ಉಡುಪಿ | ಕೊಲ್ಲೂರು ಕೊರಗ ಮಹಿಳೆಯ ಮನೆ ಧ್ವಂಸ, ಡಿಸಿ ಮತ್ತು ಎಸ್ ಪಿಗೆ ಮನವಿ ಸಲ್ಲಿಕೆ

Date:

ನಕಲಿ ದಾಖಲೆ ಮುಂದಿಟ್ಟುಕೊಂಡು ಕೋರ್ಟಿನಿಂದ ಆದೇಶ ತಂದು ಕೊಲ್ಲೂರಿನ ಕೊರಗ ವಿಧವಾ ಮಹಿಳೆ ಗಂಗೆ ಅವರ ಮನೆಯನ್ನು ಜೆಸಿಬಿ ಮೂಲಕ ನೆಲಸಮ ಮಾಡಿ ಧ್ವಂಸಗೊಳಿಸಿದ ಜಗದಾಂಭಾ ಟ್ರಸ್ಟ್ ವಿರುದ್ಧ ಸೂಕ್ತ ಕ್ರಮಕೊಳ್ಳು ವಂತೆ ಆಗ್ರಹಿಸಿ ಇಂದು ಕರ್ನಾಟಕ ಮತ್ತು ಕೇರಳ ಕೊರಗ ಒಕ್ಕೂಟ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಶಾಖೆ ವತಿಯಿಂದ ಮನವಿ ಸಲ್ಲಿಸಲಾಯಿತು.

1005211469

ಸಂತ್ರಸ್ತೆ ಮಹಿಳೆ ಗಂಗೆ ಅವರಿಗೆ ಅದೇ ಜಾಗದಲ್ಲಿ ಹಕ್ಕು ಪತ್ರ ನೀಡಿ ಮನೆ ನಿರ್ಮಿಸಿಕೊಡಬೇಕು ಮತ್ತು ಸೂಕ್ತ ಪರಿಹಾರ ಒದಗಿಸಬೇಕು. ದಲಿತ ದೌರ್ಜನ್ಯ ನಿಷೇಧ ಕಾಯ್ದೆ ಅನ್ವಯ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.

ಮನವಿಗೆ ಸ್ಪಂಧಿಸಿದ ಅಧಿಕಾರಿಯವರು ಇನ್ನೆರಡು ದಿನದೊಳಗೆ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ನಿಯೋಗದಲ್ಲಿ ಸಂತ್ರಸ್ತೆ ಗಂಗೆ, ಕೊರಗ ಒಕ್ಕೂಟದ ಸುಶೀಲ ನಾಡ, ಪುತ್ರನ್, ಕುಮಾರದಾಸ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು, ಸಂಘಟನಾ ಸಂಚಾಲಕರಾದ ಸುರೇಶ ಹಕ್ಲಾಡಿ, ಅಣ್ಣಪ್ಪ ನಕ್ರೆ, ಮಂಜುನಾಥ ನಾಗೂರು, ಗೀತಾ ಸುರೇಶ, ಚೈತ್ರ ಬೈಂದೂರು, ರಾಜು ಬೆಟ್ಟಿನಮನೆ, ಗೋಪಾಲಕೃಷ್ಣ ನಾಡ, ಸಂತ್ರಸ್ತೆಯ ಇಬ್ಬರು ಮಕ್ಕಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...