ಕೊಪ್ಪಳ | ಎಮ್‌ಎಸ್‌ಪಿಎಲ್ ವಿರೋಧಿ ಸಭೆಗೆ ಸಮಯ ಕೊಟ್ಟೂ ಬಾರದ‌ ಶಾಸಕ; ಹೋರಾಟಗಾರರಿಂದ ಆಕ್ರೋಶ

Date:

ಬಲ್ಡೋಟಾ ಕೈಗಾರಿಕಾ ಕಾರ್ಖಾನೆಯ ವಿಸ್ತರಣೆಯ ವಿರೋಧಿ ಹೋರಾಟದ ಸಭೆಯನ್ನು ಶನಿವಾರ ಕರೆಯಲಾಗಿತ್ತು. ಈ ಸಭೆಗೆ ಬೆಳಗ್ಗೆ 11 ಗಂಟೆಯಿಂದ 3 ಗಂಟೆಯವರೆಗೂ ಕಾದರೂ ಬಾರದ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಡೆಯನ್ನು ಕಂಡು ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಷಣಾ ವೇದಿಕೆ ಕೊಪ್ಪಳ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಶಾಸಕರ ಜೊತೆ ಬಿಎಸ್‌ಪಿಎಲ್, ಎಮ್‌ಎಸ್‌ಪಿಎಲ್ ಕಂಪನಿಗಳ ವಿರೋಧಿಸಿ ಹಾಗೂ ಬಲ್ಡೋಟಾ ಕಂಪನಿಯಲ್ಲಿ ಕಾರ್ಯಚಟುವಟಿಕೆಗಳು ಸದ್ದಿಲ್ಲದೆ ನಡೆದಿದ್ದು, ಅದರ ಶಾಸಕರ ಜೊತೆ ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿ ಹಾಗೂ ಚರ್ಚೆ ನಡೆಸಬೇಕಿತ್ತು, ಆದರೆ, ಶಾಸಕ ರಾಘವೇಂದ್ರ ಹಿಟ್ನಾಳರವರು ಮಾತು ತಪ್ಪಿದ್ದರಿಂದ ಚಳುವಳಿಗಾರರು ಆಕ್ರೋಶಿತರಾಗಿ ಸಭೆ ಮೊಟಕುಗೊಳಿಸಿದರು‌.

ಕೆಲವು ದಿನಗಳ ಹಿಂದೆ ಸಂಸದ ರಾಜಶೇಖರ ಹಿಟ್ನಾಳ ನಗರದ ಪ್ರವಾಸಿ ಮಂದಿರದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೆದಿಕೆ ವತಿಯಿಂದ ಸಭೆ ನಡೆಸಿ ‘ಬಲ್ಡೋಟಾ ಕಾರ್ಖಾನೆ ತೊಲಗುವವರೆಗೂ ಹೋರಾಟ ನಿಲ್ಲಿಸಬಾರದು. ನಿಮ್ಮ ಜೊತೆ ನಾವು ಇದ್ದೇವೆ ಹಾಗೂ ಸರಕಾರವೂ ಇದೆ’ ಎಂದು ಚಳುವಳಿಗಾರರಲ್ಲಿ ಧೈರ್ಯ ತುಂಬಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001137627

ಶಾಸಕ ರಾಘವೇಂದ್ರ ಹಿಟ್ನಾಳ ಬರ‌ತೇನಿ ಎಂದು ಹೇಳಿ ಪ್ರಗತಿಪರರನ್ನ, ಸಾಹಿತಿಗಳನ್ನ, ಪರಿಸರವಾದಿಗಳನ್ನ ಹಾಗೂ ಹೋರಾಟಗಾರರನ್ನ ಕಾಯಿಸಿದ್ದು ಯಾಕೆ? ಎಂಬ ಪ್ರಶ್ನೆ ಹೋರಾಟಗಾರರಲ್ಲಿ ಉದ್ಭವಿಸಿದೆ. ಶಾಸಕರು ಒತ್ತಡಕ್ಕೇನಾದರೂ ಒಳಗಾಗಿದ್ದಾರೆಯೇ? ಉದ್ದೇಶಪೂರ್ವಕವಾಗಿ ಕಾಯಿಸಿದರೆ? ಜಂಟಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಬಲ್ಡೋಟಾ ಕಂಪನಿ ಚರ್ಚಿಸಲು ಶಾಸಕರೇ ನಗರದ ಪ್ರವಾಸಿ ಮಂದಿರದಲ್ಲಿ ಸಭೆಗೆ ಸಮಯ ನಿಗದಿ ಮಾಡಿ ಗೈರಾಗಿದ್ದು ಯಾಕೆ ಎಂದು ಪ್ರಶ್ನಿಸಿ, ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

