ಬೇತಮಂಗಲ- ಕ್ಯಾಸಂಬಳ್ಳಿ ಮುಖ್ಯರಸ್ತೆಗೆ ಹರಿಯುತ್ತಿರುವ ಕೊಳಚೆ ನೀರು : ಸಾರ್ವಜನಿಕರ ಪರದಾಟ

Date:

ಬೇತಮಂಗಲ: ಪಟ್ಟಣದ ಕ್ಯಾಸಂಬಳ್ಳಿ ಮುಖ್ಯ ರಸ್ತೆಯ ಟಿಪ್ಪು ನಗರದಲ್ಲಿ ಕೊಳಚೆ ನೀರು ಮುಖ್ಯ ರಸ್ತೆಗೆ ಹರಿಯುತ್ತಿದ್ದು, ನಿವಾಸಿಗಳು ಸವಾರರು ದುರ್ವಾಸನೆಯಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿಯ ನಡುವೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೇತಮಂಗಲ ಕ್ಯಾಸಂಬಳ್ಳಿ ಮುಖ್ಯ ರಸ್ತೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಮನೆಗಳ ಯುಜಿಡಿ ಮತ್ತು ಮಳೆ ನೀರು ರಸ್ತೆಗೆ ಹರಿಯುತ್ತಿದ್ದು ರೋಗ ಹರಡುವ ಭೀತಿಯ ನಡುವೆ ದುರ್ವಾಸನೆಯಿಂದ ಪ್ರತಿನಿತ್ಯ ಮೂಗು ಮುಚ್ಕೊಂಡು ಓಡಾಡುವ ಪರಿಸ್ಥಿತಿ ಇದ್ದು

ಈ ಕೂಡಲೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ಕೊಳಚೆ ನೀರು ರಸ್ತೆಗೆ ಹರಿಯದಂತೆ ಕ್ರಮಕೈಗೊಳ್ಳ ಬೇಕೆಂದು ದಲಿತ ಭೀಮ ಸೇನೆ ರಾಜ್ಯಾಧ್ಯಕ್ಷ ಕೆ.ಬಿ ದೇವರಾಜ್ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನೇಕ ದಶಕಗಳಿಂದಲೂ ಬೇತಮಂಗಲ ಕ್ಯಾಸಂಬಳ್ಳಿ ಮುಖ್ಯರಸ್ತೆಯ ರಾಜ ಕಾಲುವೆ ಒತ್ತುವರಿಯಾಗಿದ್ದು, ಒತ್ತುವರಿ ತಿರುಗೊಳಿಸುವ ಬಗ್ಗೆ ಅನೇಕ ಬಾರಿ ಗ್ರಾಮ ಸಭೆ ಹಾಗೂ ಪ್ರತ್ಯೇಕವಾಗಿಯೂ ಸ್ಥಳೀಯ ಸಾರ್ವಜನಿಕರು,‌ ಪಿಡಿಒ, ಅಧ್ಯಕ್ಷರು, ಶಾಸಕರಿಗೂ ಸಹ ಅರ್ಜಿ ನೀಡಿದ್ದರು ಇದುವರೆಗೂ ಒತ್ತುವರಿ ತೆರವುಗೊಳಿಸಿದ ಪರಿಣಾಮ ಮಳೆಗಾಲದಲ್ಲಿ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದೆ.

ಇದೀಗ ನಿವಾಸಿಗಳ ಶೌಚಾಲಯ, ಯುಜಿಡಿ ನೀರು ರಸ್ತೆಗೆ ಹರಿಯುತ್ತಿದ್ದು ನಿತ್ಯ ಪ್ರಯಾಣಿಕರು ,‌ ಸವಾರರು, ನಿವಾಸಿಗಳು ದುರ್ವಾಸನೆಯಿಂದ ಹೈರಾಣಾಗಿದ್ದಾರೆ.

ಕನಿಷ್ಠ ಗ್ರಾಮ ಪಂಚಾಯಿತಿಯಿಂದ ನರೇಗಾ ಹಾಗೂ ಇತರೆ ಯೋಜನೆಗಳಾದ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಕನಿಷ್ಠ ಚರಂಡಿ ವ್ಯವಸ್ಥೆ ಕಲ್ಪಿಸುವಲ್ಲಿ ಅಧಿಕಾರಿಗಳು ಮತ್ತು ಈ ವಾರ್ಡಿನಲ್ಲಿ ಪ್ರತಿನಿಧಿಸಿರುವ ಸದಸ್ಯರು ವಿಫಲರಾಗಿದ್ದಾರೆ ಎಂದು ಈ ವಾರ್ಡ್ ನ ಸಾರ್ವಜನಿಕರು ಆರೋಪಿಸಿದ್ದಾರೆ.

