ಕೊಪ್ಪಳ | ಪಟ್ಟಣಕ್ಕೆ ಹೊಂದಿಕೊಂಡ ಹಳ್ಳದ ಸ್ವಚ್ಛತೆಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹ

Date:

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣಕ್ಕೆ ಹೊಂದಿಕೊಂಡಿರುವ ತ್ರಿವೇಣಿ ಸಂಗಮ ಎಂದು ಹೆಸರಾಗಿರುವ ಹಳ್ಳಕ್ಕೆ ಕೃಷ್ಣ ಭಾಗ್ಯ ಜಲ ನಿಗಮದಿಂದ ದನಕರುಗಳಿಗೆ ಕುಡಿಯಲು ನೀರು, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ನೀರು ಹರಿಸುತ್ತಿದ್ದು, ಈ ಹಳ್ಳವನ್ನು ಸ್ವಚ್ಚಗೊಳಿಸಲು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಕನಕಗಿರಿಯ ಕೇಂದ್ರದಲ್ಲಿರುವ ದೊಡ್ಡ ಹಳ್ಳವನ್ನು ಸ್ವಚ್ಚಗೊಳಿಸಬೇಕು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮನವಿ ಸಲ್ಲಿಸಿದೆ.

ಹಳ್ಳಕ್ಕೆ ಪಟ್ಟಣದ ಚರಂಡಿಗಳಿಂದ ನೀರು ಹರಿಸುತ್ತಿರುವುದಲ್ಲದೇ, ಜನರು ತ್ಯಾಜ್ಯ ಹಾಕಿದ ಪರಿಣಾಮ ಹಳ್ಳವು ಕಸ ಹಾಗೂ ದುರ್ವಾಸನೆಯಿಂದ ಕೂಡಿರುತ್ತದೆ. ಅಲ್ಲದೆ ಐತಿಹಾಸಿಕ ಮತ್ತು ಪೌರಾಣಿಕವಾಗಿ ಹಿನ್ನಲೆ ಹೊಂದಿರುವ ಪಟ್ಟಣದ ಶ್ರೀ ಕನಕಾಚಲ ದೇವಸ್ಥಾನದಕ್ಕೆ ಹೊಂದಿಕೊಂಡಿರುವುದರಿಂದ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅನಾನುಕೂಲವಾಗಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಳ್ಳದಲ್ಲಿನ ಚರಂಡಿ ನೀರು ಮತ್ತು ತ್ಯಾಜ್ಯ ತೆಗೆಸಿ ಹಳ್ಳವನ್ನು ಸ್ವಚ್ಚಗೊಳಿಸಿ, ಶ್ರೀ ಮಲ್ಲಯ್ಯ ತಾತಾ ದೇವಸ್ಥಾನದಿಂದ ಕೆಇಬಿ ಹಿಂದೆ ಇರುವ ಚೆಕ್ ಡ್ಯಾಂನವರೆಗೆ ಚರಂಡಿ ಕಾಲುವೆ ನಿರ್ಮಿಸಿ, ಪಟ್ಟಣದ ಚರಂಡಿ ನೀರನ್ನು ಹರಿಸಿದರೆ, ಹಳ್ಳಕ್ಕೆ ಹರಿವ ಕಲುಷಿತ ಚರಂಡಿ ನೀರನ್ನು ತಪ್ಪಿಸಿದಂತಾಗುತ್ತದೆ. ಅಲ್ಲದೇ ಹಳ್ಳದ & ಕೊಳವೆ ಬಾವಿಗಳ ಅಂತರ್ಜಲ ಮಟ್ಟವನ್ನು ಹೆಚ್ಚಿಸಿದಂತಾಗುತ್ತದೆ. ದನಕರುಗಳಿಗೂ ಇದರಿಂದ ಎಲ್ಲಾಕಾಲದಲ್ಲೂ ನೀರು ಸಿಗಲು ಅನುಕೂಲವಾಗುತ್ತದೆ. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಸ್ನಾನ ಮಾಡಲು ಅನುಕೂಲವಾಗುತ್ತದೆ. ಕಾರಣ ಈ ಕೂಡಲೇ ಹಳ್ಳವನ್ನು ಸ್ವಚ್ಚಗೊಳಿಸಬೇಕು ಎಂದು‌ ಒತ್ತಾಯಿಸಿದರು.

ಇದನ್ನೂ ಓದಿ: ಕೊಪ್ಪಳ | 62 ದಿನಗಳ ಕಾಲ 1,550 ಕಿ.ಮೀ. ಏಕಾಂಗಿ ಪಾದಯಾತ್ರೆ ನಡೆಸಿದ ಹನುಮೇಶ

ಈ ವೇಳೆ ಪಾಮಣ್ಣ ಅರಳಿಗನೂರು, ಲಿಂಗಪ್ಪ ಪೂಜಾರ್, ನಾಗೇಶ್ ಬಡಿಗೇರ್, ಖಾದರ್ ಭಾಷಾ ಗುಡಿಯಹಿದಲು, ಹೊನ್ನೂರಸಾಬ್ ಬಿಡಿ, ವೆಂಕೋಬ ಬೋವಿ, ಬಸವರಾಜ್ ಕಂಪ್ಲಿ, ಚಿದಾನಂದ ಭಜಂತ್ರಿ, ಸಣ್ಣದುರುಗಪ್ಪ ಗೋರಳಕೇರಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...