ಕೋಲಾರ | ಭ್ರೂಣ ಹತ್ಯೆ ತಡೆ ಕಾಯ್ದೆ ಉಲ್ಲಂಘನೆ; ಹೋಪ್ ಹೆಲ್ತ್‌ ಕೇರ್‌ನ ಸ್ಕ್ಯಾನಿಂಗ್‌ ಕೇಂದ್ರ ಜಪ್ತಿ

Date:

ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪದಲ್ಲಿ ಕೋಲಾರದ ಹೋಪ್ ಹೆಲ್ತ್‌ ಕೇರ್‌ನ ಸ್ಕ್ಯಾನಿಂಗ್‌ ಕೇಂದ್ರವನ್ನು ಜಪ್ತಿ ಮಾಡಲಾಗಿದೆ. ಆರೋಗ್ಯ ಇಲಾಖೆಯ ಜಿಲ್ಲಾ ತಪಸಣಾ ಮತ್ತು ಮೇಲ್ವಿಚಾರಣೆ ತಂಡವು ಕೇಂದ್ರವನ್ನು ಜಪ್ತಿ ಮಾಡಿದೆ.

ಸೋಮವಾರ ತಂಡವು ಆಸ್ಪತ್ರೆಯ ಮೇಲೆ ದಾಳಿ ನಡೆಸಿದೆ. ಈ ವೇಳೆ, ಸ್ಕ್ಯಾನಿಂಗ್‌ ಕೇಂದ್ರದಲ್ಲಿ ನೋಂದಾಯಿತ ವೈದ್ಯ ಡಾ. ಡೈಸಿ ಯಶವಂತ್ ಅವರು ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದು ಕಂಡು ಬಂದಿದೆ. ಅಲ್ಲದೆ, ಅರ್ಹತೆ ಇಲ್ಲದ ಶುಶ್ರೂಷಕಿ ವಿಜಯಲಕ್ಷ್ಮಿ ಮತ್ತು ವೈದ್ಯ ಡಾ. ಯಶವಂತ್ ವಿಟ್ಲೆ ಎಂಬವರು ಸ್ಕ್ಯಾನಿಂಗ್ ಮಾಡುತ್ತಿರುವುದನ್ನು ತಂಡವು ಗಮನಿಸಿದೆ ಎಂದು ತಿಳಿದುಬಂದಿದೆ.

ನೋಂದಾಯಿತ ವೈದ್ಯರು ಕಾರ್ಯನಿರ್ವಹಿಸದೇ ಇರುವುದು ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆ ಕಾಯ್ದೆ (ಪಿಸಿ ಅಂಡ್‌ ಪಿಎನ್‌ಡಿಟಿ) ಉಲ್ಲಂಘನೆ ಮಾಡಿರುವ ಆರೋಪದಲ್ಲಿ ಕೇಂದ್ರವನ್ನು ಜಪ್ತಿ ಮಾಡಲಾಗಿದೆ. ಅಧಿಕಾರಿಗಲು ಕೇಂದ್ರವನ್ನು ಪಂಚನಾಮೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿ ವೇಳೆ, ಸಮಿತಿಯ ಅಧ್ಯಕ್ಷ ಡಾ.ಎಸ್‌.ಚಂದನ್ ಕುಮಾರ್‌, ಡಾ.ರವೀಂದ್ರ ನಾಯಕ್, ಡಾ.ರಾಜೇಂದ್ರ ಹಾಗೂ ರುದ್ರೇಶ್ ಹುನ್ಸಾಳ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...