ಬೇತಮಂಗಲ ಗ್ರಾಮ ಪಂಚಾಯಿತಿ ತಾಲೂಕಿನಲ್ಲಿಯೇ ಅತಿ ಹೆಚ್ಚು 27 ಸದಸ್ಯರನ್ನು ಒಳಗೊಂಡಿದ್ದು ಒಟ್ಟು 8 ಬ್ಲಾಕ್ ಗಳನ್ನು ಹೊಂದಿದ್ದು ಅವಶ್ಯಕ ಪೌರಕಾರ್ಮಿಕರ ಸಂಖ್ಯೆ ಕಡಿಮೆ ಇದೆ ಜೊತೆಗೆ ನಿತ್ಯ ಸಂಗ್ರಹವಾಗುವ ಘನ ತ್ಯಾಜ್ಯ ವಿಲೇವಾರಿ ಮಾಡುವುದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಹೇಗಿರುವಾಗ ರಸ್ತೆಗೆ ಹರಿಯುವ ಕೊಲಚೆ ನೀರನ್ನು ತಡೆಗಟ್ಟಲು ಸಮಸ್ಯೆ ಆಗಿದೆ ಎಂದು ಹೆಸರು ಹೇಳಲು ಇಚ್ಚಿಸದ ಸದಸ್ಯರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ..? ಉನ್ನತ ಶಿಕ್ಷಣ ಇಲಾಖೆಯ 103 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆಗೆ ಆಹ್ವಾನ

ಈ ಕೂಡಲೇ ಕ್ಷೇತ್ರದ ಶಾಸಕರು ಕಂದಾಯ ಅಧಿಕಾರಿಗಳು ತಕ್ಷಣ ಕಾಸೆಂಬಲ್ಲಿ ಬೇತಮಂಗಲ ಮುಖ್ಯರಸ್ತೆಯ ರಾಜ ಕಾಲುವೆ ಒತ್ತುವರಿ ಗುರುತಿಸಿ ತೆರವುಗೊಳಿಸಿ ಸುಸಜ್ಜಿತ ಶಾಶ್ವತ ಕಾಲುವೆ ನಿರ್ಮಿಸಿದ್ದಲ್ಲಿ ಮಾತ್ರ ಈ ಭಾಗದ ಸಾರ್ವಜನಿಕರು ಉತ್ತಮ ಆರೋಗ್ಯದೊಂದಿಗೆ ಜೀವನ ನಡೆಸಲು ಸಹಕಾರಿಯಾಗುತ್ತದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಪ್ರಾಂತ ರೈತ ಸಂಘ ನೂತನ ರಾಜ್ಯ ಸಮಿತಿ ಆಯ್ಕೆ

ಕೋಲಾರ : ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌)ದ 18ನೇ ರಾಜ್ಯ ಸಮ್ಮೇಳನ...

ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವ ವರ್ತಕರ ವಿರುದ್ಧ ಈ ಕಾನೂನು ಕ್ರಮ : ಡಾ. ಎಂ. ಆರ್. ರವಿ

ಕೋಲಾರ:ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಮಾರುಕಟ್ಟೆಯಲ್ಲಿ ಆಹಾರ ಪದಾರ್ಥಗಳು...

ಇರಾನ್ ಯುದ್ದ ನಿಲ್ಲಿಸುವಂತೆ ಯು ಬಸವರಾಜ್ ಒತ್ತಾಯ.

ಕೋಲಾರ: ಇರಾನ್ ದೇಶದಲ್ಲಿರುವ ತೈಲ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆಯುವ ದುರುದ್ದೇಶದಿಂದ ಆ...

ಟೊಮೆಟೊ ಬೆಲೆ ಕುಸಿತ: ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಸಂಕಷ್ಟ

ಪ್ರತಿದಿನ ಟೊಮೆಟೊ ಬೆಲೆ ಕುಸಿಯುತ್ತಿರುವ ಕಾರಣ ರೈತರು ನಿರಾಶೆಗೆ ಒಳಗಾಗಿದ್ದಾರೆ. ಕೋಲಾರ...