ಮಾಲೂರು ವಿಧಾನಸಭಾ ಕ್ಷೇತ್ರ: ಇಂದು ಮರು ಮತ ಎಣಿಕೆ

Date:

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಮಾಲೂರು ವಿಧಾನಸಭಾ ಕ್ಷೇತ್ರದ ಮತಗಳ ಮರುಎಣಿಕೆ ಮಂಗಳವಾರ (ನ.11) ನಡೆಯಲಿದೆ.

ನಗರ ಹೊರವಲಯದ ತೋಟಗಾರಿಕೆ ಮಹಾವಿದ್ಯಾಲಯದ ಒಂದೇ ಕೊಠಡಿಯಲ್ಲಿ ಅಂಚೆ ಮತ ಹಾಗೂ ಎಲೆಕ್ಟ್ರಾನಿಕ್‌ ಮತಯಂತ್ರ (ಇವಿಎಂ) ಮತಗಳ ಎಣಿಕೆ ಬೆಳಗ್ಗೆ 8ಕ್ಕೆ ಆರಂಭವಾಗಲಿದೆ.

ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳ ಸಮ್ಮುಖದಲ್ಲಿ ಸೋಮವಾರ ಭದ್ರತಾ ಕೊಠಡಿ (ಸ್ಟ್ರಾಂಗ್‌ ರೂಂ) ಬಾಗಿಲು ತೆರೆದು ಬಿಗಿ ಭದ್ರತೆಯಲ್ಲಿ ಎವಿಎಂ, ಇತರ ಸಾಮಗ್ರಿಗಳನ್ನು ಎಣಿಕೆ ಕೇಂದ್ರಕ್ಕೆ ಸಾಗಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪವಿಭಾಗಾಧಿಕಾರಿ ಡಾ.ಎಚ್.ಪಿ.ಎಸ್‌.ಮೈತ್ರಿ ಚುನಾವಣಾಧಿಕಾರಿ ಆಗಿದ್ದಾರೆ. ಉತ್ತರ ಪ್ರದೇಶದ ಐಎಎಸ್‌ ಅಧಿಕಾರಿ ಪ್ರಭು ನಾರಾಯಣಸಿಂಗ್‌ ಚುನಾವಣಾ ಆಯೋಗವು ವೀಕ್ಷಕರನ್ನಾಗಿ ಅವರನ್ನು ನೇಮಿಸಿದೆ.

ಶಾಸಕ, ಕಾಂಗ್ರೆಸ್‌ನ ಕೆ.ವೈ.ನಂಜೇಗೌಡರ ಸ್ಥಾನ ಅಬಾಧಿತವೊ, ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಕೆ.ಎಸ್‌. ಮಂಜುನಾಥಗೌಡರಿಗೆ ಅದೃಷ್ಟ ಒಲಿಯಲಿದೆಯೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ನ ಇತಿಹಾಸವನ್ನೇ ತಿರುಚುತ್ತಿರುವ ಭಾಗವತ್!

2023ರ ಚುನಾವಣೆಯಲ್ಲಿ ನಂಜೇಗೌಡ 248 ಮತಗಳಿಂದ ಗೆದ್ದಿದ್ದರು. ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಮಂಜುನಾಥಗೌಡ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ನಂಜೇಗೌಡರ ಆಯ್ಕೆ ಅಸಿಂಧುಗೊಳಿಸಿದ್ದ ಹೈಕೋರ್ಟ್‌ ಮರುಎಣಿಕೆಗೆ ಸೂಚಿಸಿತ್ತು. ಇದನ್ನು ನಂಜೇಗೌಡ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಮುಚ್ಚಿದ ಲಕೋಟೆಯಲ್ಲಿ ಫಲಿತಾಂಶ ರವಾನೆ

ಮರು ಮತ ಎಣಿಕೆ‌ಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ರವಾನಿಸಲಾಗುತ್ತದೆ. ಸಾರ್ವಜನಿಕವಾಗಿ ಫಲಿತಾಂಶ ಪ್ರಕಟಿಸದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಈಗಾಗಲೇ ನಿರ್ದೇಶನ ನೀಡಿದೆ. ಹೀಗಾಗಿ ಚುನಾವಣಾಧಿಕಾರಿಯು ಫಲಿತಾಂಶ ಪ್ರಕಟಿಸುವುದಿಲ್ಲ. ಆದರೆ ಮತ ಎಣಿಕೆ ವೇಳೆ ಅಭ್ಯರ್ಥಿಗಳ ಏಜೆಂಟರು ಇರಲಿದ್ದು ಅವರಿಗೆ ಫಲಿತಾಂಶ ಏನೆಂದು ಗೊತ್ತಾಗಲಿದೆ. ಗೆದ್ದವರು ಸಂಭ್ರಮಿಸಲು ಸಿದ್ಧತೆ ಕೂಡ ಮಾಡಿಕೊಂಡಿದ್ದಾರೆ. ಎಣಿಕೆ ಕೇಂದ್ರಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಪಾರದರ್ಶಕವಾಗಿ ಎಣಿಕೆಗೆ ಬಿಜೆಪಿ ಆಗ್ರಹ

ಭದ್ರತಾ ಕೊಠಡಿಯಲ್ಲಿರುವ ಚುನಾವಣಾ ಸಾಮಗ್ರಿ ದಾಖಲೆಗಳಿಗೆ ಸಂಬಂಧಿಸಿದಂತೆ ಹಲವಾರು ನ್ಯೂನತೆ ಕಂಡುಬಂದಿವೆ. ಅಂಚೆ ಮತಗಳು ಇರುವ ಪೆಟ್ಟಿಗೆಯ ಸೀಲ್ ತೆರೆದುಕೊಂಡಿದೆ. ಕೆಲ ಇವಿಎಂ ವಿವಿ ಪ್ಯಾಟ್‌ಗಳನ್ನು ಕೂಡ ಕ್ರಮವಾಗಿ ಇಟ್ಟಿಲ್ಲ. ಎಲ್ಲ ಮತಗಟ್ಟೆಗಳ ವಿವಿ ಪ್ಯಾಟ್‌ ಚೀಟಿಗಳನ್ನು ತಾಳೆ ಮಾಡಿ ನೋಡಬೇಕು.‌ ಸಂಪೂರ್ಣ ವಿಡಿಯೊ ಚಿತ್ರೀಕರಣ ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ ಕೆ.ಎಸ್‌.ಮಂಜುನಾಥಗೌಡ ಆಗ್ರಹಿಸಿದ್ದಾರೆ.

ಸುಪ್ರೀಂ ಕೋರ್ಟ್‌ ನಿರ್ದೇಶನ ಹಾಗೂ ಚುನಾವಣಾ ಆಯೋಗದ ಸೂಚನೆಗಳಂತೆ ಪಾರದರ್ಶಕವಾಗಿ ಮರು ಮತ ಎಣಿಕೆ ನಡೆಸಬೇಕು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಸದಸ್ಯ ಕೇಶವ ಪ್ರಸಾದ್ ನೇತೃತ್ವದ ಬಿಜೆಪಿ ನಿಯೋಗ ಜಿಲ್ಲಾಧಿಕಾರಿ ಎಂ.ಆರ್‌.ರವಿ ಅವರಿಗೆ ಸೋಮವಾರ ಮನವಿ ಸಲ್ಲಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...