ಸುಮಾರು 1.44 ಕೋಟಿ ರೂ., ಹೈ ಮಾಸ್ಟ್ ದ್ವೀಪ ಕಾಮಗಾರಿಗಳಿಗೆ ಚಾಲನೆ..!

Date:

ಬೇತಮಂಗಲ: ಕೆಜಿಎಫ್ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮ ಹಾಗೂ ವಾರ್ಡ್ ನಲ್ಲಿ ವಿದ್ಯುತ್ ದ್ವೀಪ, ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕಿ ಎಂ.ರೂಪಕಲಾ ಹೇಳಿದರು.

ಪಟ್ಟಣದ ಬಳಿಯ ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೀಲವಾರ, ಶ್ರೀನಿವಾಸಂದ್ರ, ಬೆನ್ನವಾರ, ಚೌಡೇಪಲ್ಲಿ, ಚಿಂಚಾಡ್ಲಹಳ್ಳಿ, ಕರಡಗೂರು ಸೇರಿದಂತೆ ಒಟ್ಟು 7 ಗ್ರಾಮಗಳಲ್ಲಿ ಹೈ ಮಾಸ್ಟ್ ವಿದ್ಯುತ್ ದ್ವೀಪಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕ್ಷೇತ್ರದಲ್ಲಿ ಅಂದಾಜು 1.40 ಕೋಟಿ ರೂ., ಗಳ ವೆಚ್ಚದಲ್ಲಿ ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಹೈ ಮಾಸ್ಟ್ ದ್ವೀಪ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದರು.

ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಉತ್ತಮವಾದ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗಿದೆ. ಅದೇ ರೀತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಲಾಗಿದೆ. ಸಿಸಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದೀಗ ಹೈ ಮಾಸ್ಟ್ ದ್ವೀಪ ಕಾಮಗಾರಿಗಳನ್ನು ಹಂತ ಹಂತವಾಗಿ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದರು. ಆಯಾ ಪ್ರದೇಶದಲ್ಲಿ ಗ್ರಾಮಸ್ಥರ ಬಹು ವರ್ಷಗಳ ಈಡೇರಿಕೆಯಂತೆ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡುತ್ತಿರುವುದು ಹೆಮ್ಮೆ ಇದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಡಿ ಭಾಗದಲ್ಲಿ ರೈತರ ಪಿ ನಂಬರ್ ದುರಸ್ತಿ ಹಾಗೂ ಗೋಮಾಳ ಭೂಮಿಯನ್ನು ರೈತರು ಉಳುಮೆ ಮಾಡುತ್ತಿದ್ದು, ಈ ಜಮೀನು ಅರಣ್ಯ ಇಲಾಖೆಗೆ ಸೇರಿದೆ ಎಂದು ನಾಮಫಲಕ ಅಳವಡಿಸುವ ಮೂಲಕ ಭೂಮಿಯನ್ನು ಕಸಿಯುವ ಹುನ್ನಾರ ನಡೆಯುತ್ತಿದೆ ಎಂದು ರೈತರು ಶಾಸಕರಿಗೆ ಮನವಿ ಮಾಡಿದರು ತಕ್ಷಣ ಈ ಬಗ್ಗೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ದಾಖಲೆ ಪರಿಶೀಲನೆ ಮಾಡಲಾಗುವುದು ಎಂದು ರೈತರಿಗೆ ಶಾಸಕರು ಭರವಸೆ ನೀಡಿದರು.

