ಕೊಪ್ಪ | ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಪಿಎಸ್ಐ ಬಸವರಾಜ್ ವಿರುದ್ಧ ಆರೋಪ

Date:

ಕೊಪ್ಪ ಪಿಎಸ್ಐ ಬಸವರಾಜ್ ತಮ್ಮದೇ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಗೆ ಲೈಂಗಿಕ ಕಿರುಕುಳ‌ ನೀಡಿರುವ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತಷ್ಟು ಮಹಿಳಾ ಪೊಲೀಸರು ಇದೀಗ ತಮಗಾದ ಕಿರುಕುಳದ ಬಗ್ಗೆ ಮೇಲಾಧಿಕಾರಿಗಳ ಭೇಟಿಗೆ ಮುಂದಾಗಿದ್ದು, ಇಂದು ಮತ್ತೆ ಮೂವರು ಮಹಿಳಾ ಪೊಲೀಸ್ ಸಿಬ್ಬಂದಿಗಳು ಕೊಪ್ಪ ಡಿವೈಎಸ್‌ಪಿಯವರ ಬಳಿ ತೆರಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಕೊಪ್ಪ ಡಿವೈಎಸ್‌ಪಿ ಕಚೇರಿಯಲ್ಲಿ ಸದ್ಯ ಮಹಿಳಾ ಪೇದೆಗಳಿಗೆ ಕೌನ್ಸೆಲಿಂಗ್‌ ನಡೆಸಲಾಗುತ್ತಿದೆ. ಮೂವರು ಮಹಿಳಾ ಸಿಬ್ಬಂದಿಗಳಿಂದ ಡಿವೈಎಸ್‌ಪಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಪ್ಪ ಡಿವೈಎಸ್‌ಪಿ ಹಾಗೂ ಮಹಿಳಾ ಕೌನ್ಸೆಲಿಂಗ್‌ ತಜ್ಞರು ವಿಚಾರಣೆ ನಡೆಸುತ್ತಿದ್ದಾರೆ. ಪಿಎಸ್ಐ ಬಸವರಾಜು ಕಿರುಕುಳದಿಂದ ಬೇಸತ್ತಿರುವ ಮಹಿಳಾ ಸಿಬ್ಬಂದಿಗಳು ಮೇಲಧಿಕಾರಿಗಳ ಮೊರೆ ಹೋಗಿದ್ದಾರೆ. ಕಳೆದ 2 ದಿನಗಳ ಹಿಂದೆ ಮಹಿಳಾ ಪೇದೆ ಆತ್ಮಹತ್ಯೆಗೆ ಯತ್ನಿಸಿದ ನಂತರ ಇದೀಗ ಮತ್ತೆ ಕೆಲವರು ತಮ್ಮ ನೋವು ಹೇಳಿಕೊಂಡಿರುವುದಾಗಿ ತಿಳಿದುಬಂದಿದೆ.

ಈ ನಡುವೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸುವಾಗ ಸಿಬ್ಬಂದಿಗಳಿಂದ ರಕ್ಷಿಸಲ್ಪಟ್ಟ ಮಹಿಳಾ ಪೊಲೀಸ್‌ ಕಾನ್ ಸ್ಟೇಬಲ್ ಇಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸದ್ಯ ಎಲ್ಲರ ದೂರು ಕುರಿತು ಮಾಹಿತಿ ಕಲೆ ಹಾಕುತ್ತಿರುವ ಹಿರಿಯ ಅಧಿಕಾರಿಗಳು ಸಮಸ್ಯೆ ಆಲಿಸುತ್ತಿದ್ದಾರೆ. ಈ ನಡುವೆ ಮೇಲಧಿಕಾರಿಗಳ ಸೂಚನೆ ಮೇರೆಗೆ ಡೆತ್ ನೋಟ್ ನಾಶಪಡಿಸಿರುವ ಆರೋಪವೂ ಕೇಳಿಬಂದಿದ್ದು, ಪಿಎಸ್ಐ ಬಸವರಾಜ್ ಈ ಹಿಂದೆ ಕೆಲಸ ಮಾಡಿದ್ದ ಹಲವು ಠಾಣೆಗಳಲ್ಲೂ ಕೆಲ ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ನೀಡಿರುವ ಆರೋಪವಿತ್ತು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ರುವಾಂಡೊ ದೇಶದ ಹೈಕಮಿಷನರ್ ಭೇಟಿ; ಸುವರ್ಣ ವಿಧಾನಸೌಧದ ಕುರಿತು ಸತೀಶ್‌ ಜಾರಕಿಹೊಳಿ ಮಾಹಿತಿ

koppa

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಸಂತ್ರಸ್ತ ಮಹಿಳಾ ಕಾನ್‌ಸ್ಟೆಬಲ್‌ ಅವರನ್ನು ಸಂಪರ್ಕಿಸಿದಾಗ ಮಾತನಾಡಿ, “ಆ ರೀತಿ ಯಾವುದೇ ಘಟನೆ ನಡೆದಿಲ್ಲ, ಸುಳ್ಳುಸುದ್ದಿ ಹರಿದಾಡಿದೆ. ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳು ಇರುವುದರಿಂದ ಕೌನ್ಸೆಲಿಂಗ್‌ ಪ್ರೊಸೆಸ್‌ ನಡೆಯುತ್ತಿದೆ” ಎಂದು ಪ್ರತಿಕ್ರಿಯಿಸಿದ್ದು, ಘಟನೆ ನಡೆದ ದಿನವೂ ನಾನು ಡ್ಯೂಟಿಯಲ್ಲಿಯೇ ಇದ್ದೆ, ಇಂದೂ ಕೂಡಾ ಡ್ಯೂಟಿಯಲ್ಲಿಯೇ ಇದ್ದೇನೆ. ನಿಮಗೇನಾದರೂ ಮಾಹಿತಿ ಬೇಕಿದ್ದರೆ, ಪಿಎಸ್ಐ ಅವರನ್ನೇ ಸಂಪರ್ಕಿಸಿ ಎಂದು ಅಸಮಂಜಸ ಉತ್ತರ ನೀಡಿರುವುದು ಅನುಮಾನಕ್ಕೆ ಪುಷ್ಠಿ ನೀಡಿದಂತಾಗಿದೆ.

ಸುಳ್ಳುಸುದ್ದಿ ಹರಡಿದವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ ಎಂಬ ಪ್ರಶ್ನೆಗೆ, ʼನಮ್ಮ ಹೆಸರು ಬಂದಿಲ್ಲ, ಹಾಗಿದ್ದಲ್ಲಿ ನಾನೇಕೆ ಮಾತನಾಡಲಿʼ ಎಂದು ಹೇಳಿರುವುದು ಒಟ್ಟಾರೆಯಾಗಿ ಮಹಿಳಾ ಸಿಬ್ಬಂದಿಗಳ ಮೇಲೆ ಲೈಂಗಿಕ ಕಿರುಕುಳ ನಡೆದಿರುವುದನ್ನು ಖಾತರಿಪಡಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...