ಕೊಪ್ಪಳ | ಅಂಗಡಿಗಳ ಮೇಲೆ ದಾಳಿ; ₹40 ಲಕ್ಷ ರೂ. ಮೌಲ್ಯದ ಪಟಾಕಿ ವಶ

Date:

ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ಕೊಪ್ಪಳ ನಗರ ಹಾಗೂ ಗಂಗಾವತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದು, ನಿಯಮಬಾಹಿರವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.

ಗಂಗಾವತಿ ನಗರದ ಜಾಮಿಯಾ ಮಸೀದಿ ಸಮೀಪದ ಏಳು ಪಟಾಕಿ ಅಂಗಡಿ, ಮಳಿಗೆ, ಗೋದಾಮಿನ ಮೇಲೆ ಗುರುವಾರ ಪೊಲೀಸರು, ನಗರಸಭೆ, ತಾಲೂಕು ಪಂಚಾಯಿತಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ಜಂಟಿಯಾಗಿ ದಾಳಿ ನಡೆಸಿದರು.

ಅತ್ತಿಬೆಲೆಯಲ್ಲಿ ನಡೆದ ಪ್ರಕರಣ ಮರುಕಳಿಸಬಾರದೆಂದು ಮುಖ್ಯಮಂತ್ರಿ ಕಠಿಣ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಕೊಪ್ಪಳ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಅನಧಿಕೃತ ಮತ್ತು ಜನವಸತಿ ಪ್ರದೇಶಗಳಲ್ಲಿ ಪಟಾಕಿ ಮಾರಾಟ ಅಥವಾ ಸಂಗ್ರಹ ಮಾಡಿದ್ದರೆ ಪರಿಶೀಲಿಸಿ ದಾಳಿ ನಡೆಸಿ ವರದಿ ಸಲ್ಲಿಸಬೇಕು ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾಗಿ ಗುರುವಾರ ಅಧಿಕಾರಿಗಳು ಗಂಗಾವತಿಯ ಬಳ್ಳಾರಿ ಚನ್ನಬಸಪ್ಪ, ಅಶೋಕ ಅಡಿವೆಪ್ಪ ಹೂಗಾರ, ಪಾಂಡುರಂಗ ನಾಗಪ್ಪ, ಮಹಾಬಲೇಶ್ವರ ಶಿವಶಂಕರಪ್ಪ ಅವರ ಅಂಗಡಿ ಸೇರಿದಂತೆ 7 ಮಳಿಗೆಗಳ ಮೇಲೆ ದಾಳಿ ನಡೆಸಿದರು.

ವಶಪಡಿಸಿಕೊಂಡ ಪಟಾಕಿಗಳನ್ನು ಎರಡು ಟ್ರ್ಯಾಕ್ಟರ್‌ ಮತ್ತು ಎರಡು ಕಸ ಸಂಗ್ರಹ ವಾಹನಗಳಲ್ಲಿ ತೆಗೆದುಕೊಂಡು ಹೋಗಿದ್ದು, ಸದ್ಯ ತಾಲೂಕು ಆಡಳಿತದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದಾರೆ ಎನ್ನಲಾಗಿದೆ.

ದಾಳಿ ಬಳಿಕ ಗಂಗಾವತಿ ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ ಪಾಟೀಲ ಮಾಧ್ಯಮಗಳೊಂದಿಗೆ ಮಾತನಾಡಿ, “ಜನವಸತಿ ಪ್ರದೇಶಗಳಲ್ಲಿ ಪಟಾಕಿ ಸಂಗ್ರಹಕ್ಕೆ ಅವಕಾಶವಿಲ್ಲ. ಆದರೆ, ಇಲ್ಲಿನ ಬಹುತೇಕ ಮಾಲೀಕರು ಪಟಾಕಿಗಳನ್ನು ಜನವಸತಿ ಪ್ರದೇಶಗಳಲ್ಲಿನ ಅಂಗಡಿಗಳಲ್ಲಿಟ್ಟು ಮಾರಾಟ ಮಾಡುತ್ತಿದ್ದಾರೆ. ಇದು ಕಾನೂನು ಬಾಹಿರ. ಜಪ್ತಿ ಮಾಡಿದ ಎಲ್ಲ ಪಟಾಕಿಗಳನ್ನು ಒಂದೆಡೆ ಸಂಗ್ರಹಿಸಿ, ಪಟಾಕಿ ಮಾರಾಟದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ದಾಳಿ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ದಸರಾದಲ್ಲಿ ಕರೋಕೆ ಹಾಡು ನಿಷೇಧಿಸಲು ಆರ್ಟಿಸ್ಟ್ ಅಸೋಸಿಯೇಷನ್ ಆಗ್ರಹ

ದಾಳಿಯಲ್ಲಿ ವಶಕ್ಕೆ ಪಡೆದ ಪಟಾಕಿಗಳ ಮೊತ್ತ ₹40 ಲಕ್ಷಕ್ಕೂ ಹೆಚ್ಚು ಇರಬಹುದೆಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಕೊಪ್ಪಳ ಗ್ರಾಮೀಣ ಠಾಣೆ ವ್ಯಾಪ್ತಿಯ ಎರಡು ಕಡೆ ಮತ್ತು ನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ಕಡೆ ಸಂಜೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನಾ ಕಾರ್ಯ ಜರುಗುತ್ತಿದೆ.

ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸ್ ಇ‌ನ್ಸ್‌ಪೆಕ್ಟರ್‌ ಮಂಜುನಾಥ, ಪುಂಡಲಿಕಪ್ಪ, ತಾಲೂಕು ಪಂಚಾಯಿತಿ ಇಒ ಲಕ್ಷ್ಮೀದೇವಿ, ನಗರಸಭೆ ಪೌರಾಯುಕ್ತ ಆರ್ ವಿರೂಪಾಕ್ಷಮೂರ್ತಿ, ನಗರಸಭೆ ಆರೋಗ್ಯ ನಿರೀಕ್ಷಕ ನಾಗರಾಜ, ಚೇತನ್ ಕುಮಾರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...