ದಲಿತ ಕಾಲೋನಿಗಳಲ್ಲಿ ಉತ್ತಮ ಬೆಳಕು ಚೆಲ್ಲುವ ಪ್ರಯತ್ನಕ್ಕಾಗಿ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಶೀಘ್ರದಲ್ಲೇ ಕ್ಷೇತ್ರಾದ್ಯಂತ ಹೈ ಮಾಸ್ಟ್ ದ್ವೀಪ ದ್ವೀಪ ಅಳವಡಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಕಲಾ ವೆಂಕಟೇಶ್, ಉಪಾಧ್ಯಕ್ಷ ಭಾರತಿ ಷಣ್ಮುಗಂ, ಸದಸ್ಯರಾದ ವಸಂತ್ ರೆಡ್ಡಿ, ಮಾಧವಿ, ಗಜೇಂದ್ರ ರೆಡ್ಡಿ, ಮಾಜಿ ಸದಸ್ಯೆ ಭವಾನಿ ರಾಮಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಧಾಕೃಷ್ಣ ರೆಡ್ಡಿ, ತಾಪಂ ಮಾಜಿ ಅಧ್ಯಕ್ಷ ರಾಮಕೃಷ್ಣ ರೆಡ್ಡಿ, ಮುಖಂಡರಾದ ಯಶೋಧಮ್ಮ ಶ್ರೀನಿವಾಸ್ ರೆಡ್ಡಿ, ಬಾಬು, ಭಾಸ್ಕರ್ ರೆಡ್ಡಿ, ಪೀಲವಾರ ರಾಮಕೃಷ್ಣಪ್ಪ, ವಕೀಲ ಪದ್ಮನಾಭ ರೆಡ್ಡಿ, ಅನೇಕ ಕಾರ್ಯಕರ್ತರು ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ..? ಪೊಲೀಸರ ಬಗ್ಗೆ ಭಯ ಬೇಡ ಬದಲಿಗೆ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಸಹಕರಿಸಿ: ಎಸ್.ಪಿ. ಕುಶಾಲ್ ಚೌಕ್ಸೆ

ಚಿತ್ರ 01 ಬೇತಮಂಗಲ ಬಳಿಯ ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಕುಪ್ಪ ಗ್ರಾಮದಲ್ಲಿ ಶಾಸಕಿ ಎಂ ರೂಪಕಲಾ, ಗ್ರಾಪಂ ಅಧ್ಯಕ್ಷೆ ಗೀತಕಲಾ ವೆಂಕಟೇಶ್, ಉಪಾಧ್ಯಕ್ಷ ಭಾರತಿ ಷಣ್ಮುಗಂ ಹಾಗೂ ಅನೇಕ ಗಣ್ಯರು ಹೈ ಮಾಸ್ಟ್ ವಿದ್ಯುತ್ ದ್ವೀಪಗಳನ್ನು ಉದ್ಘಾಟಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವ ವರ್ತಕರ ವಿರುದ್ಧ ಈ ಕಾನೂನು ಕ್ರಮ : ಡಾ. ಎಂ. ಆರ್. ರವಿ

ಕೋಲಾರ:ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಮಾರುಕಟ್ಟೆಯಲ್ಲಿ ಆಹಾರ ಪದಾರ್ಥಗಳು...

ಇರಾನ್ ಯುದ್ದ ನಿಲ್ಲಿಸುವಂತೆ ಯು ಬಸವರಾಜ್ ಒತ್ತಾಯ.

ಕೋಲಾರ: ಇರಾನ್ ದೇಶದಲ್ಲಿರುವ ತೈಲ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆಯುವ ದುರುದ್ದೇಶದಿಂದ ಆ...

ಟೊಮೆಟೊ ಬೆಲೆ ಕುಸಿತ: ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಸಂಕಷ್ಟ

ಪ್ರತಿದಿನ ಟೊಮೆಟೊ ಬೆಲೆ ಕುಸಿಯುತ್ತಿರುವ ಕಾರಣ ರೈತರು ನಿರಾಶೆಗೆ ಒಳಗಾಗಿದ್ದಾರೆ. ಕೋಲಾರ...

ಕಾರು ಅಪಘಾತ ಪ್ರಾಂತ ರೈತ ಸಂಘದ ಟಿ.ಎಂ ವೆಂಕಟೇಶ್ ದುರ್ಮರಣ

ಕೋಲಾರ: ಸಿಪಿಐಎಂ ಪಕ್ಷದ ತಾಲೂಕು ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಪ್ರಾಂತ...