1001137628

ಹೋರಾಟಗಾರ ಬಸವರಾಜ್ ಶೀಲವಂತರ ಮಾತನಾಡಿ, “ಶಾಸಕರೇ ಬಲ್ಡೋಟಾ ವಿರೋಧಿ ಹೋರಾಟ ಕ್ರಿಯಾ ಸಮಿತಿ ಸಭೆಗೆ ಸಮಯ ಹಾಗೂ ಸ್ಥಳ ನಿಗದಿ ಮಾಡಿ ಮಧ್ಯಾಹ್ನ 3 ಗಂಟೆಯವರೆಗೂ ನಮ್ಮನ್ನು ಕಾಯಿಸಿ ಕೊನೆಗೂ ಬರಲಿಲ್ಲ ಎಂದರೆ, ಈ ಕಂಪನಿ ವಿಸ್ತರಣೆ ವಿರೋಧಿ ಸಭೆಗೆ ಹಾಜರಾಗದಂತೆ ಅವರಿಗೆ ಒತ್ತಡ ಬಂದಿರಬಹುದು” ಎಂದು ಸಂಶಯ ವ್ಯಕ್ತಪಡಿಸಿ ಆಕ್ರೋಶಿತರಾದರು.

ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, “ಶಾಸಕರಿಗೆ ಸಮಯ ಪ್ರಜ್ಞೆ ಇಲ್ಲದಿರುವುದು ತುಂಬಾ ನೋವು ತರಿಸಿದೆ. ಅವರೇ ಸಮಯ ಕೊಟ್ಟು ನಿಗದಿ ಮಾಡಿ; ‘ಅರ್ಧ ಗಂಟೆಯಲ್ಲಿ ಬರುತ್ತೇನೆ’ ಎಂದು ಹೇಳಿ ಕೊನೆಗೆ ನಮ್ಮ ಕರೆಯನ್ನೂ ಸ್ವೀಕರಿಸದೇ ಕಾಯಿಸಿದರು. ಶಾಸಕರ ಈ ನಡೆಯನ್ನು ಕಂಡರೆ ಕೊಪ್ಪಳ ಜನರಲ್ಲಿ ಸಂಶಯ ಮೂಡುತ್ತಿದೆ ಅವರು ಕಂಪನಿಯ ಪರವಾಗಿ ಒಳಗೊಳಗೇ ಇದ್ದಾರೆ” ಎಂದು ಶಾಸಕರ ವಿರುದ್ಧ ಗುಡುಗಿದರು.

ಶಿವಪ್ಪ ಹಡಪದ, ಕೆ.ಬಿ.ಗೋನಾಳ, ಗಾಳೆಪ್ಪ, ಗವಿಸಿದ್ದಪ್ಪ, ಶರಣು ಪಾಟೀಲ್, ಮುದಕಪ್ಪ ಹೊಸಮನಿ, ಈಶ್ವರ ಹತ್ತಿ, ಮಹಾಂತೇಶ ಕೊತಬಾಳ, ರವಿ ಕಾಂತಣ್ಣವರ, ಪರಿಸರ ಹಿತರಕ್ಷಣಾ ವೇದಿಕೆ ಹಾಗೂ ಜಿಲ್ಲಾ ಬಚಾವೋ ಆಂದೋಲನದ ಸರ್ವಸದಸ್ಯರು ಈ ಸಭೆಗೆ ಬಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...