ಕೂಡ್ಲಿಗಿ | ಗೌರವ ಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಅಂಗನವಾಡಿ ನೌಕರರ ಒತ್ತಾಯ: ಶಾಸಕರ ಮೂಲಕ ಪತ್ರ

Date:

ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ, ತಮಗೆ ಗೌರವಧನ ಹೆಚ್ಚಿಸಿ ನಿರ್ಧಾರ ಕೈಗೊಂಡು ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ, ಮತ್ತು ಸಹಾಯಕಿಯರ ಫೆಡರೇಷನ್ ಎಐಟಿಯುಸಿ ನೇತೃತ್ವದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಕೂಡ್ಲಿಗಿ ಘಟಕದ ಪದಾಧಿಕಾರಿಗಳು, ಕೂಡ್ಲಿಗಿ ಶಾಸಕರಿಗೆ ತಮ್ಮ ಹಕ್ಕೊತ್ತಾಯ ಪತ್ರವನ್ನು ನೀಡಿ, ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು, ಇತ್ತೀಚೆಗೆ ನೀಡಿರುವ ಹೇಳಿಕೆಯಂತೆ ಆರನೇ ಗ್ಯಾರಂಟಿ ಎಂದು ಪರಿಗಣಿಸಬಹುದಾದ. ಅಂಗನವಾಡಿ ಕಾರ್ಯಕರ್ತರಿಗೆ, ಮತ್ತು ಸಹಾಯಕಿಯರಿಗೆ ಗೌರವ ಧನ ಹೆಚ್ಚಿಸುವಂತೆ ಕ್ರಮಕ್ಕಾಗಿ ಸದನದಲ್ಲಿ ಪ್ರಸ್ತಾವನೆ ಸಲ್ಲಿಸಬೇಕು. ಈ ಬಗ್ಗೆ ಚರ್ಚಿಸುವಂತೆ ಶಾಸಕರಲ್ಲಿ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕರು ತಮ್ಮ ಹಕ್ಕೊತ್ತಾಯದ ಕುರಿತು ಚರ್ಚಿಸುವ ಮೂಲಕ, ಸರ್ಕಾರಕ್ಕೆ ತಮ್ಮ ಪರವಾಗಿ ಮನವಿ ಮಾಡುವುದರೊಂದಿಗೆ ಹೋರಾಟಕ್ಕೆ ಧ್ವನಿಯಾಗಬೇಕೆಂದು ಅವರು ಶಾಸಕರಲ್ಲಿ ಮನವಿ ಮಾಡಿದರು.

ಗೌರವ ಧನ ಹೆಚ್ಚಿಸಬೇಕು, ನಿವೃತ್ತರಿಗೆ ಇಡಿಗಂಟು ಧನ ನೀಡಬೇಕು, ಡಿ ದರ್ಜೆ ನೌಕರರೆಂದು ಸರ್ಕಾರ ಪರಿಗಣಿಸಿ ಘೋಷಿಸಬೇಕು ಸೇರಿದಂತೆ ತಮ್ಮ ವಿವಿಧ ಹಕ್ಕೊತ್ತಾಯಗಳನ್ನು ಮಾಡಿದ್ದು, ಅವುಗಳಿರುವ ಪತ್ರವನ್ನು ಶಾಸಕರ ಮೂಲಕ ಸರ್ಕಾರಕ್ಕೆ ನೀಡಿ ಒತ್ತಾಯಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಅಧ್ಯಕ್ಷೆ ಎನ್.ಸುಮಾ ಹಾಗೂ ಎಐಟಿಯುಸಿ ಮುಖಂಡ ಹೆಚ್.ವೀರಣ್ಣ ನೇತೃತ್ವದಲ್ಲಿ. ಪಟ್ಟಣದಲ್ಲಿರುವ ಕ್ಷೇತ್ರದ ಶಾಸಕ ಡಾ. ಎನ್.ಟಿ.ಶ್ರೀನಿವಾಸ್ ಅವರ ಕಚೇರಿಯಲ್ಲಿ, ಭೇಟಿಯಾಗಿ ತಮ್ಮ ಹಕ್ಕೊತ್ತಾಯ ಪತ್ರವನ್ನು ನೀಡಿದರು.

