ಕೊಪ್ಪಳ | ಮಾನಸಿಕ ಒತ್ತಡ ಮೀರಿ ಮಹಿಳೆ ಜವಾಬ್ದಾರಿ ನಿಭಾಯಿಸಬಲ್ಲಳು: ಶೋಭಾ

Date:

ಇಂದು ಮಹಿಳೆ ಅಬಲೆಯಲ್ಲ. ಒಬ್ಬ ಮಹಿಳೆ ಮಾಡುವ ಕೆಲಸ ನೂರು ಗಂಡಸರ ಕೆಲಸಕ್ಕೆ ಸಮಾನಾಗಿರುತ್ತದೆ. ಮಹಿಳೆಯು ಮಾನಸಿಕ ಒತ್ತಡಗಳನ್ನು ಮೀರಿ ತನ್ನ ಜವಬ್ದಾರಿಗಳನ್ನು ನಿರ್ವಹಿಸುತ್ತಾಳೆ ಎಂದು ಎಐಎಮ್‌ಎಸ್‌ಎಸ್‌‌ನ ರಾಜ್ಯ ಕಾರ್ಯದರ್ಶಿ ಶೋಭಾ ಎಸ್ ಅಭಿಪ್ರಾಯಪಟ್ಟರು.

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ತಾಪಂ ಆವರಣದಲ್ಲಿರುವ ಕೃಷಿ ವಿಸ್ತರಣಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೊಪ್ಪಳ ಜಿಲ್ಲಾ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಸತ್ಯ ಹೇಳುವವರು ಕಡಿಮೆ ಜನ ಇರುತ್ತಾರೆ. ಆದರೆ, ಸಮಾಜ ಬೇಗ ಅದನ್ನು ಒಪ್ಪಿಕೊಳ್ಳಲ್ಳ. ಒಂದು ಕಾಲದಲ್ಲಿ ಭೂಮಿಯೇ ಕೇಂದ್ರ ಅದರ ಸುತ್ತ ಎಲ್ಲಾ ಗ್ರಹಗಳು ಸುತ್ತತ್ತವೆ ಅಂತಿದ್ರು.. ಈಗ ಅದರ ಸತ್ಯ ಗೊತ್ತಾದ ಮೇಲೆ ಸೂರ್ಯ ಕೇಂದ್ರ, ಭೂಮಿ ಮೂರನೇ ಗ್ರಹವಾಗಿ ಅದರ ಸುತ್ತ ಎಲ್ಲಾ ಗ್ರಹಗಳು ಸುತ್ತುತ್ತವೆ ಎಂಬ ಸತ್ಯ ಅರಿವಾಗಿದೆ. ಅದೇ ರೀತಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ ಎಸ್) ಪ್ರತಿ ಹಳ್ಳಿಗೂ ಭೇಟಿ ನೀಡಿ ಮಹಿಳೆಯರಲ್ಲಿ ಸತ್ಯದ ತಿಳಿವು ಹಾಗೂ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 20 at 9.23.14 AM

ಎಐಎಮ್‌ಎಸ್‌ಎಸ್‌ನ ರಾಜ್ಯ ಸೆಕ್ರೆಟರಿಯಟ್ ಸದಸ್ಯೆ ವಿಜಯಲಕ್ಷ್ಮಿ ಮಾತನಾಡಿ, “ಸಾವಿತ್ರಿ ಬಾಯಿ ಫುಲೆ ಅಂತ ಒಬ್ಬ ಮಹಿಳೆ ಸಮಾಜದ ಮಹಿಳಾ ವರ್ಗವನ್ನು ಜಾಗೃತಗೊಳಿಸಲು ಗಂಡ ಜ್ಯೋತಿಬಾ ಅವರಿಂದ ಸ್ವತಃ ಅಕ್ಷರ ಕಲಿತು ವಿಶೇಷವಾಗಿ ಹೆಣ್ಮಕ್ಕಳಿಗೆ ಓದು-ಬರಹ ಕಲಿಸಿದರು. ಆಗ ಸಾವಿತ್ರಿ ಬಾಯಿ ಪ್ರತಿ ಮನೆಗೆ ಹೋಗಿ ‘ನಿಮ್ಮ ಮನೆಯ ಹೆಣ್ಮಕ್ಕಳನ್ನು ಶಾಲೆಗೆ ಕಳಿಸಿ’ ಎಂದು ಮನೆಮನೆಗೆ ಕೇಳಲು ಹೋದಾಗ ಆವತ್ತು ಅವರಿಗೆ ಆದ ಅವಮಾನ, ನಿಂದನೆ, ನೋವು ಇವತ್ತು ಯಾರೂ ಅನುಭವಿಸಿಲ್ಲ. ಮಕ್ಕಳಿಗೆ ಪಾಠ ಹೇಳಲು ಹೋಗುವಾಗ ಅವರ ಮೈ ಮೇಲೆ ಗಂಜಲು ಎಸೆಯುತ್ತಿದ್ದರು, ಮೈಮೇಲೆ ಎಂಜಲು ಉಗುಳುತ್ತಿದ್ದರು. ಹೀಗೆ ಮಹಿಳೆಯರು ಎಚ್ಚೆತ್ತುಕೊಂಡಾಗಲೆಲ್ಲ ವೈಯಕ್ತಿಕ ನಿಂದನೆ, ಟೀಕೆ, ಅವಮಾನಗಳು ಆಗುತ್ತವೆ. ಆದರೆ, ನಾವು ಮಹಿಳೆಯರು ಜಾಗೃತರಾಗಬೇಕು ಎಚ್ಚೆತ್ತುಕೊಳ್ಳಬೇಕು” ಎಂದು ತಿಳಿಸಿದರು.

ಕೊಪ್ಪಳ ಜಿಲ್ಲಾ ಹೊಸ ಸಂಘಟನಾ ಸಮಿತಿ ರಚನೆಯಾಯಿತು. ಸಮಿತಿಯ ಅಧ್ಯಕ್ಷರಾಗಿ ಮಂಜುಳಾ ಮಜ್ಜಿಗಿ, ಕಾರ್ಯದರ್ಶಿಯಾಗಿ ಶಾರದಾ ಗಡ್ಡಿ, ಜಂಟಿ ಕಾರ್ಯದರ್ಶಿಯಾಗಿ ಹುಸೇನಬೀ, ಕಾರ್ಯಕಾರಿ ಸಮಿತಿಗೆ 10 ಜನ ಸದಸ್ಯರು ಹಾಗೂ ಕೌನ್ಸಿಲ್ ಸಮಿತಿಗೆ 6 ಜನ ಸದಸ್ಯರು ಸೇರಿದಂತೆ ಒಟ್ಟು 19 ಜನರ ಹೊಸ ಸಮಿತಿ ರಚನೆಯಾಯಿತು.

ಇದನ್ನೂ ಓದಿ: ಕೊಪ್ಪಳ | ಕರ್ತವ್ಯ ಲೋಪ ಆರೋಪ : ಆನೆಗೊಂದಿ ಗ್ರಾ.ಪಂ. ಪಿಡಿಒ ಅಮಾನತು

ಸಮಾವೇಶದಲ್ಲಿ ಎಐಎಮ್‌ಎಸ್‌ಎಸ್ ನ ಜಿಲ್ಲಾ ಸಂಘಟಕಿ ಮಂಜುಳಾ ಮಜ್ಜಿಗಿ ಸೇರಿದಂತೆ ವಿವಿಧ ಬಡಾವಣೆ, ಹಳ್ಳಿಯ ಮಹಿಳೆಯರು, ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...