ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಸ್ಪರ್ಧೆ; ಶಾಸಕ ಮಂಜುನಾಥ್ ವಿರುದ್ಧ ಕ್ರಮಕ್ಕೆ ಅದೇಶ

Date:

2013ರ ವಿಧಾನಸಭಾ ಚುನವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಮುಳಬಾಗಿಲು ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ, ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಪರಿಶಿಷ್ಟ ಜಾತಿಗಳಿಗೆ ವಂಚಿಸಿದ್ದಾರೆ ಎಂದು ಹೈಕೋರ್ಟ್‌ ಹೇಳಿದೆ.

ಮಂಜುನಾಥ್ ಅವರು ಬುಡಗ ಜಂಗಮ (ಎಸ್‌ಸಿ) ಸಮುದಾಯಕ್ಕೆ ಸೇರಿದವರಲ್ಲ. ಅವರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಭೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ವರದಿ ನೀಡಿತ್ತು. ಆ ವರದಿಯ ವಿರುದ್ಧ ಮಂಜುನಾಥ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿರುವ ಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, “ಮಂಜುನಾಥ್ ಅವರು ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಕ್ಷೇತ್ರವನ್ನು ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಕಸಿಕೊಂಡಿದ್ದಾರೆ. ಇದು ಸಂವಿಧಾನಕ್ಕೆ ಎಸಗಿದ ಮೋಸವಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಜುನಾಥ್ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಯಾವ ಕ್ರಮ ಕೈಗೊಳ್ಳಬೇಕು ಎಂಬುದು ಸರ್ಕಾರದ ವಿವೇಚನೆಗೆ ಬಿಟ್ಟಿದ್ದು. ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ವರದಿಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ” ಎಂದು ಪೀಠವು ಹೇಳಿದೆ.

ಪ್ರಕರಣದ ಹಿನ್ನೆಲೆ

ಪ್ರಸ್ತುತ ಕೋಲಾರ ನಗರ ಕ್ಷೇತ್ರದ ಶಾಸಕರಾಗಿರುವ ಮಂಜುನಾಥ್ ಅವರು 2013ರ ಚುನಾವಣೆಯಲ್ಲಿ ಮುಳಬಾಗಿಲು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಕ್ಷೆತ್ರವು ಎಸ್‌ಸಿ ಮೀಸಲು ಕ್ಷೇತ್ರವಾಗಿದ್ದರಿಂದ ಅವರು ಜಾತಿ ಪ್ರಮಾಣಪತ್ರ ಸಲ್ಲಿಸಬೇಕಿತ್ತು. ಈ ವೇಳೆ, ಅವರು ತಾವು ಬುಡಗ ಜಂಗಮ (ಎಸ್‌ಸಿ) ಸಮುದಾಯಕ್ಕೆ ಸೇರಿದವರು ಎಂದು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಆದರೆ, ಅವರು ಎಸ್‌ಸಿ ಸಮುದಾಯಕ್ಕೆ ಸೇರಿದವರಲ್ಲ ಎಂದು ಆರೋಪಿಸಲಾಗಿತ್ತು. ಈ ವೇಳೆ, ತಾವು ಬುಡಗ ಜಂಗಮ ಸಮುದಾಯಕ್ಕೆ ಸೇರಿದವರ ಎಂಬುದನ್ನು ಸಾಬೀತುಪಡಿಸಲು ಮಂಜುನಾಥ್ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಶಾಸಕತ್ವನ್ನು 2018ರ ಏಪ್ರಿಲ್‌ನಲ್ಲಿ ಅಸಿಂಧುಗೊಳಿಸಿ ಹೈಕೋರ್ಟ್‌ ಅದೇಶಿಸಿತ್ತು.

ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಮಂಜುನಾಥ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಜಾತಿ ಪ್ರಮಾಣ ಪತ್ರ ಪರಿಶೀಲನೆಯನ್ನು ಸುಪ್ರೀಂ ಕೋರ್ಟ್‌, ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ವಹಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ಮಂಜುನಾಥ್‌ ಅವರ ಶಾಲೆ ದಾಖಲಾತಿಗಳನ್ನು ಪರಿಶೀಲಿಸಿತ್ತು. ಅಲ್ಲದೆ, ಅವರು ಬುಡಗ ಜಂಗಮ ಜಾತಿಗೆ ಸೇರಿವರಲ್ಲ. ಅವರು ಹಿಂದುಳಿದ ಭೈರಾಗಿ ಜಾತಿಗೆ ಸೇರಿದವರು ಎಂದು ವರದಿ ನೀಡಿತ್ತು.

ಅಲ್ಲದೆ, “ಸ್ವಾತಂತ್ರ್ಯ ಪೂರ್ವದಲ್ಲಿ ಕೋಲಾರದ ಗೆಜಿಟಿಯರ್‌ನಲ್ಲಿ ಬುಡಗ ಜಂಗಮ ಸುಮುದಾಯವನ್ನು ಮಾಲಾನ್ಯಾಸಿ, ಭೈರಾಗಿ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಆದರೆ, ಮಂಜುನಾಥ್ ಅವರ ಕುಟುಂಬ ಹಾಗೂ ಸಂಬಂಧಿಕರು ಇತ್ತೀಚಿನ ದಿನಗಳಲ್ಲಿ ಬುಡಗ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡಿಲ್ಲ. ಅವರು ಬುಡಗ ಜಾರಿಗೆ ಸೇರಿದವರಲ್ಲ” ಎಂದು ವಿವರಿಸಿತ್ತು.

ಸಮಿತಿಯ ವರದಿಯನ್ನು ಪ್ರಶ್ನಿಸಿ ಮತ್ತೆ ಮಂಜುನಾಥ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ, ಮಂಜುನಾಥ್ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...