ಕೋಲಾರ | ಹಾದಿ ಬೀದಿಯಲ್ಲಿ ಮಾತಾಡುವವರು ಲೇಔಟ್‌ ಅಭಿವೃದ್ಧಿ ಕಾಮಗಾರಿ ನೋಡಿ ಮಾತಾಡಲಿ: ಕುಡಾ ಅಧ್ಯಕ್ಷ ಹನೀಫ್

Date:

ಹಾದಿ ಬೀದಿಗಳಲ್ಲಿ ಮಾತನಾಡುವವರು ಲೇಔಟ್‌ನ ಅಭಿವೃದ್ಧಿ ಕಾಮಗಾರಿ ನೋಡಿ ಮಾತನಾಡಲಿ. ಕುಡಾ ಲೇಔಟ್‌ನಲ್ಲಿ ನಲವತ್ತು ವರ್ಷಗಳಲ್ಲಿ ಆಗದ ಅಭಿವೃದ್ಧಿ ಕೆಲಸಗಳನ್ನು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾದ ಮೇಲೆ ನಾನು ಮಾಡಿದ್ದೇನೆ ಎಂದು ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್ ತಿಳಿಸಿದರು.

ಅವರ ಕಚೇರಿಯಲ್ಲಿ ಭೇಟಿ ಮಾಡಿದ್ದ ಮಾಧ್ಯಮದವರೊಂದಿಗೆ ಬಡಾವಣೆ ವೀಕ್ಷಣೆ ಮಾಡಿದ ನಂತರ ಮಾತನಾಡಿದ ಅವರು, “ಹಾದಿ ಬೀದಿಗಳಲ್ಲಿ ಮಾತನಾಡುವವರು ಎಚ್ಚರಿಕೆಯಿಂದ ಮಾತನಾಡಬೇಕು. ಪ್ರಾಧಿಕಾರದ ಲೇಔಟ್ ಆದ ದೇವರಾಜ ಅರಸು ಬಡಾವಣೆಯಲ್ಲಿ ಆಗಿರುವ ಮತ್ತು ಆಗುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಖುದ್ದಾಗಿ ನೋಡಿ ಮಾತನಾಡಲಿ” ಎಂದು ತಿರುಗೇಟು ನೀಡಿದರು.

“ನಾನು ಅಧಿಕಾರ ವಹಿಸಿಕೊಂಡು 10 ತಿಂಗಳಾಗಿದ್ದು, ಈ ಅವಧಿಯಲ್ಲಿ ಪ್ರಸ್ತುತ 13 ಕೋಟಿ ರೂ.ಗೂ ಹೆಚ್ಚಿನ ವೆಚ್ಚದಲ್ಲಿ ಬಡಾವಣೆಯ ಎಲ್ಲ ರಸ್ತೆಗಳ ಅಭಿವೃದ್ಧಿ ಹಾಗೂ ನೀರಿನ ವ್ಯವಸ್ಥೆ ಮತ್ತು ಯುಜಿಡಿ, ಲಿಕೇಜ್ ರಿಪೇರಿ, ದಾರಿ ದೀಪಗಳ ಅಳವಡಿಕೆ ಮಾಡುತ್ತಿದ್ದು, ಶೇ.80ರಷ್ಟು ಕೆಲಸ ಪೂರ್ಣಗೊಳಿಸಲಾಗಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೇ ಅಲ್ಲದೆ ಕೋಡಿಕಣ್ಣೂರು ಕೆರೆ ಅಭಿವೃದ್ಧಿಗೆ 4 ಕೋಟಿ ಮೀಸಲು ಇಟ್ಟಿದ್ದು, ಡಿಪಿಆರ್ ಆಗಿದ್ದು, ಮುಂದಿನ ತಿಂಗಳು ಟೆಂಡರ್ ಕರೆದು ಕೆಲಸ ಪ್ರಾರಂಭಿಸಲಾಗುವುದು. ಬಡಾವಣೆಯಲ್ಲಿ 339 ಸೈಟುಗಳು ಮಾರಾಟವಾಗದೆ ಉಳಿದಿದ್ದು, ಅವುಗಳನ್ನು ಹಂತ ಹಂತವಾಗಿ ಮಾರಾಟ ಮಾಡಿದ ನಂತರ ಅಮಾನಿ ಕರೆ ಅಚ್ಚುಕಟ್ಟಿನಲ್ಲಿ 100 ಎಕರೆ ರೈತರ ಜಮೀನಿನಲ್ಲಿ ಶೇ 50:50ರ ಅನುಪಾತದಲ್ಲಿ ನೂತನ ಬಡಾವಣೆ ನಿರ್ಮಾಣಕ್ಕೆ ಮಾತುಕತೆ ಮಾಡಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ? ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

“ಪ್ರಾಧಿಕಾರದ ಕೆಲಸಗಳನ್ನು ನಿರ್ವಹಿಸಲು 14 ಮಂದಿ ಸಿಬ್ಬಂದಿಯ ಅವಶ್ಯಕತೆ ಇದ್ದು, ಪ್ರಸ್ತುತ ಕೇವಲ ಇಬ್ಬರು ಸಿಬ್ಬಂದಿಗಳಿದ್ದಾರೆ. ಸಿಬ್ಬಂದಿಯ ಕೊರತೆಯಿಂದ ಅಕ್ರಮ ಬಡಾವಣೆಗಳ ಬಗ್ಗೆ ಕ್ರಮ ಜರುಗಿಸಲು ಆಗುತ್ತಿಲ್ಲ. ಪ್ರಸ್ತುತ ಕೋಲಾರ ನಗರ 5 ಕಿ.ಮೀಗಳಿಗೆ ಸೀಮಿತವಾಗಿದ್ದು, ಅದನ್ನು 12 ಕಿ.ಮೀಗಳಿಗೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಾಸ್ತಾವನೆ ಸಲ್ಲಿಸಲಾಗಿದೆ. ಕೋಲಾರ ನಗರ ಅಭಿವೃದ್ಧಿಯು ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು, ಇನ್ನು ಎರಡ್ಮೂರು ತಿಂಗಳಲ್ಲಿ ಮುಂಜೂರಾತಿ ದೊರೆಯಲಿದೆ” ಎಂದು ವಿವರಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...