ಕೊಪ್ಪಳ | ಪೊಲೀಸರು ಕರೆದಿದ್ದ ಬಕ್ರೀದ್ ‘ಶಾಂತಿ’ ಸಭೆಯಲ್ಲೇ ರಾಜಕೀಯ ಬಣಗಳ ನಡುವೆ ‘ಅಶಾಂತಿ’!

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಕರೆದಿದ್ದ ಶಾಂತಿ ಸಭೆಯಲ್ಲೇ ಎರಡು ರಾಜಕೀಯ ಬಣಗಳು ಅಶಾಂತಿ ಸೃಷ್ಟಿಸಿ, ವಾಗ್ವಾದ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

ಗಂಗಾವತಿ ಪಟ್ಟಣದಲ್ಲಿರುವ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಇಂದು(ಜೂ.14) ಗಂಗಾವತಿ ಪೊಲೀಸರು ಬಕ್ರೀದ್ ಹಬ್ಬದ ಆಂಗವಾಗಿ ಪೂರ್ವಭಾವಿ ಶಾಂತಿ ಸಭೆ ಕರೆದಿದ್ದರು. ಆದರೆ, ಪೂರ್ವಭಾವಿ ಶಾಂತಿ ಸಭೆ ಎರಡು ಬಣಗಳ ತಿಕ್ಕಾಟಕ್ಕೆ ಸಾಕ್ಷಿಯಾಯಿತು.

ಸಭೆಯಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಬೆಂಬಲಿಗರ ನಡುವೆ ಪೊಲೀಸರ ಮುಂದೆಯೇ ವಾಗ್ವಾದ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆ ಆರಂಭವಾದ ಬಳಿಕ ಪೊಲೀಸ್ ಅಧಿಕಾರಿಗಳು ಬಕ್ರೀದ್ ಆಚರಣೆ ಕುರಿತು ಸಲಹೆ, ಸೂಚನೆ ನೀಡಲು ಮುಸ್ಲಿಂ ಮುಖಂಡರಿಗೆ ಅವಕಾಶ ನೀಡಿದರು.

ಈ ವೇಳೆ ಶಾಸಕ ಜಿ.ಜನಾರ್ದನರೆಡ್ಡಿ ಅಪ್ತ ಅಲಿಖಾನ್ ಮಾತನಾಡಿ, “ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಸಂದೇಶದ ಕುರಿತು ಮಾತನಾಡದೇ ಪಕ್ಷ ಹಾಗೂ ರಾಜಕಾರಣಿಗಳ ವಿರುದ್ಧ ಮಾತನಾಡಿ ಜನರನ್ನ ಯಾಮಾರಿಸುವ ಕೆಲಸ ಮಾಡುತ್ತಾರೆ. ಪ್ರಾರ್ಥನಾ ಸಮಯಕ್ಕೆ ಬರುವುದಿಲ್ಲ. ಯಾವಾಗಲೋ ಬರುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕು” ಎಂದು ಸಭೆಯಲ್ಲೇ ಹೇಳಿದರು.

ಈ ವೇಳೆ ಅನ್ಸಾರಿ ಅವರ ಬೆಂಬಲಿಗ ಎಸ್.ಬಿ ಖಾದ್ರಿ ಮತ್ತು ಸಂಗಡಿಗರು ಅಲಿಖಾನ್ ಅವರಿಗೆ, “ನೀವು ಗಂಗಾವತಿಯವರಲ್ಲ. ಇಲ್ಲಿ ನಿಮ್ಮದೇನು ಕೆಲಸ. ಏಕೆ ಮಾತನಾಡುತ್ತೀರಿ?” ಎಂದು ವಾಗ್ವಾದ ನಡೆಸಿ ಸಭೆ ಬಹಿಷ್ಕಾರಕ್ಕೆ ಮುಂದಾದರು.

ಪೊಲೀಸರ ಮಧ್ಯ ಪ್ರವೇಶ: ಖಡಕ್ ಎಚ್ಚರಿಕೆ

ಈ ವೇಳೆ ಮಾತಿಗೆ ಮಾತು ಬೆಳೆದು ವಾಗ್ವಾದಕ್ಕೆ ಹೋಗುವುದನ್ನು ಕಂಡ ಪೊಲೀಸರು, ಎಲ್ಲರನ್ನೂ ಸುಮ್ಮನಿರುವಂತೆ ಸೂಚಿಸಿದರು.

