ಉಡುಪಿ | ಮಕ್ಕಳ ರಂಗಶಿಬಿರ ‘ಕೊಂಡಾಟ’ ಉದ್ಘಾಟಿಸಿದ ರಂಗಕರ್ಮಿ ಸಂತೋಷ್‌ ಶೆಟ್ಟಿ

Date:

ನಾವು ನಮ್ಮ ಮಕ್ಕಳನ್ನು ಒಂಟಿಯಾಗಿಸಿದ್ದೇವೆ. ಸಮುದಾಯ ಪ್ರಜ್ಞೆ ಸಿಗದಂತೆ ಮಾಡಿದ್ದೇವೆ. ಬೇಸಿಗೆ ಶಿಬಿರಗಳು ಸಮುದಾಯ ಪ್ರಜ್ಞೆಯನ್ನು ಮೂಡಿಸಲಿ ಎಂದು ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ರಂಗಕರ್ಮಿ ಸಂತೋಷ್‌ ಶೆಟ್ಟಿ ಹಿರಿಯಡ್ಕ ತಿಳಿಸಿದರು.

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿರುವ ಮಕ್ಕಳ ರಂಗಶಿಬಿರ ‘ಕೊಂಡಾಟ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಎಲ್ಲರೂ ಒಟ್ಟಾಗಿ ಬೆರೆಯುವ ಮೂಲಕ ಸಹಬಾಳ್ವೆಯನ್ನು ಮಕ್ಕಳಿಗೆ ಕಲಿಸಿಕೊಡಬೇಕಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಬೆರೆಯುವುದು, ಸಹಬಾಳ್ವೆಯಿಂದ ಬದುಕುವುದೇ ಸಮುದಾಯಪ್ರಜ್ಞೆ. ಸುಮನಸಾ ಕೊಡವೂರು ಸಂಘಟನೆಯು ಹಲವು ವರ್ಷಗಳಿಂದ ರಂಗಶಿಬಿರದ ಮೂಲಕ ಈ ಕೆಲಸ ಮಾಡುತ್ತಿದೆ’ ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬದುಕಿನಲ್ಲಿ ಧಾವಂತಕ್ಕೆ ಬಿದ್ದಿದ್ದೇವೆ. ಗೊಂದಲಮಯವಾದ ವಾತಾವರಣ ಸೃಷ್ಟಿಯಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲರೂ ಸ್ಪರ್ಧಿಗಳಾಗಿದ್ದಾರೆ. ಇಂಥ ಶಿಬಿರಗಳಲ್ಲಿಯಾದರೂ ಪರಸ್ಪರ ಸ್ಪರ್ಧೆಗೆ ಬೀಳದೇ ನಾವೆಲ್ಲರೂ ಗೆಲ್ಲಬೇಕು ಎಂಬ ಮನಃಸ್ಥಿತಿಯನ್ನು ಕಲಿಸುವಂತಾಗಬೇಕು ಎಂದು ಸಲಹೆ ನೀಡಿದರು.

ನಿಮ್ಮ ವಯಸ್ಸಿಗೆ ಅನುಗುಣವಾದ ಪುಸ್ತಕಗಳನ್ನು ಓದುವ, ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳುವ, ಸಾಂಸ್ಕೃತಿಕ ಪ್ರಜ್ಞೆಯೊಂದಿಗೆ ಸಮುದಾಯ ಪ್ರಜ್ಞೆಯನ್ನು ಕಲಿಯುವ, ಸಮುದಾಯದೊಂದಿಗೆ ಬೆರೆತು ಬದುಕುವ ಶಿಕ್ಷಣ ಮಕ್ಕಳಿಗೆ ನೀಡಲು ಸಾಧ್ಯವಾದರೆ ಅದುವೇ ಶಿಬಿರದ ಯಶಸ್ಸು ಆಗಲಿದೆ ಎಂದು ಹೇಳಿದರು.

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿದರು. ‘ಕೊಂಡಾಟದ ನಿರ್ದೇಶಕ ಅಕ್ಷತ್ ಅಮೀನ್‌ ವಂದಿಸಿದರು. ಸಂಘಟನೆಯ ಉಪಾಧ್ಯಕ್ಷ ಯೋಗೀಶ್‌ ಕೊಳಲಗಿರಿ ನಿರೂಪಿಸಿದರು. ಸುಮನಸಾ ಕೊಡವೂರು ಸಂಚಾಲಕ ಭಾಸ್ಕರ ಪಾಲನ್‌, ರಂಗನಿರ್ದೇಶಕ ದಿವಾಕರ ಕಟೀಲ್‌ ಉಪಸ್ಥಿತರಿದ್ದರು.
ರಂಗ ಶಿಬಿರವು 15 ದಿನಗಳ ಕಾಲ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...