ಕೋಲಾರ | ಶಕ್ತಿ ಯೋಜನೆಗೆ ಎರಡು ವರ್ಷಗಳ ಸಂಭ್ರಮ; ಕಂಡಕ್ಟರ್ ಆದ ಶಾಸಕ ಕೊತ್ತೂರು ಮಂಜುನಾಥ್

Date:

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸೋಮವಾರ ಕೋಲಾರದ ನಗರದ ಹೊಸ ಬಸ್ ನಿಲ್ದಾಣದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸುವ ಮೂಲಕ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಬಳಿಕ ಮಾತನಾಡಿದ ಶಾಸಕ ಮಂಜುನಾಥ್‌, “ಕಳೆದ 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನೇತೃತ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು ಅದರಂತೆ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲಾಯಿತು. 2023ರ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಿ ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಇದುವರೆಗೂ 500 ಕೋಟಿಗಿಂತ ಹೆಚ್ವಿನ ಮಹಿಳಾ ಪ್ರಯಾಣಿಕರು ಯೋಜನೆಯ ಲಾಭವನ್ನು ಪಡೆದಿದ್ದಾರೆ” ಎಂದರು.

“ಕೋಲಾರ ಜಿಲ್ಲೆಯಲ್ಲಿ ಒಟ್ಟು 10 ಕೋಟಿಗಿಂತ ಹೆಚ್ಚಿನ ಮಹಿಳಾ ಪ್ರಯಾಣಿಕರು ಈ ಯೋಜನೆಯ ಸೌಲಭ್ಯವನ್ನು ಪಡೆದಿದ್ದಾರೆ. ಕೋಲಾರ ತಾಲೂಕಿನಲ್ಲಿ 2.75 ಲಕ್ಷ, ಕೆಜಿಎಫ್ 2.27, ಶ್ರೀನಿವಾಸಪುರ 1.73, ಮುಳಬಾಗಿಲು 1.79, ಮತ್ತು ಮಾಲೂರು 1.73 ಲಕ್ಷದಷ್ಟು ಪ್ರಯಾಣಿಕರು ಸೌಲಭ್ಯ ಪಡೆದಿದ್ದಾರೆ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ಜನ ಶಕ್ತಿ ಹಾಗೂ ಅಧಿಕಾರ ನೀಡುತ್ತಾರೋ ಅಲ್ಲಿಯ ತನಕ ಯೋಜನೆಗಳು ಮುಂದುವರೆಯುತ್ತವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ರಾಜಕಾಲುವೆಗೆ 90 ಕೋಟಿ ಅನುದಾನ; ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ನಗರಸಭೆ ಸದಸ್ಯ

“ಶಕ್ತಿ ಯೋಜನೆಯಿಂದ ರಾಜ್ಯದ ಉದ್ದಗಲಕ್ಕೂ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು. ಯಾವುದೇ ಖರ್ಚು ಇಲ್ಲದೆ ಪ್ರಯಾಣ ಮಾಡಬಹುದು. ಅದು ಕಾಂಗ್ರೆಸ್ ಸರ್ಕಾರ ಬಡವರಿಗೆ ಕೊಟ್ಟಿರುವ ಸೌಲಭ್ಯವಾಗಿದೆ. ಗ್ಯಾರಂಟಿ ಯೋಜನೆ ಬಗ್ಗೆ ಯಾರು ಎಷ್ಟೇ ಟೀಕೆ ಮಾಡಿದರೂ ಅವುಗಳು ಕಾಲಕ್ರಮೇಣ ಸತ್ತು ಹೋಗುತ್ತವೆ. ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ.‌ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಕಾರಣಕ್ಕೆ ಕಾಂಗ್ರೆಸ್ ಯಶಸ್ಸು ಪಡೆದಿದೆ. ಇದೆಲ್ಲವನ್ನು ಜಾರಿ ಮಾಡಲು ಜನ ನೀಡಿರುವ ಶಕ್ತಿಯಿಂದ ಬಲಬಂದಿದೆ” ಎಂದರು.

ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಸದಸ್ಯರಾದ ಅಫ್ಸರ್, ರಫೀಕ್, ಕೆ.ಎಸ್.ಆರ್.ಟಿ.ಸಿ ಡಿಸಿ ಶ್ರೀನಾಥ್, ಮ್ಯಾನೇಜರ್ ಶ್ರೀನಿವಾಸಯ್ಯ, ನಿಲ್ದಾಣಾಧಿಕಾರಿ ಶಿವಕುಮಾರ್, ಕೋಮುಲ್ ನಿರ್ದೇಶಕ ಷಂಷೀರ್, ಗ್ಯಾರಂಟಿ ಸಮಿತಿ ಸದಸ್ಯರಾದ ಭರತ್, ವಿನೋದ್, ಮಂಗಳಾ, ಬಾಬು, ಪುನೀತ್, ಇಮ್ರಾನ್, ವಿಜಯಕುಮಾರ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಕುರಿಗಳ ರಮೇಶ್, ಯಲವಾರ ರಾಜಕುಮಾರ್ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...