ಕೋಲಾರ | ದೂರು ಬರದಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ಕೊತ್ತೂರು ಮಂಜುನಾಥ್ ಎಚ್ಚರಿಕೆ

Date:

ಸಾರ್ವಜನಿಕರು ಸೇರಿದಂತೆ ಹಾಸ್ಟೆಲ್ ವಿದ್ಯಾರ್ಥಿಗಳು ಸಮಸ್ಯೆಗಳು ಹೇಳಿಕೊಂಡಾಗ ಅಧಿಕಾರಿಗಳು ಸ್ಪಂದಿಸಬೇಕು. ಅದಕ್ಕಾಗಿಯೇ ಸರ್ಕಾರ ನಿಮ್ಮನ್ನು ನೇಮಕ ಮಾಡಿರುವುದು, ನಿರ್ಲಕ್ಷ್ಯ ವಹಿಸಿದರೆ ಕ್ರಮ ವಹಿಸಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕೋಲಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳ ಊಟದಲ್ಲಿ ಗುಣಮಟ್ಟವಿರಬೇಕು. ಬೆಳಿಗ್ಗೆ ಬಿಸಿನೀರು ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ದೂರುಗಳು ಬಂದಿವೆ. ಕೂಡಲೇ ಸರಿಪಡಿಸಬೇಕು. ಆಹಾರ ವಿತರಣೆಯಲ್ಲಿ ವ್ಯತ್ಯಾಸವಾದರೆ ಸಂಬಂಧಿಸಿದ ಅಧಿಕಾರಿ ಮತ್ತು ಗುತ್ತಿಗೆದಾರನ ವಿರುದ್ಧ ಕ್ರಮ ವಹಿಸಲಾಗುತ್ತದೆ. ಹಾಸ್ಟೆಲ್ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ಒದಗಿಸಬೇಕು. ಮಕ್ಕಳಿಂದಾಗಲಿ, ಪೋಷಕರಿಂದಾಗಲಿ ದೂರುಗಳು ಬರಬಾರದು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತೋಟಗಾರಿಕೆ ಮತ್ತು ಕೃಷಿ ಇಲಾಖೆಗಳಿಂದ ರೈತರಿಗೆ ಸಾಕಷ್ಟು ಯೋಜನೆಗಳಿವೆ. ಈ ಬಗ್ಗೆ ರೈತರಿಗೆ ಮೊದಲು ಮಾಹಿತಿ ಕೊಡಬೇಕು. ನೈಜ ರೈತರನ್ನು ಗುರುತಿಸಿ ಅವಕಾಶ ಕಲ್ಪಿಸಬೇಕು. ರೈತರಿಗೆ ಯಂತ್ರೋಪಕರಣಗಳು ಸೇರಿದಂತೆ ಸಹಾಯಧನವನ್ನು ಪಡೆಯಲು ಒಂದಷ್ಟು ಗ್ಯಾಂಗ್ ಹುಟ್ಟಿಕೊಂಡಿದೆ. ಬರುವ ಅಷ್ಟು ಸೌಲಭ್ಯಗಳು ಇಂಥವರಿಗೆ ಸಿಗುತ್ತಿದ್ದು, ನಾಮಕಾವಸ್ಥೆಗೆ ಬಡ ರೈತನ ಹೆಸರು ಬರುತ್ತಿದೆ. ಇದಕ್ಕೆ ಅಧಿಕಾರಿಗಳ ಬೆಂಬಲ ಇದೆ. ಇಂತಹ ಪ್ರವೃತ್ತಿ ಕೂಡಲೇ ನಿಲ್ಲಬೇಕು. ಇಲ್ಲದೇ ಹೋದರೆ ನಾವೇ ನೇರವಾಗಿ ಅ ಗ್ಯಾಂಗನ್ನು ತೋರಿಸಬೇಕಾಗುತ್ತದೆ” ಎಂದರು.