ಮನವಿ ಸ್ವೀಕರಿಸಿ ಭರವಸೆ ನೀಡಿದ ಶಾಸಕ ಶ್ರೀನಿವಾಸ್, ಸುಮಾರು ವರ್ಷಗಳಿಂದಲೂ ಅಂಗನವಾಡಿ ಕಾರ್ಯಕರ್ತೆಯರು. ಸಮಾಜದ ಹಿತಕ್ಕಾಗಿ ಕರ್ತವ್ಯ ನಿರ್ವಹಣೆಯೊಂದಿಗೆ, ಸರ್ಕಾರದ ಇತರ ಸೇವೆಗಳನ್ನು ಪ್ರತಿ ಮನೆ ಮನೆಯ ಬಾಗಿಲಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಪ್ರತಿ ಮನುಷ್ಯ ಹುಟ್ಟಿನಿಂದ ಕೊನೆಯವರೆಗೂ ಮಾತ್ರವಲ್ಲ, ಮಣ್ಣಲ್ಲಿ ಲೀನವಾದ ಮೇಲೂ ಕೂಡ ಅಂಗನವಾಡಿ ನೌಕರರ ಸೇವೆ ಅನನ್ಯವಾಗಿದೆ ಎಂದು ಉಲ್ಲೇಖಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಚೂರು ಗ್ರಾಮೀಣ ಕೂಲಿಕಾರರ ಸತ್ಯಾಗ್ರಹ; ಸ್ವಾರ್ಥರಹಿತ ಜನಹಿತದ ಬೇಡಿಕೆಗಳು ಸರ್ಕಾರದ ಕಣ್ತೆರೆಸಲಿ ‌

ಭವ್ಯ ಭಾರತದ ಭಾವೀ ಸತ್ಪ್ರಜೆಗಳನ್ನು ಹುಟ್ಟು ಹಾಕುವ, ಅಂಗನವಾಡಿ ನೌಕರರು ಮಕ್ಕಳ ಸಾಕು ತಾಯಿಯಾಗಿದ್ದಾರೆ. ಸಮಾಜದಲ್ಲಿ ಅಂಗನವಾಡಿ ನೌಕರರ ಸೇವೆಯ ಮಹತ್ವದ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವೆ ಹಾಗೂ ನ್ಯಾಯಯುತವಾದ ನೆರವು ನೀಡುವಂತೆ ಸರ್ಕಾರಕ್ಕೆ ಕೋರುತ್ತೇನೆ ಮತ್ತು ಅರ್ಹ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸದನಲ್ಲಿ ಚರ್ಚಿಸುವ ಮೂಲಕ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕ.ರಾ.ಅಂ.ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ನ ತಾಲೂಕು ಉಪಾಧ್ಯಕ್ಷರಾದ ಕೆ.ಎನ್.ಕವಿತಾ, ಮುಖಂಡರಾದ ಜಿ.ಪಾರ್ವತಮ್ಮ, ಹೆಚ್.ಅನ್ನಪೂರ್ಣ, ಎಂ.ಸುಮಂಗಳ, ಒ.ಕರಿಬಸಮ್ಮ, ಭಿ.ಮಾಂತಮ್ಮ, ಜಿ.ಟಿ.ಮೀನಾಕ್ಷಮ್ಮ, ಮತ್ತು ತಾಲೂಕು ಸಮಿತಿ ಸದಸ್ಯರಾದ ಕೆ.ಪದ್ಮಾವತಿ, ಎಸ್.ಶಕುಂತಲಾ, ಶಿವಲೀಲಾ, ಪಿ.ಇಂದ್ರಮ್ಮ, ಎಸ್.ಚೌಡಮ್ಮ, ಕೆಂಚಮ್ಮ, ಎಸ್.ಸಾಕಮ್ಮ, ಜಿ.ಗಾಯತ್ರಿ, ಹೆಚ್.ಎಸ್.ಚಂದ್ರಮ್ಮ, ಎ.ಬಿ.ಬಸಮ್ಮ, ದ್ಯಾಮಕ್ಕ, ಒ.ಸುಜಾತ, ಡಿ.ಗಂಗಮ್ಮ, ಸುಮಲತಾ, ಬಿ.ರೇಣುಕಾ, ಜೆ.ಜಯಮ್ಮ, ಲಕ್ಷ್ಮೀ, ಯು.ಸುವರ್ಣಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವರದಿ: ವಿ.ಜಿ.ವೃಷಭೇಂದ್ರ ಕೂಡ್ಲಿಗಿ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...