ಕೊಪ್ಪಳ | ಬಿಜೆಪಿ ಸೇರಿ ಅಣ್ಣಾಮಲೈ ಪಶ್ಚಾತ್ತಾಪ ಪಡ್ತಿದ್ದಾರೆ: ಸಚಿವ ಶಿವರಾಜ್ ತಂಗಡಗಿ

Date:

ಅಣ್ಣಾಮಲೈ ಒಳ್ಳೆಯ ಐಪಿಎಸ್ ಅಧಿಕಾರಿಯಾಗಿದ್ದರು. ಬಿಜೆಪಿಗೆ ಹೋಗಿ ಮೋಸ ಹೋದರೆ, ಅವರೇ ಪ್ರಾಮಾಣಿಕರನ್ನು ಕರೆದು ಪಕ್ಷದಲ್ಲಿ ಸೇರಿಸಿಕೊಂಡು ಬೀದಿಗೆ ಬಿಡುವ ಕೆಲಸ ಮಾಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಅಣ್ಣಾಮಲೈ ದಕ್ಷ ಅಧಿಕಾರಿಯಾಗಿ ಜನರ ವಿಸ್ವಾಸ ಗಳಿಸಿದ್ದರು. ಈಗ ಬಿಜೆಪಿಗೆ ಹೋಗಿದ್ದರಿಂದ ಅವರ ಇಡೀ ಬದುಕು‌ ಏನಾಗಿದೆಯೆಂದು ಗಮನಿಸುತ್ತಿದ್ದೇವೆ. ರಸ್ತೆಯಲ್ಲಿ ನಿಂತು ಬಾರ್ಕೋಲಲ್ಲಿ ತಮ್ಮ ಮೈ ಹೊಡೆದುಕೊಳ್ಳುವ ಸ್ಥಿತಿಗೆ ಬಂದಿದ್ದಾರೆ” ಎಂದು ಅಣ್ಣಾಮಲೈ ಅವರ ರಾಜಕೀಯ ದುರಂತ ಬಗ್ಗೆ ಹೇಳಿದರು.

“ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು‌ 11 ವರ್ಷ ಆಯ್ತು. ಇಷ್ಟು ವರ್ಷದಲ್ಲಿ‌ ಅವರು ಮಾಡಿರುವ ಅಭಿವೃದ್ಧಿ ಕೆಲಸ ಏನು? ಕಾಂಗ್ರೆಸ್ ಯೋಜನೆಗಳ ಹೆಸರು ಬದಲಾಯಿಸಿ ತಮ್ಮ ಯೋಜನೆ ಅಂತ ಹೇಳ್ತಿದ್ದಾರೆ. ಇವರು ಸಾಧ್ಯವಾದಷ್ಟು ಜನರ ಕಣ್ಣಿಗೆ ಮಣ್ಣೆರಚಿ ಮೋಸ ಮಾಡಲು ಪ್ರಯತ್ನ ಪಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರ ಬಂದು ನೂರು ದಿನದಲ್ಲಿ ಸ್ವೀಸ್ ಬ್ಯಾಂಕ್‌ನಿಂದ ಕಪ್ಪು ಹಣವನ್ನು ಹೊರಗರ ತರುತ್ತೇವೆಂದು ಹೇಳಿದ್ದರು, ತಂದರಾ? 15 ಲಕ್ಷ ಭಾರತೀಯರ ಖಾತೆಗೆ ಹಾಕಿದರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಕೊಟ್ಟರಾ? ಯಾವುದೂ ತರಲಿಲ್ಲ, ಜನರಿಗೂ ಕೊಡಲಿಲ್ಲ” ಎಂದು ಬಿಜೆಪಿ ಹಾಗೂ ಪ್ರಧಾನಿಯವರ ಸುಳ್ಳುಗಳ ಜೋಡಿ ಸರಮಾಲೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ನಗರದಲ್ಲಿ ಸುರಿದ ಮೊದಲ ಮಳೆಗೆ ತಂಪಾದ ಇಳೆ

“ಬಿಜೆಪಿಯವರಿಗೆ ತಮ್ಮ ರಾಜಕಾರಣ ಹಾಗೂ ರಾಜಕೀಯಕ್ಕೆ ಯಾರ ಅವಶ್ಯಕತೆ ಎಷ್ಟು ಬೇಕೋ ಅಷ್ಟು ಬಳಸಿಕೊಳ್ಳುತ್ತಾರೆ. ರಾಜಕೀಯ ಲಾಭವಾದ ಮೇಲೆ ಅವರನ್ನು ಬಿಸಾಡುತ್ತಾರೆ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದಾಗ ನನ್ನನ್ನು ಕರೆದುಕೊಂಡು ಹೋಗಿ ‘ಮುಖ್ಯಮತ್ರಿ ಸ್ಥಾನ ಬಿಟ್ಟು ಉಳಿದ ಎಲ್ಲಾ ಇಲಾಖೆ ಕೊಡುತ್ತೇವೆಂದು ಹೇಳಿದ್ದರು. ಬಹುಮತ ಸಾಬೀತಾಗಿ ಅಧಿಕಾರಕ್ಕೆ ಬಂದ ಮೇಲೆ ಒಳ್ಳೆಯ ಖಾತೆಗಳನ್ನು ಅವರು ತೆಗೆದುಕೊಂಡರು ನಮಗೆ ಯಾವುದೋ ಖಾತೆ ಕೊಟ್ಟರು” ಎಂದು ಹೇಳಿದರು.

“ಬಿಜೆಪಿಯವರು ರಾಜಕಾರಣ ಮಾಡಲು ಅಮಾಯಕರು, ಜನಸಾಮಾನ್ಯರು ಹಾಗೂ ಯುವಜನತೆಯನ್ನು ರಾಜಕೀಯವಾಗಿ ಬಳಸಿಕೊಂಡು ದಾರಿತಪ್ಪಿಸುವಂಥ ಕೆಲಸ ಮಾಡುತ್ತಾರೆ.‌ ಅವರಿಗೆ ತಮ್ಮ ಮಕ್ಕಳ ಮೇಲಿರುವ ಜವಾಬ್ದಾರಿ ಹಾಗೂ ಕಾಳಜಿ, ಬಡವರ ಮಕ್ಕಳ ಮೇಲಿಲ್ಲ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...