ಕೊಪ್ಪಳ | ಅಮಿತ್ ಶಾ ಹೇಳಿಕೆಗೆ ಖಂಡನೆ; ಸಂವಿಧಾನ ಸಂರಕ್ಷಣಾ ಸಮಿತಿ ಜ.6ರಂದು ಬಂದ್‌ಗೆ ಕರೆ

Date:

ಸಂಸತ್ ಸದನದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಕೇಂದ್ರ ಸಚಿವ ಅಮಿತ್‌ ಶಾ ಅಪಮಾನ ಮಾಡಿದನ್ನು ಖಂಡಿಸಿ ಜನವರಿ 6ರಂದು “ಸಂವಿಧಾನ ಸಂರಕ್ಷಣಾ ಸಮಿತಿ” ಕೊಪ್ಪಳ ಬಂದ್‌ಗೆ ಕರೆ ನೀಡಿದೆ.

ಕೊಪ್ಪಳ ನಗರದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಮುಖರು ಮಾತನಾಡಿ, “ಸಂಸತ್‌ ಅಧಿವೇಶನದಲ್ಲಿ ಸಂವಿಧಾನದ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ ಬಿ ಅರ್ ಅಂಬೇಡ್ಕ‌ರ್ ಅವರ ಕುರಿತು ನಕಾರಾತ್ಮಕ ಹೇಳಿಕೆ ನೀಡಿದ್ದು, ಬಾಬಾ ಸಾಹೇಬ್‌ ಅವರಿಗೆ ಅವಮಾನ ಮಾಡಿದ್ದಾರೆ. ಸಂವಿಧಾನ ಮತ್ತು ದೇಶದ ಜನೆತೆಗೆ ಅವಮಾನ ಮಾಡಿದ್ದರಿಂದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡಲೇ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಂಪುಟದಿಂದ ವಜಾಗೊಳಿಸಿ ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ” ಎಂದು ಹೇಳಿದರು

“ಕೊಪ್ಪಳದ ಸಂವಿಧಾನ ಸಂರಕ್ಷಣಾ ಸಮಿತಿಯ ಮುಂದಾಳತ್ವದಲ್ಲಿ 2025ರ ಜನವರಿ 6ರ ಸೋಮವಾರದಂದು ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ. ಸಂವಿಧಾನ ಸಂರಕ್ಷಣೆ ಸಮಿತಿಗೆ ವಿವಿಧ ಪ್ರಗತಿಪರ ಸಂಘಟನೆಗಳು ಅಹಿಂದ ಮತ್ತು ಅಲ್ಪಸಂಖ್ಯಾತರ ಸಂಘಟನೆಗಳು ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳ ಬೆಂಬಲದೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಾಬಾ ಸಾಹೇಬರು ಈ ದೇಶದಲ್ಲಿ ಶೋಷಣೆಗೆ ಒಳಗಾದ ಜನರಿಗೆ ಬಹುದೊಡ್ಡ ಶಕ್ತಿಯನ್ನು ನೀಡಿದ್ದಾರೆ. ಸಂವಿಧಾನ ರಕ್ಷಿಸಬೇಕಾದ ಗೃಹಮಂತ್ರಿಗಳು ಸಂವಿಧಾನ ಶಿಲ್ಪಿ ಕುರಿತು ಈ ರೀತಿ ಮಾತನಾಡಿರುವುದು ಅಕ್ಷ್ಯಮ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 6ರಂದು ಪ್ರತಿಭಟನಾ ಮೆರವಣಿಗೆ ತಾಲೂಕು ಕ್ರೀಡಾಂಗಣದಿಂದ ಸಾಲಾರ ಜಂಗ್ ರಸ್ತೆ ಮೂಲಕ ಅಂಬೇಡ್ಕ‌ರ್ ವೃತ್ತ, ಶಾರದಾ ಟಾಕೀಸ್ ಕ್ರಾಸ್, ಗಡಿಯಾರ ಕಂಬ, ಜವಾಹರ ರಸ್ತೆ ಮೂಲಕ ಅಶೋಕ ಸರ್ಕಲ್‌ಗೆ ಆಗಮಿಸಿ ಮನವಿ ಸಲ್ಲಿಸಲಾಗುವುದು. ಮೆರವಣಿಗೆಯಲ್ಲಿ ಸುಮಾರು 10 ಸಾವಿರದಷ್ಟು ಜನ ಸೇರಬಹುದು” ಎಂದು ಮುಖಂಡರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪೊಲೀಸರ ಭರ್ಜರಿ ಕಾರ್ಯಾಚರಣೆ : ₹2.80 ಲಕ್ಷ ಮೌಲ್ಯದ ನಶೆಯುಕ್ತ ವಸ್ತು ಜಪ್ತಿ : ಮೂವರ ಬಂಧನ

ಈ ಸಂದರ್ಭದಲ್ಲಿ ಹನುಮೇಶ ಕಡೆಮನಿ, ಸಲೀಂ ಖಾದ್ರಿ, ಟಿ ರತ್ನಾಕರ, ಅಲ್ಲಮಪ್ರಭು ಬೆಟ್ಟದೂರು, ಕೆ ಎಸ್ ಮೈಲಾರಪ್ಪ ವಕೀಲರು, ಈಶಪ್ಪ, ಕಾಶಪ್ಪ ಚಲವಾದಿ, ರಾಮಣ್ಣ ಚೌಡ್ಮಿ, ಕೆ ಎಸ್ ಮೈಲಾರಪ್ಪ, ಹನುಮೇಶ ಕಡೆಮನಿ, ಸೈಯದ್ ನಾಸಿರ್ ಕಂಟಿ, ಡಿ ಎಚ್ ಪೂಜಾರ, ಸಿದ್ದರಾಮ ಹೊಸಮನಿ, ಆದಿಲ್ ಪಟೇಲ್, ರಾಮಣ್ಣ ಚೌಡಿ, ಪರಶುರಾಮ ಕೆರೆಹಳ್ಳಿ, ಸಾವಿತ್ರಿ ಮುಜುಂದಾರ, ಕಾಶಪ್ಪ ಚಲವಾದಿ, ನಿಂಗಜ್ಜ ಶಹಾಪೂರ, ನಿಂಗಜ್ಜ ಬನಕಾಳ, ಎಸ್ ಎ ಫಫಾರ್, ಸಲೀಂ ಕಾದ್ರಿ, ಸಲೀಂ ಆಳವಂಡಿ, ಎಂ ಗೊಂಡಬಾಳ, ಯಲ್ಲಪ್ಪ ಹಳೇಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...