ಕೊಪ್ಪಳ | 2025ನೇ ಸಾಲಿನ ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

Date:

ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ನಾಗರಿಕರಿಗೆ ಪ್ರಸಕ್ತ 2025ನೇ ಸಾಲಿನ ಅವಧಿಗಾಗಿ ನಾಗರಿಕ ಬಂದೂಕು ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜೂನ್ 26 ರಿಂದ 29 ರವರೆಗೆ ನಾಲ್ಕು ದಿನಗಳ ಕಾಲ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ನಾಗರಿಕ ಬಂದೂಕು ತರಬೇತಿಯನ್ನು ನೀಡಲಾಗುತ್ತದೆ. ಜೂನ್ 26 ರಿಂದ 28 ರವರೆಗೆ 3 ದಿನಗಳು ಬಂದೂಕು ತರಬೇತಿಯನ್ನು ನೀಡಿ, ಜೂನ್ 29 ರಂದು ಗುರಿ ಅಭ್ಯಾಸ ಮಾಡಿಸಲಾಗುವುದು.

ನಾಗರಿಕ ಬಂದೂಕು ತರಬೇತಿಯನ್ನು ಪಡೆಯಲು ಇಚ್ಛಿಸುವ ಜಿಲ್ಲೆಯ ಆಸಕ್ತ ನಾಗರಿಕರು ಜೂನ್ 12 ರಿಂದ 22 ರವರೆಗೆ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳು, ವೈದ್ಯಕೀಯ ಸದೃಢ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ 3 ಭಾವಚಿತ್ರಗಳೊಂದಿಗೆ ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

21 ವರ್ಷ ಮೇಲ್ಪಟ್ಟ ನಾಗರಿಕರಿಗೆ ಮಾತ್ರ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ನಾಗರಿಕರು ನಿಯಮಿತವಾಗಿ ತರಬೇತಿಗೆ ಹಾಜರಾಗಬೇಕು ಹಾಗೂ ಶಿಸ್ತು ಪಾಲನೆ ಮಾಡಬೇಕು. ತರಬೇತಿಯಲ್ಲಿ ಅಶಿಸ್ತು ಕಂಡುಬಂದಲ್ಲಿ ಅಂತವರನ್ನು ತರಬೇತಿಯಿಂದ ವಜಾ ಮಾಡಲಾಗುವುದು.

ಇದನ್ನೂ ಓದಿ: ಕೊಪ್ಪಳ | ಸಾವಯವ ಕೃಷಿ ಪದ್ಧತಿ ಲಾಭದಾಯಕ: ಜಿಲ್ಲಾಧಿಕಾರಿ ನಳಿನ್ ಅತುಲ್

ತರಬೇತಿಗೆ ಹಾಜರಾಗುವ ಮಹಿಳಾ ಅಭ್ಯರ್ಥಿಗಳು ಕಡ್ಡಾಯವಾಗಿ ಬಿಳಿ ಚೂಡಿದಾರ/ಪ್ಯಾಂಟ್ ಹಾಗೂ ಪುರುಷ ಅಭ್ಯರ್ಥಿಗಳು ಬಿಳಿ ಟೀ ಶರ್ಟ್, ಬಿಳಿ ಟ್ರ್ಯಾಕ್‌ಪ್ಯಾಂಟ್, ಶೂ ಧರಿಸತಕ್ಕದ್ದು. ತರಬೇತಿಯ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕ ಮತ್ತು ಮದ್ದು ಗುಂಡುಗಳ ಶುಲ್ಕವನ್ನು ಭರಿಸಬೇಕು. ತರಬೇತಿ ಅಭ್ಯರ್ಥಿಗಳು ದೃಷ್ಟಿದೋಷ ಹೊಂದಿರಬಾರದು ಹಾಗೂ ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿರುವ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.

ಅಭ್ಯರ್ಥಿಗಳು ತರಬೇತಿ ವೇಳೆ ನೋಟ್‌ಬುಕ್ ಮತ್ತು ಪೆನ್ ತರತಕ್ಕದ್ದು. ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಹಾಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಪ್ರಮಾಣ ಪತ್ರ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಏನಾದರೂ ಅಹಿತಕರ ಘಟನೆ ಸಂಭವಿಸಿದಲ್ಲಿ ಅದಕ್ಕೆ ಅಭ್ಯರ್ಥಿಯೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ಅರ್ಜಿ ಸಲ್ಲಿಸುವ ನಾಗರಿಕರು ಯಾವುದೇ ಅಪರಾಧಿಕ ಹಿನ್ನೆಲೆಯನ್ನು ಹೊಂದಿರದೇ ಇರುವ ಕುರಿತು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...