ಉಡುಪಿ | ಕೊಂಕಣಿ ಜಾನಪದ ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು: ವಂ. ಡೆನಿಸ್ ಡೇಸಾ

Date:

ನಮ್ಮಲ್ಲಿರುವ ಕೊಂಕಣಿ ಸಂಪ್ರದಾಯ ಜಾನಪದೀಯ ಸಂಸ್ಕೃತಿಗಳು ವಿಶಿಷ್ಠ ಮತ್ತು ವೈವಿಧ್ಯಮಯವಾಗಿದ್ದು, ಅದನ್ನು ಉಳಿಸಿ ಪೋಷಿಸುವ ಅಗತ್ಯವಿದೆ ಎಂದು ಉಡುಪಿಯ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ವಂ. ಡೆನಿಸ್ ಡೇಸಾ ಹೇಳಿದರು.

ಅವರು ಗುರುವಾರ ತೊಟ್ಟಂ ಚರ್ಚಿನ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಯುವ ಕಥೊಲಿಕ ವಿದ್ಯಾರ್ಥಿ ಸಂಚಾಲನ ಹಾಗೂ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ವೈಸಿಎಸ್ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಕೊಂಕಣಿ ಜಾನಪದ ಹಾಡು ಹಾಗೂ ವಾದ್ಯಗಳ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಪಾಶ್ಚ್ಯಾತೀಕರಣವಾಗುತ್ತಿರುವ ಇಂದಿನ ಸಮಾಜದಲ್ಲಿ ಯುವಕರು ಊರಿನಿಂದ ವಲಸೆ ಹೋಗುತ್ತಿದ್ದು, ನಮ್ಮ ಸಂಸ್ಕೃತಿಯನ್ನು ಮರೆತು ವಿದೇಶಿ ಸಂಸ್ಕೃತಿಯ ದಾಸರಾಗುತ್ತಿರುವುದು ಖೇದಕರ ಸಂಗತಿಯಾಗಿದೆ. ನಾವು ಎಲ್ಲೇ ಇದ್ದರೂ ಕೂಡ ನಮ್ಮ ನೆಲ, ಭಾಷೆಯನ್ನು ಪ್ರೀತಿಸುವುದರೊಂದಿಗೆ ನಮ್ಮ ಸಂಸ್ಕೃತಿಯನ್ನು ಉಳಿಕೊಳ್ಳಬೇಕು. ದೀಪಾವಳಿಯ ಈ ಪರ್ವಕಾಲದಲ್ಲಿ ಕೊಂಕಣಿ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಕಾರ್ಯಾಗಾರ ಅರ್ಥಗರ್ಭಿತವಾದುದು. ಈ ಮೂಲಕ ನಮ್ಮ ಸಂಸ್ಕೃತಿಯನ್ನು ಬೆಳೆಸಿ ಪೋಷಿಸುವುದರೊಂದಿಗೆ ಮುಂದಿನ ಜನಾಂಗಕ್ಕೆ ಇದರ ಅರಿವು ಇರುವಂತೆ ಎಚ್ಚರಿಕೆ ವಹಿಸುವ ಅಗತ್ಯತೆ ಇದೆ. ನಾವು ನಮ್ಮ ಹಳೆಯ ಕೊಂಕಣಿ ಜಾನಪದ ಸಂಸ್ಕೃತಿ ಉಳಿಸುವುದರೊಂದಿಗೆ ಕಲಾವಿದರನ್ನು ಕೂಡ ಗುರುತಿಸುವ ಕಾರ್ಯ ನಡೆಯಬೇಕು ಈ ಮೂಲಕ ನಮ್ಮ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಂಕಣಿ ಜಾನಪದ ಹಾಡು ಹಾಗೂ ವಾದ್ಯಗಳ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಕೊಂಕಣ್ ಮೈನಾ ಬಿರುದಾಂಕಿತರಾದ ಹೆಸರಾಂತ ಗಾಯಕ ದಿ. ವಿಲ್ಫೀ ರೆಬಿಂಬಸ್ ಅವರ ಪತ್ನಿ ಮೀನಾ ರೆಬಿಂಬಸ್ ಕಳಸಿಗೆಗೆ ಅಕ್ಕಿಯನ್ನು ತುಂಬಿಸುವುದರ ಮೂಲಕ ಉದ್ಘಾಟಿಸಿದರು.

ತೊಟ್ಟಂ ಘಟಕದ ವೈಸಿಎಸ್ ಸದಸ್ಯರು ಕೊಂಕಣಿ ಜಾನಪದ ವಾದ್ಯ ಗುಮಟೆಯ ಮೂಲಕ ಸಂಗೀತ ಪ್ರದರ್ಶನ ಮಾಡಿದರು. ಕ್ಯಾಥರಿನ್ ರೊಡ್ರಿಗಸ್, ಡೆಲ್ಟನ್ ಲೋಬೊ, ಜಾಸ್ಮೀನ್ ಜೆನಿಫರ್ ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಕಾರ್ಯಕ್ರಮದಲ್ಲಿ ಧರ್ಮಪ್ರಾಂತ್ಯದ ಸುಮಾರು 500ಕ್ಕೂ ಅಧಿಕ ಯುವಜನರು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ? ವಕ್ಫ್‌ ಆಸ್ತಿ ವಿವಾದ | ಫಲಿಸಿತು ಬಿಜೆಪಿ (ಕು)ತಂತ್ರ; ಕಡಕೋಳದಲ್ಲಿ ಭುಗಿಲೆದ್ದ ಕೋಮು ಗಲಭೆ

ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಯುವ ನಿರ್ದೇಶಕರಾದ ವಂ. ಸ್ಟೀಫನ್ ಫೆರ್ನಾಂಡಿಸ್, ವೈಸಿಎಸ್ ಕೇಂದ್ರಿಯ ಸಚೇತಕಿ ಕವಿತಾ ಡಿಸಿಲ್ವಾ, ತೊಟ್ಟಂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸುನೀಲ್ ಫೆರ್ನಾಂಡಿಸ್, ತೊಟ್ಟಂ ವೈಸಿಎಸ್ ಅಧ್ಯಕ್ಷರಾದ ಜೋಶ್ವಾ ಫೆರ್ನಾಂಡಿಸ್, ಸಚೇತಕಿ ಸುನೀತಾ ಮಾರ್ಟಿಸ್, ಪ್ರೀಶಲ್ ಡಿಮೆಲ್ಲೊ ಉಪಸ್ಥಿತರಿದ್ದರು. ತೊಟ್ಟಂ ಘಟಕದ ಸಚೇತಕಿ ಲವೀನಾ ಆರೋಜಾ ಸ್ವಾಗತಿಸಿ, ಲೆಸ್ಲಿ ಆರೋಝಾ ಕಾರ್ಯಕ್ರಮ ಸಂಘಟಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...