ಕೊಪ್ಪಳ | ಬಾಲ್ಯವಿವಾಹ ಪ್ರಕರಣ ಸಾಬೀತು: ಚರ್ಚ್ ಫಾದರ್ ಸೇರಿ 6 ಮಂದಿಗೆ ಜೈಲು ಶಿಕ್ಷೆ

Date:

ಗಂಗಾವತಿಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಗದ್ವಾಲ್ ಕ್ಯಾಂಪ್ ಚರ್ಚ್‌ನಲ್ಲಿ ಅಪ್ರಾಪ್ತೆಯ ವಿವಾಹ(ಬಾಲ್ಯವಿವಾಹ) ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ 2 ವರ್ಷ ಜೈಲು ಹಾಗೂ 10 ಸಾವಿರ ದಂಡ ಸಹಿತ ಜೈಲು ಶಿಕ್ಷೆ ವಿಧಿಸಿ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾ. ನಾಗೇಶ ಪಾಟೀಲ ಅವರು ತೀರ್ಪು ನೀಡಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಗದ್ವಾಲ್ ಕ್ಯಾಂಪ್ ಚರ್ಚ್‌ನಲ್ಲಿ 2020ರ ಮೇ 22ರಂದು ಅಪ್ರಾಪ್ತೆಗೆ ವಿವಾಹ ಮಾಡಲಾಗಿತ್ತು. ಆದ್ದರಿಂದ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವರ ಕುರುಪಣ್ಣ, ವರನ ತಂದೆ ಆನಂದ, ತಾಯಿ ಆಶೀರ್ವಾದಮ್ಮ, ವಧುವಿನ ತಂದೆ ಯೇಸು,‌ ತಾಯಿ ಶಾಂತಮ್ಮ ಚರ್ಚ್‌ನ ಫಾದರ್ ಅಬ್ರಹಾಂ ಡಿ ಶಿಕ್ಷೆಗೆ ಗುರಿಯಾದವರು.

14 ವರ್ಷದ ಅಪ್ರಾಪ್ತೆಯ ಪೋಷಕ ಆರೋಪಿಗಳು ತಮ್ಮ ಮಗಳ ಮದುವೆಯನ್ನು ಗದ್ವಾಲ್ ಕ್ಯಾಂಪ್ ಗ್ರಾಮದ ಚರ್ಚ್‌ನಲ್ಲಿ 2020ರ ಮೇ 22ರಂದು ಫಾದರ್ ಅವರ ನೇತೃತ್ವದಲ್ಲಿ ಬಾಲ್ಯವಿವಾಹ ಮಾಡಿದ್ದರು. ಆರೋಪಿತರೆಲ್ಲರೂ ಬಾಲ್ಯವಿವಾಹ ನಿಷೇಧ ಕಾಯ್ದೆ 2006ರ ಕಲಂ 9, 10, 11ರ ಅಡಿ ಅಪರಾಧ ಮಾಡಿದ್ದು, ಸಾಬೀತಾದ ಹಿನ್ನೆಲೆಯಲ್ಲಿ ಅಂದಿನ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ದೊಡ್ಡಪ್ಪ ಜೆ ಅಪರಾಧಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೆದಿಲ-ಪನಡ್ಕ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ: 12 ವರ್ಷಗಳ ಹೋರಾಟಕ್ಕೆ ಕೊನೆಗೂ ಜಯ

ಇಂತಹದೇ ಒಂದು ಪ್ರಕರಣದಲ್ಲಿ 2017ರ ಏಪ್ರಿಲ್ 2ರಂದು ಗಂಗಾವತಿಯ ಶಾದಿಮಹಲ್‌ನಲ್ಲಿ ನಡೆದ ಬಾಲ್ಯವಿವಾಹ ಪ್ರಕರಣದಲ್ಲೂ ಗಂಗಾವತಿಯ ಪ್ರಧಾನ ದಿವಾಣಿ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಸೆ.22ರಂದು ಇಂಥದ್ದೇ ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ನಕಲಿ ವರ್ಗಾವಣೆ ಪ್ರಮಾಣ ಪತ್ರ ಸೃಷ್ಟಿಸಿ, ಬಾಲಕಿಯ ವಯಸ್ಸು ಮರೆಮಾಚಿ, ಬಾಲ್ಯವಿವಾಹ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವರ ಖಾಜಾ ಪಾಷಾ ಖಾದ್ರಿ, ವರನ ತಂದೆ ಮೈನುದ್ದೀನ್ ಖಾದ್ರಿ, ತಾಯಿ ಖತೂನ್ ಬೀ ಹಾಗೂ ಬಾಲಕಿಯ ತಂದೆ ಮಕ್ಯುಲ್ ಪೀರಾ ಖಾದ್ರಿ, ತಾಯಿ ಕುಸುಮಾಬೀ ಅವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ತಲಾ 10,000 ರೂ. ದಂಡ ವಿಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...