ಕೊಪ್ಪಳ | ಒಳಮೀಸಲಾತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನ: ಪೊಲೀಸರೊಂದಿಗೆ ವಾಗ್ವಾದ

Date:

ಸರ್ವೋಚ್ಚ ನ್ಯಾಯಾಲಯದ ಆದೇಶದ ಪರಿಶಿಷ್ಟಜಾತಿ ಸಮುದಾಯಗಳಿಗೆ ಒಳಮೀಸಲಾತಿ ನೀಡಬೇಕು ಎಂದು ಕೊಪ್ಪಳ ಜಿಲ್ಲೆಯ ಮಾದಿಗ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳು ನಗರದ ಜಿಲ್ಲಾಡಳಿತ ಭವನದ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನಕ್ಕೆ ಒಳಪ್ರವೇಶಿಸಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು.‌ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಹೋರಾಟಗಾರರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕೊಪ್ಪಳ ತಹಶೀಲ್ದಾರ್ ವಿಠಲ ಚೌಗುಲಾ ಅವರ ಬಹುದಿನಗಳ ಬೇಡಿಕೆಯಾದ ಒಳಮೀಸಲಾತಿ ಜಾರಿಗೊಳಿಸಲು ಮನವಿ ಸಲ್ಲಿಸಿದರು.

“ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವಲ್ಲಿ‌ ವಿಳಂಬ ನೀತಿ ಕೈಬಿಡಬೇಕು. ಆಗಸ್ಟ್ 11ರಂದು ಅರಂಭವಾಗುವ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ತರಬೇಕು. ಇಲ್ಲದಿದ್ದರೆ, 16 ಆಗಸ್ಟ್‌ರಿಂದ ರಾಜ್ಯಾದ್ಯಂತ ಅಸಹಕಾರ ಹೋರಾಟ ಆರಂಭಿಸಲಾಗುವುದು. ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಯಾವ ಅಧಿಕಾರಕ್ಕೆ ಬರುವ ಮುನ್ನ ಒಳಮೀಸಲಾತಿ ಜಾರಿ ಮಾಡು‌ತ್ತೇವೆ ತಪ್ಪಿ ನಡೆಯುವುದಿಲ್ಲವೆಂದು ಹೇಳುತ್ತವೆ. ಅಧಿಕಾರಕ್ಕೆ ಬಂದ ಮೇಲೆ ತಮ್ಮ ವರಸೆಯನ್ನೇ ಬದಲಾಯಿಸಿಬಿಡುತ್ತವೆ. ನಮ್ಮ ತಾಳ್ಮೆ ಪರೀಕ್ಷೀಸಬೇಡಿ” ಎಂದು ಸರ್ಕಾರಕ್ಕೆ ಎಚ್ಚರಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೊಪ್ಪಳ ಒಳಮೀಸಲಾತಿ ಹೋರಾಟ 1 1

ಜಿಲ್ಲಾ ಕಚೇರಿ ಒಳ‌ನುಗ್ಗಲು ಪ್ರಯತ್ನ ಹೆಚ್ಚುತ್ತಿದ್ದರಿಂದ ಪೊಲೀಸರು ಮಾಜಿ ಶಾಸಕ ಬಸವರಾಜ್ ದಡೆಸೂರು ಸೇರಿದಂತೆ ಹಲವು ಪ್ರತಿಭಟನೆ ನಿರತ ಹೋರಾಟಗಾರರನ್ನು ವಶಕ್ಕೆ ಪಡೆದು ಸಾರಿಗೆ ವಾಹನದಲ್ಲಿ ಕರೆದುಕೊಂಡು ಹೋದರು. ಇದರಿಂದ ಆಕ್ರೋಶಗೊಂಡ ಜನರು ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿ ಭಿತ್ತಪತ್ರಗಳನ್ನು ಪ್ರದರ್ಶಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಒಳಮೀಸಲಾತಿ ಜಾರಿಗೆ ಅರೆಬೆತ್ತಲೆ ಮೆರವಣಿಗೆ: ಕೇಶ ಮುಂಡನೆ ಮಾಡಿಕೊಂಡು ವಿನೂತನ ಪ್ರತಿಭಟನೆ

ಜಿಲ್ಲಾಡಳಿತಭವನ ಪ್ರವೇಶಿಸುವ ಮುನ್ನ ಕಚೇರಿ ಎದುರು ವೇದಿಕೆ ಕಾರ್ಯಕ್ರಮದಲ್ಲಿ ಬಸವರಾಜ್ ದಡೆಸೂರು ಮಾತನಾಡಿ, “ಶೋಷಿತರಲ್ಲೇ ಶೋಷಿತ ಸಮುದಾಯಗಳಿಗೆ ಒಳಮೀಸಲಾತಿ ಜಾರಿ ಮಾಡುವಂತೆ ಸುಮಾರು 35 ವರ್ಷಗಳಿಂದ ಹೋರಾಟ ಮಾಡುತ್ತಲೇ ‌ಬಂದಿದೆ. ಆದರೆ, ಯಾವ ಸರ್ಕಾರಗಳು ನಮ್ಮ ಹೋರಾಟವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಆದ್ದರಿಂದ ನಾಳೆಯ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...