ಕೊಪ್ಪಳ | ಬಾಬು ಜಗಜೀವನರಾಮ್‌ ಅವರ 118ನೇ ಜಯಂತ್ಯೋತ್ಸವ

Date:

ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಬಾಬು ಜಗಜೀವನರಾಮ್ ಅವರ 118ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಸಮರ್ಪಿಸಿ ಗೌರವ ನಮನ ಸಲ್ಲಿಸಿದರು.

ಮುಖ್ಯ ಅತಿಥಿ ರಾಜಶೇಖರ್ ನಾರನಾಳ ಮಾತನಾಡಿ, “ನಾವು ಎಡ, ನಾವು ಬಲ ಎಂಬ ಪ್ರತಿಷ್ಠೆ ಬಿಟ್ಟು ಎಲ್ಲರೂ ಸಮಾಜ ಕಟ್ಟುವ ಕೆಲಸ ಮಾಡಬೇಕು. ಎಡ-ಬಲವೆಂದು ಕಚ್ಚಾಡುವುದೂ ಕೂಡ ನಮಲ್ಲಿ ನಾವು ಶ್ರೇಷ್ಠರೆಂದು ತೋರಿಸಿಕೊಳ್ಳುವ ಮಾನಸಿಕ ರೋಗ” ಎಂದರು.

“ಜಗತ್ತಿನ ಮಹಾ ಪುರುಷರ ಜೀವನ ಬಡತನದಲ್ಲಿ ಬಂದಿರುತ್ತದೆ. ಅವರ ಜೀವನ ನಮಗೆ ಆದರ್ಶವಾಗಿದೆ. ಜಗಜೀವನರಾಮ್ ಅವರ ತಂದೆ ಬ್ರಿಟಿಷ್ ಸರ್ಕಾರದ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಡಾ.ಬಾಬು ಜಗಜೀವನರಾಮ್ ಅವರು 1931ರಲ್ಲಿ ಪದವಿ ಮುಗಿಸಿ ದಲಿತ ಶೋಷಿತರಿಗಾಗಿ ಕೆಲಸ ಮಾಡಲು ಆರಂಭಿಸುತ್ತಾರೆ. ಬನಾರಸನಲ್ಲಿ‌ ಅಸ್ಪ್ರಶ್ಯ ಸಮುದಾಯಕ್ಕೆ ಕ್ಷೌರ ಮಾಡಲು ಬಹಿಷ್ಕಾರ ಹಾಕುತ್ತಾರೆ. ಆದರೆ, ಜಗಜೀವನರಾಮ್ ಅದಕ್ಕೆ ವಿರುದ್ಧವಾಗಿ ಬಹಿಷ್ಕಾರ ಹಾಕುತ್ತಾರೆ. ‘ಅಸ್ಪ್ರಶ್ಯರು ತಮ್ಮ ಕುಲನಾಮ‌ ತ್ಯಜಿಸಬೇಕು’ ಎಂದು ಹೇಳುತ್ತಾರೆ. ಅಂತರ್ಜಾತಿ ಮದುವೆ ಕಡ್ಡಾಯ ಮಾಡಬೇಕು ಹಾಗೂ ಸ್ವಜಾತಿ ವಿವಾಹ ಕಾನೂನು ಬಾಹಿರ’ವೆಂದು ಕಾನೂನು ಮಾಡಬೇಕೆಂದು ಪ್ರತಿಪಾದಿಸಿದವರು ಜಗಜೀವನರಾಮ್ ಅವರು ಮಾತ್ರ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಗಜೀವನರಾಮ್‌ ಹಾಗೂ ಅಂಬೇಡ್ಕರ್ ನಡುವೆ ಅಷ್ಟೊಂದು ಭಿನ್ನಾಭಿಪ್ರಾಯ ಇರಲಿಲ್ಲ. ಆದರೆ, ಸರ್ಕಾರದ ಹೊರಗಿದ್ದು ಸಮಾಜ ಕಟ್ಟುವ ಕೆಲಸ ಅಂಬೇಡ್ಕರ್ ಮಾಡಿದರೆ, ಡಾ.ಬಾಬು ಜ.ಜೀ.ರಾಮ್ ಸರ್ಕಾರದ ಒಳಗೇ‌ ಇದ್ದು ಸಮಾಜ ಕಟ್ಟುವ ಕಲಸ ಮಾಡಿದರು. ಎಡಬಲ ಬಿಟ್ಟು ಸಮಸಮಾಜ ಕಟ್ಟುವ ಕೆಲಸ ಮಾಡಬೇಕೆಂದು ಕರೆ ನೀಡಿದ್ದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಡಾ. ಓ ನಾಗರಾಜು ವಿರಚಿತ ʼಹಿಂದೂಪುರʼ ಕಾದಂಬರಿ ಜನಾರ್ಪಣೆ

ಸಂಸದ ಕೆ ರಾಜಶೇಖರ ಬಸಬವರಾಜ ಹಿಟ್ನಾಳ ಮಾತನಾಡಿ, “ಡಾ.ಬಾಬು ಜಗಜೀವನರಾಮ್ ಅವರು ಉಪ ಪ್ರಧಾನಿಯಾಗಿ, ಕೇಂದ್ರ ಮಂತ್ರಿಯಾಗಿ 8 ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದವರು” ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಮದ್ ಪಟೇಲ್, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಗುರುರಾಜ ಹಲಗೇರಿ, ವಿರೂಪಾಕ್ಷಪ್ಪ ಮೋರನಾಳ, ಗಾಳೆಪ್ಪ ಪೂಜಾರ, ಚನ್ನಬಸಪ್ಪ ಹೊಳೆಯಪ್ಪ, ರಾಮಣ್ಣ ಕಂದಾರಿ, ಗ್ಯಾನಪ್ಪ ಪೂಜಾರಿ, ಲಿಂಗರಾಜ, ಪರಶುರಾಮ ಕೆರಳ್ಳಿ, ಯಲ್ಲಪ್ಪ ಮುದ್ದಾಪುರ, ನಿಂಗಜ್ಜ ಹರ್ಲಾಪುರ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...