ಬಲ್ಡೋಟಾ ಕಾರ್ಖಾನೆಯ ವಿಸ್ತರಣೆ ವಿರುದ್ಧ ಜನರ ವಿರೋಧದ ಚರ್ಚೆಯಲ್ಲಿರುವಾಗಲೇ ಕಾರ್ಖಾನೆಯ ಕಾರ್ಮಿಕನೊರ್ವ ಕೆಲಸದ ವೇಳೆ ಮೇಲಿನಿಂದ ಬಿದ್ದು ಸಾವಿಗೀಡಾದ ಘಟನೆ ನಡೆದಿದೆ
ಕಿನ್ನಾಳ ಗ್ರಾಮದ ವೀರಭದ್ರಪ್ಪ ಕುಂಬಾರ(40) ಬಲ್ಡೋಟಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮೇಲಿನಿಂದ ಬಿದ್ದು ಸಾವನಪ್ಪಿದ್ದು, ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಾರ್ಖಾನೆಯಲ್ಲಿ ಬಿದ್ದ ವೀರಭದ್ರಪ್ಪನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ ಪ್ರಾಣ ಹೋಗಿದೆ. ಕಾರ್ಖಾನೆಯವರು ಕುಟುಂಬಕ್ಕೆ ತಡವಾಗಿ ಮಾಹಿತಿ ನೀಡಿರುವುದು ಶಂಕೆಗೆ ಕಾರಣವಾಗಿದೆ.
ಇದನ್ನೂ ಓದಿ ಕೊಪ್ಪಳ | ತುಂಗಭದ್ರಾ ಕಾಲುವೆಯಲ್ಲಿ ಈಜಲು ಹೋದ ಯುವಕ ನಾಪತ್ತೆ
ವೀರಭದ್ರಪ್ಪ ಆಯತಪ್ಪಿ ಕೆಳಗೆ ಬಿದ್ದಿದ್ದು, ಹಣೆಗೆ ಕಬ್ಬಿಣದ ರಾಡ್ ನೆಟ್ಟಿದ್ದರಿಂದ ಮೂಗಿನ ಎರಡೂ ಹೊಳ್ಳೆಗಳಿಂದ ರಕ್ತಸ್ರಾವವಾಗಿದೆ ಎಂದು ತಿಳಿದು ಬಂದಿದೆ. ಸಾವಿಗೆ ಕಾರಣ ಪೋಸ್ಟ್ ಮಾರ್ಟ್ಂ ವರದಿಯಿಂದ ತಿಳಿಯಲಿದೆ. ಸ್ಥಳಕ್ಕೆ ಕೊಪ್ಪಳ ಗ್ರಾಮೀಣ ಪೋಲೀಸ್ರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.





