ ಕುರಿತು ರಾಜ್ಯ ಸರ್ಕಾರ ಸಲಹಾ ಸಮಿತಿ ನೇಮಿಸಿರುವ ಹಿನ್ನಲೆಯಲ್ಲಿ, ಕಳಂಕಿತ ನೈಸ್ ಕಂಪನಿಗೆ ಯಾವುದೇ ರೀತಿಯ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಬೇಕು ಬಿಎಂಐಸಿ ಯೋಜನೆ ಹಾಗೂ ನೈಸ್ ಕಂಪನಿ ಪಾಲುದಾರಿಕೆಯನ್ನು ರದ್ದುಗೊಳಿಸಬೇಕು ರೈತರು ಹಾಗೂ ರೈತ ಮುಖಂಡರ ಮೇಲೆ ನಿಂದನೆ, ಬೆದರಿಕೆ ಮುಂತಾದ ನೈಸ್ ಕಂಪನಿ ದೌರ್ಜನ್ಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ನೈಸ್ ಆಕ್ರಮಗಳ ವಿರುದ್ಧದ ಹೋರಾಟಗಾರ ರೈತ ನಾಯಕ ಎನ್. ವೆಂಕಟಚಲಯ್ಯರವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಒತ್ತಾಯಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೈಸ್ ಕಂಪನಿಯ ಭೂ ಸ್ವಾಧೀನ ಹಾಗೂ ರಸ್ತೆ ನಿರ್ಮಾಣದ ಹಗರಣಗಳನ್ನು ತನಿಖೆಗೆ ಒಳಪಡಿಸಿ ಶಿಕ್ಷಿಸಬೇಕು.ರೈತರ ಒಪ್ಪಿಗೆ ಇಲ್ಲದ, ರೈತರ ಗಮನಕ್ಕೆ ಬಾರದಂತೆ ಭೂ ಸ್ವಾಧೀನ ಮಾಡಿರುವ ಎಲ್ಲಾ ಪ್ರಕರಣಗಳನ್ನು ರದ್ದುಪಡಿಸಬೇಕು. ನೈಸ್ ಅಕ್ರಮ ಕುರಿತ ಸದನ ಸಮಿತಿ ಮತ್ತು ಸಂಪುಟ ಉಪಸಮಿತಿಗಳ ಶಿಪಾರಸ್ಸುಗಳನ್ನು ಜಾರಿಗೊಳಿಸಬೇಕು ಕೆಐಎಡಿಬಿ ಹಾಗೂ ನೈಸ್ ಕಂಪನಿಯ ಅಕ್ರಮ ಮೈತ್ರಿಯಿಂದ ಹಗಲು ದರೋಡೆ ಮಾಡಿರುವ ಎಲ್ಲಾ ಹೆಚ್ಚುವರಿ ಭೂಮಿಯನ್ನು ವಾಪಸು ಪಡೆದುಕೊಳ್ಳಬೇಕು ಭೂ ಸ್ವಾಧೀನ ಪ್ರಕಟಣೆ ಮತ್ತು ಕೋರ್ಟ್ ತೀರ್ಪುಗಳ ಹೆಸರಿನಲ್ಲಿ ರೈತರ ಮೇಲಿನ ನೈಸ್ ಕಂಪನಿಯ ದಬ್ಬಾಳಿಕೆ-ದೌರ್ಜನ್ಯ ನಿಲ್ಲಿಸಬೇಕು ಟೋಲ್ ಸಂಗ್ರಹಿಸುತ್ತಿರುವ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ಒಪ್ಪಂದದಂತೆ ಹೆಚ್ಚಿನ ಪರಿಹಾರ ಹಾಗೂ ನಿವೇಶನ ಒದಗಿಸಬೇಕು ಬಿಎಂಐಸಿ ಯೋಜನೆ ನೆಪದಲ್ಲಿ ನೈಸ್ ಸಂಸ್ಥೆ ನಡೆಸುತ್ತಿರುವ ರಿಯಲ್ ಎಸ್ಟೇಟ್ ವ್ಯವಹಾರವನ್ನು ನಿರ್ಬಂಧಿಸಬೇಕು. ನೈಸ್ ಕಂಪನಿಗೆ ಗುತ್ತಿಗೆಗೆ ನೀಡಿರುವ ಎಲ್ಲಾ ಸರ್ಕಾರಿ ಭೂಮಿಗಳನ್ನು ವಾಪಸ್ಸು ಪಡೆದು, ಮನೆ ನಿವೇಶನಕ್ಕಾಗಿ ಅರ್ಜಿ ಹಾಕಿಕೊಂಡಿರುವ ಎಲ್ಲಾ ವಸತಿ ರಹಿತರಿಗೆ ಮನೆ ಒದಗಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೋಲಾರ | ‘ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ದಲಿತರನ್ನು ಕಡೆಗಣಿಸಿಲ್ಲ’

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ತಾಲ್ಲೂಕು ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮುಖಂಡರಾದ ವಿ.ವೆಂಕಟೇಶಪ್ಪ, ಅಪ್ಪಯ್ಯಣ್ಣ, ನಾರಾಯಣಸ್ವಾಮಿ, ಮಂಜುನಾಥ್, ರಾಮಾಂಜಿನಪ್ಪ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...