ಕೋಮುಲ್‌ ಹಗರಣ | ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡರಿಗೆ ಇ.ಡಿ ಶಾಕ್: ಆಸ್ತಿ ಮುಟ್ಟುಗೋಲು

Date:

ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ(ಕೋಮುಲ್‌) ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಕೆಯಾಗಿದ್ದ ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಅವರ ಆಸ್ತಿ ಮೇಲೆ ಇಡಿ ದಾಳಿ ನಡೆಸಿದ್ದು, ಆಸಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಇಡಿ ಬೆಂಗಳೂರು ವಲಯ ಈ ಆಸ್ತಿ ಜಪ್ತಿ ಮಾಡಿದೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಮಾಹಿತಿ ನೀಡಿದ್ದು, ಕೆ ವೈ ನಂಜೇಗೌಡ ಮತ್ತು ಇತರರಿಗೆ ಸೇರಿದ 1.32 ಕೋಟಿ ರೂ. ಮೊತ್ತದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ಹೇಳಿದೆ.

ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್‌) ನೇಮಕಾತಿ ಹಗರಣ 2023ರ ಕುರಿತು ಇಡಿ ತನಿಖೆಯನ್ನು ನಡೆಸುತ್ತಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಮನಿ ಲಾಡ್ರಿಂಗ್‌ ಪ್ರಕರಣದಡಿ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

3ನೇ ಬಾರಿಗೆ ಅಧ್ಯಕ್ಷ ಪಟ್ಟ: ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್‌) ಅಧ್ಯಕ್ಷರಾಗಿ 3ನೇ ಬಾರಿಗೆ ಕೆ ವೈ ನಂಜೇಗೌಡ ಆಯ್ಕೆಯಾಗಿದ್ದರು. ಕೋಮುಲ್‌ ನೇಮಕಾತಿ ಹಗರಣದ ಕುರಿತು ರಾಜ್ಯದಲ್ಲಿ ಭಾರೀ ಚರ್ಚೆ ನಡೆದಿತ್ತು.

2024ರ ಜನವರಿಯಲ್ಲಿ ಈ ಹಗರಣದ ತನಿಖೆ ಕೈಗೊಂಡಿದ್ದ ಇ.ಡಿ, ಶಾಸಕ ಕೆ ವೈ ನಂಜೇಗೌಡ ಮನೆಯಲ್ಲಿ ಶೋಧ ಕಾರ್ಯ ನಡೆಸಿತ್ತು. ಈ ದಾಳಿಯ ಬಳಿಕ ಮಾತನಾಡಿದ್ದ ಶಾಸಕರು, “ನನ್ನಂಥ ಸಾಮಾನ್ಯದವನ ಮನೆಗೆ ಇಡಿ ಬಂದಿರುವುದು ನೋವಿನ ಸಂಗತಿಯಾಗಿದೆ. ನಮ್ಮ ಕುಟುಂಬದವರು ಎಲ್ಲ ಮಾಹಿತಿ ಕೊಟ್ಟಿದ್ದೇವೆ” ಎಂದು ಹೇಳಿದ್ದರು.

“ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಂದ ಹೊರಬರುವ ವಿಶ್ವಾಸವಿದೆ. ಅಧಿಕಾರಿಗಳು ಮೂರು ವಿಷಯದ ಕುರಿತು ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ನಾವು ಸಮರ್ಪಕ ಉತ್ತರ ಕೊಟ್ಟಿದ್ದೇವೆ. ಮುಂದೆಯೂ ವಿಚಾರಣೆಗೆ ಹಾಜರಾಗುತ್ತೇನೆ” ಎಂದು ತಿಳಿಸಿದ್ದರು.

ಇ.ಡಿ ಪ್ರಕಾರ ಕೋಮುಲ್ ನೇಮಕಾತಿಗಾಗಿ 2023ರ ಡಿಸೆಂಬರ್‌ನಲ್ಲಿ 320 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಯಿತು. ಆಯ್ಕೆಯಾದ 75 ಅಭ್ಯರ್ಥಿಗಳ ಪಟ್ಟಿಯನ್ನು ಕೋಮುಲ್‌ಗೆ ಕಳಿಸಲಾಯಿತು, ಅನುಮೋದನೆ ಸಿಕ್ಕಿತು. ಆದರೆ ಅಭ್ಯರ್ಥಿಗಳ ಫಲಿತಾಂಶಗಳನ್ನು ಪ್ರಕಟಿಸದೇ ಅವರನ್ನು ತರಬೇತಿಗೆ ಕಳಿಸಲಾಗಿದೆ ಎನ್ನಲಾಗಿದೆ.

ಜಾರಿ ನಿರ್ದೇಶನಾಲಯ, ಕೋಮುಲ್ ನೇಮಕಾತಿ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ರಾಜ್ಯಪಾಲರು ಮತ್ತು ಲೋಕಾಯುಕ್ತಕ್ಕೆ ಪತ್ರವನ್ನು ಬರೆದಿತ್ತು. ಮಂಗಳೂರು ವಿಶ್ವವಿದ್ಯಾಲಯ ಈ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು.

ಕೆ ವೈ ನಂಜೇಗೌಡ ಮತ್ತು ಅವರ ಸಹಚರರ ವಿರುದ್ಧ ಆರೋಪಗಳನ್ನು ಮಾಡಲಾಗಿತ್ತು. ಉದ್ಯೋಗ ನೀಡಲು ಹಣ ಪಡೆಯಲಾಗಿದೆ ಎಂಬುದು ಗಂಭೀರ ಆರೋಪವಾಗಿತ್ತು. ಆದ್ದರಿಂದ ಇ.ಡಿ ಶಾಸಕರ ನಿವಾಸದ ಮೇಲೆ ದಾಳಿಯನ್ನು ಮಾಡಿತ್ತು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದಲಿತರ ಭೂಮಿ, ವಸತಿ ಹಕ್ಕಿಗಾಗಿ ನಾಳೆ ಧರಣಿ

“ನೇಮಕಗೊಂಡ 75 ಅಭ್ಯರ್ಥಿಗಳ ಹೇಳಿಕೆಯನ್ನು ಇಡಿ ದಾಖಲು ಮಾಡಿಕೊಂಡಿತ್ತು. ಅಭ್ಯರ್ಥಿಗಳು ನೇಮಕಾತಿ ವೇಳೆ ಹಣ ಕೊಟ್ಟಿದ್ದು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಈ ಕುರಿತು ತನಿಖೆ ಮಾಡಬೇಕು” ಎಂದು ಲೋಕಾಯುಕ್ತರಿಗೆ ಇಡಿ ತಿಳಿಸಿತ್ತು.

“ಕೋಮುಲ್‌ನಲ್ಲಿ 81 ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಗೆ ಶೇ.85 ಮತ್ತು ಸಂದರ್ಶನಕ್ಕೆ ಶೇ.15ರಷ್ಟು ಅಂಕ ನಿಗದಿ ಮಾಡಲಾಗಿತ್ತು. ಆದರೆ ಒಎಂಆರ್‌ ಶೀಟ್‌ಗಳನ್ನು ತಿರುಚಿ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅನುಕೂಲ ಮಾಡಿಕೊಟ್ಟು ಅವರಿಂದ ₹30 ಲಕ್ಷದವರೆಗೆ ಹಣ ಪಡೆಯಲಾಗಿದೆ” ಎಂದು ಆರೋಪಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...