ಕೋಲಾರ | ಕರಾಟೆಯ ಕಿರೀಟ ಕೀರ್ತಿ ರುಮಾನ ಕೌಸರ್

Date:

ಕರಾಟೆ ಕ್ರೀಡೆಯಲ್ಲಿ ಕೋಲಾರ ಜಿಲ್ಲೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದವರು ಕೀರ್ತಿ ಕೆ ರುಮಾನ ಕೌಸರ್ ಬೇಗಂ ಅವರು. ಲ್ಯಾಬ್ ಟೆಕ್ನಿಷಿಯನ್ ಅಧ್ಯಯನ ಮಾಡಿರುವ ಅವರು ಕರಾಟೆ ಶಿಕ್ಷಕಿಯಾಗಿ ವೃತ್ತಿ ಜೀವನ ನಡೆಸುತ್ತಿದ್ದಾರೆ. ಅವರ ಗರಡಿಯಲ್ಲಿ ತರಬೇತಿ ಪಡೆದಿರುವ ತಂಡಗಳು ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕರಾಟೆ ಪಂದ್ಯದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಪಡೆದುಕೊಂಡಿವೆ.

ಕೀರ್ತಿ ರುಮಾನ ಅವರು ವಿವಿಧ ಕ್ರಿಡಾಕೂಟಗಳಲ್ಲಿ ಭಾಗವಹಿಸಿ 35 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಜೊತೆಗೆ, 20 ಬೆಳ್ಳಿ ಪದಕಗಳು ಹಾಗೂ 15 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಚಿನ್ನದ ಪದಕವನ್ನೂ ಸಹ ಗಳಿಸಿದ್ದಾರೆ.

ಪ್ರಮುಖವಾಗಿ, ಮಲೇಶಿಯಾದಲ್ಲಿ ನಡೆದ 16ನೇ ಓಕಿನವಾ ಗುಯೋ ರಿಯಾ ಕರಾಟೆ ಓಪನ್ ಇಂಟರ್ನ್ಯಾಷನಲ್ ಚಾಂಪಿಯನ್‌ಶಿಪ್‌ನಲ್ಲಿ ಟೀಮ್ ಕೋಚ್ ಆಗಿ ಚಿನ್ನ ಗೆದ್ದಿದ್ದಾರೆ. ಅಲ್ಲದೆ, ಅದೇ ಚಾಂಪಿಯನ್‌ಶಿಪ್‌ನಲ್ಲಿ ಜಡ್ಜ್ ಆಗಿಯೂ ಕಾರ್ಯನಿರ್ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೀರ್ತಿ ಅವರು ಕೋಲಾರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿರುವ ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್, ಏಕಲವ್ಯ ವಸತಿ ಶಾಲೆಗಳ 3,000ಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿ ನೀಡುತ್ತಿದ್ದಾರೆ. ಧ್ವನಿ ಮಹಿಳಾ ಮತ್ತು ಮಕ್ಕಳ ಸಂಸ್ಥೆಯಲ್ಲಿ ಕೋಲಾರ ಕ್ಷೇತ್ರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನೊಂದ ಮಹಿಳೆಯರಿಗೆ ಸಾಂತ್ವನ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

“ಕರಾಟೆ ಎಂಬುದು ಆತ್ಮ ರಕ್ಷಣೆಗಾಗಿ ಬೆಳೆದು ಬಂದ ಒಂದು ಚಾಕಚಕ್ಯತೆ. ಅದು ಈಗ ಕ್ರೀಡೆಯಾಗಿ ಮಾರ್ಪಟ್ಟಿದೆ. ಹೆಣ್ಣುಮಕ್ಕಳು ತಮ್ಮ ಆತ್ಮರಕ್ಷಣೆಗೆ ಈ ಕಲೆಯನ್ನು ಕಲಿಯುವುದು ಸಾಮಾಜಿಕ ದೃಷ್ಟಿಯಿಂದ ತುಂಬಾ ಮಹತ್ವ ಪಡೆಯುತ್ತದೆ” ಎಂದು ಕೀರ್ತಿ ರುಮಾನ ಅಭಿಪ್ರಯಪಟ್ಟಿದ್ದಾರೆ.

“ಮುಸ್ಲಿಂ ಜನಾಂಗದಲ್ಲಿ ಹೆಣ್ಣು ಮಕ್ಕಳಿಗೆ ಅಷ್ಟೊಂದು ಸ್ವಾತಂತ್ರ್ಯವಿಲ್ಲದಿದ್ದರೂ ತಾಯಿ ಕೊಟ್ಟ ಮಾರ್ಗದರ್ಶನ ಮತ್ತು ಪತಿಯ ಕುಟುಂಬಸ್ಥರ ಸಹಕಾರದಿಂದ ನಾನು ಸಾಧನೆ ಮಾಡಲು ಸಾಧ್ಯವಾಯಿತು” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...