“ರೈತರು ಕೃಷಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಯಾರಾದರೂ ತಿಳಿಸಿದರೆ ಸ್ಪಂದಿಸುವುದಿಲ್ಲವೆಂಬ ದೂರುಗಳು ಹೆಚ್ಚು ಕೇಳಿಬಂದಿದೆ. ಇದುವರೆಗೂ ರೈತರ ಸಮಸ್ಯೆಗಳ ಬಗ್ಗೆ ಎಷ್ಟು ಅರ್ಜಿಗಳು ಬಂದಿದೆ, ಎಷ್ಟಕ್ಕೆ ಪರಿಹಾರ ಸಿಕ್ಕಿವೆ, ಎಷ್ಟು ಜನ ಸೌಲಭ್ಯಗಳನ್ನು ಪಡೆದಿದ್ದಾರೆ ಎಂಬುದರ ಬಗ್ಗೆ ಪಲಾನುಭವಿಗಳ ಪಟ್ಟಿಯನ್ನು ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಮಳೆಗಾಲ ಪ್ರಾರಂಭವಾಗಿದೆ. ಬಿತ್ತನೆ ಬೀಜ ಗೊಬ್ಬರ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು” ಎಂದರು.

“ಆರೋಗ್ಯ ಇಲಾಖೆಯಲ್ಲಿ ಸರ್ಕಾರದಿಂದ ಆಗಬೇಕಾದ ಕೆಲಸಗಳ ಬಗ್ಗೆ ಗಮನಕ್ಕೆ ತನ್ನಿ, ಕೆಲವು ಆಸ್ಪತ್ರೆಯಲ್ಲಿ ಔಷಧಿಗಳಿಗಾಗಿ ಹೊರಕ್ಕೆ ಚೀಟಿ ಬರೆಯುತ್ತಾರೆ ಎನ್ನಲಾಗುತ್ತಿದೆ. ಮುಂದೆ ಇಂತಹ ಯಾವುದೇ ದೂರುಗಳು ಬರಬಾರದು. ಈಗಾಗಲೇ ಹೋಬಳಿ ಕೇಂದ್ರಗಳಲ್ಲಿ ಹೊಸ ಕಟ್ಟಡಗಳು ಆದಷ್ಟು ಬೇಗ ಕಾಮಗಾರಿ ಮುಗಿಸಿ ಸೇವೆಗೆ ಲಭ್ಯವಿರಬೇಕು. ಸಿಬ್ಬಂದಿ ಕೊರತೆಯಾಗಬಾರದು” ಎಂದು ತಾಲೂಕು ಆರೋಗ್ಯ ಅಧಿಕಾರಿ ನಾರಾಯಣಸ್ವಾಮಿಗೆ ಸೂಚನೆ ನೀಡಿದರು.

“ಯಾವುದೇ ಕಾಮಗಾರಿಯಾಗಲಿ ಪೂರ್ಣಗೊಂಡ ನಂತರವೇ ಹಣ ಬಿಡುಗಡೆ ಮಾಡಬೇಕು. ಜಲಜೀವನ್ ಮಿಷನ್‌ನಿಂದ ಆದಷ್ಟು ಬೇಗ ಕೆಲಸ ಮುಗಿಸಬೇಕು. ಮೀನುಗಾರಿಕೆ ಇಲಾಖೆಯಿಂದ ಮನೆಗಳು ಸೇರಿದಂತೆ ಪೋತ್ಸಾಹಧನ ಸಿಗುತ್ತದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು. ನಗರ ಸಾರಿಗೆಯನ್ನು ಮಾಲೂರು ಮಾರ್ಗದ ಮಂಗಸಂದ್ರ ಪಿಜಿ ಕೇಂದ್ರ ಹಾಗೂ ಬಂಗಾರಪೇಟೆ ರಸ್ತೆಯ ದಿಂಬವರೆಗೂ ವಿಸ್ತರಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಶಾಲಾ ಮಕ್ಕಳಿಗೆ ಶೂ ವಿತರಣೆ ಮಾಡದಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

ಸಭೆಯಲ್ಲಿ ಎಂಎಲ್‌ಸಿ ಎಂ ಎಲ್ ಅನಿಲ್ ಕುಮಾರ್, ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಡಾ. ಮೈತ್ರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ವೇಮಗಲ್ ಮುನಿಯಪ್ಪ, ತಹಶೀಲ್ದಾರ್ ನಯನ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...