ಬಳಿ ಮಾತನಾಡಿದ ಎಎಸ್‌ಪಿ ಹೇಮಂತ್‌ ಕುಮಾರ್, “ಬಕ್ರೀದ್ ಆಚರಣೆಗೆ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರಂತೆ ಹಬ್ಬ ಆಚರಣೆ ಮಾಡಬೇಕು. ಗೋಹತ್ಯೆ ಸಂಪೂರ್ಣ ನಿಷೇಧಿಸಲಾಗಿದೆ. ಪ್ರಾಣಿವಧೆ ಅಗತ್ಯವಿದ್ದಲ್ಲಿ ಪಶುಪಾಲನಾ ಇಲಾಖೆಯಿಂದ ಪರವಾನಗಿ ಪಡೆದು ಪಶುವೈದ್ಯರ ನೇತೃತ್ವದಲ್ಲಿ ವಧಾಗಾರದಲ್ಲಿ ವಧೆ ಮಾಡಬೇಕು” ಎಂದರು.

ಡಿವೈಎಸ್ಪಿ ಸಿದ್ಧಲಿಂಗಪ್ಪಗೌಡ ಪೊಲೀಸ್ ಪಾಟೀಲ್ ಮಾತನಾಡಿ, “ಶಾಂತಿಯುತವಾಗಿ ಹಬ್ಬ ಆಚರಿಸುತ್ತೇವೆ ಎಂದು ನೀವೇ ಅಶಾಂತಿ ಮಾಡಲು ಹೊರಟಿದ್ದೀರಾ. ಹೀಗಾದರೆ ಗಂಗಾವತಿ ಶಾಂತಿಯಿಂದ ಇರುವುದಾದರೂ ಹೇಗೆ?. ಹಬ್ಬವನ್ನ ಹಬ್ಬದ ರೀತಿಯಲ್ಲಿ ಆಚರಿಸಬೇಕು. ಅದಕ್ಕೆ ಬೇಕಾದ ಬಂದೋಬಸ್ತ್ ಅನ್ನು ಇಲಾಖೆ ಒದಗಿಸುತ್ತದೆ. ಕಾನೂನು ಬಾಹಿರ ಕೃತ್ಯಗಳು ನಡೆದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ನಾವು ನೀಡುವ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಬೇಕು. ಶಾಂತಿಗೆ ಭಂಗವನ್ನು ಯಾರು ತರಬಾರದು. ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಿಮ್ಮ ವೈಯಕ್ತಿಕ ಏನಿದ್ದರೂ ಇಲ್ಲಿ ಬೇಡ. ರಾಜಕೀಯ ಮಾಡುವುದಿದ್ದರೆ ಚುನಾವಣೆಗಳ ಸಂದರ್ಭದಲ್ಲಿ ಮಾಡಿ. ನಮಗೂ ಅದಕ್ಕೂ ಸಂಬಂಧವಿಲ್ಲ. ಸಮುದಾಯವೊಂದರ ಧಾರ್ಮಿಕ ಹಬ್ಬ ಸರಿಯಾಗಿ ಆಗಲಿ ಅಂತ ಪೊಲೀಸರು ಕರ್ತವ್ಯ ಮಾಡುತ್ತಿದ್ದೇವೆ. ನೀವೆಲ್ಲರೂ ಸಹಕಾರ ಕೊಡಬೇಕು ಅಷ್ಟೇ” ಎಂದು ಖಡಕ್ ಆಗಿ ಎರಡೂ ಬಣದ ನಾಯಕರಿಗೆ ಎಚ್ಚರಿಕೆ ನೀಡಿದರು.

ನಗರ ಠಾಣೆ ಪಿಐ ಪ್ರಕಾಶ ಮಾಳೆ, ಗ್ರಾಮೀಣ ಠಾಣೆ ಪಿಐ ಸೋಮಶೇಖರ ಜುತ್ತಲ್, ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ, ತಾ.ಪಂ ಇಒ ಲಕ್ಷ್ಮೀದೇವಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...