ಕೊಪ್ಪಳ | 25, 26ರಂದು 10ನೇ ಮೇ ಸಾಹಿತ್ಯ ಸಮ್ಮೇಳನ: ಬಸವರಾಜ್ ಸೂಳಿಬಾವಿ

Date:

ಮೇ 25, 26ರಂದು ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ಮಂಗಲ ಭವನದಲ್ಲಿ 10ನೇ ಮೇ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಚಿಂತಕ ಹಾಗೂ ಲಡಾಯಿ ಪ್ರಕಾಶನದ ಬಸವರಾಜ್ ಸೂಳಿಬಾವಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರದಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿ, “ಮೇ ಸಾಹಿತ್ಯ ಮೇಳ ಬಳಗದ 10ನೇ ಸಾಹಿತ್ಯ ಸಮ್ಮೇಳನವು ಈ ಬಾರಿ ಹೈದರಾಬಾದ್ ಕರ್ನಾಟಕದ ವಿಶಿಷ್ಟ ಪರಂಪರೆಗಳ ನೆಲೆವೀಡಾದ ಕೊಪ್ಪಳದಲ್ಲಿ ನಡೆಯಲಿದ್ದು, ಎರಡು ದಿನಗಳ ಕಾಲ ಕಾರ್ಯಕ್ರಮದಲ್ಲಿ ಸಂವಿಧಾನ ಭಾರತ, ಧರ್ಮ ರಾಜಕಾರಣ ಎಂಬ ಮಹತ್ವದ ವಿಷಯದ ಸೂಕ್ತ ಚರ್ಚೆ, ಸಂವಾದ ನಡೆಯಲಿದೆ” ಎಂದು ಹೇಳಿದರು.

“ನಾಡಿನ ಹಲವು ಭಾಗಗಳಿಂದ ಬರುವ ಸಾಹಿತ್ಯಾಸಕ್ತರು, ಸಂವಿಧಾನ ಪ್ರೇಮಿಗಳು, ಸಮಾಜ ಸೌಹಾರ್ಧಕ್ಕೆ ದುಡಿಯುತ್ತಿರುವ ಚೇತನಗಳು, ಜನಪರ ಹೋರಾಟಗಳಲ್ಲಿ ತೊಡಗಿರುವ ಸಂಗಾತಿಗಳು, ಯುವಜನರು ಪಾಲ್ಗೊಳ್ಳಲಿದ್ದಾರೆ. ರಾಜ್ಯ ಮತ್ತು ಹೊರರಾಜ್ಯಗಳ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳುವರು. ಎರಡು ದಿನಗಳ ಮೇಳವನ್ನು ಅರ್ಥಪೂರ್ಣವಾಗಿ ನಡೆಸಲು ನಿಮ್ಮೆಲ್ಲರ ಭಾಗವಹಿಸಿಕೆ ಅತ್ಯಗತ್ಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಡೊನೇಷನ್‌ ಹಾವಳಿ ತಡೆಗೆ ದಲಿತ ವಿದ್ಯಾರ್ಥಿ ಪರಿಷತ್‌ ಆಗ್ರಹ

ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, “ಮೇ ಸಾಹಿತ್ಯ ಮೇಳದಲ್ಲಿ 25ರಂದು ಬೆಳಿಗ್ಗೆ 10ಕ್ಕೆ ಬಿ ಆರ್ ತುಬಾಕಿ ಮತ್ತು ದೇವಿಂದ್ರಪ್ಪ ಡೊಳ್ಳಿನ ಪುಸ್ತಕ ಮಳಿಗೆ ಉದ್ಘಾಟನೆಯನ್ನು ಬಳ್ಳಾರಿಯ ಸಿ ಚನ್ನಬಸವಣ್ಣ ನೆರವೇರಿಸುವರು, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಈರಪ್ಪ ಕಂಬಳಿ ರವಿತೇಜ ಅಬ್ಬಿಗೇರಿ ಪಾಲ್ಗೊಳ್ಳುವರು, ನಂತರ ವಿವಿಧ ಗೋಷ್ಠಿಗಳು ಜರುಗುವವು. 26 ರಂದು ಚಳವಳಿ ಮತ್ತು ಧರ್ಮ ರಾಜಕಾರಣ, ವಿವಿಧ ಗೋಷ್ಠಿಗಳ ನಂತರ ಸಮಾರೋಪ, ಪ್ರಶಸ್ತಿ ಪ್ರದಾನ ಜರುಗುತ್ತದೆ” ಎಂದರು.

ಸುದ್ದಿಗೋಷ್ಟಿಯಲ್ಲಿ ಟಿ ರತ್ನಾಕರ್, ಬಸವರಾಜ್ ಶೀಲವಂತರ್, ಡಿ ಎಂ ಬಡಿಗೇರ್, ಶರಣು ಶೆಟ್ಟರ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...