ಕೊಪ್ಪಳ | ಸರ್ಕಾರಿ ಶಾಲೆಗಳ ಉಳಿವಿಗೆ ಜನರಿಂದ ಸಹಿ ಸಂಗ್ರಹ; ಎಐಡಿಎಸ್‌ಒ ಅಭಿಯಾನ

Date:

ರಾಜ್ಯದಲ್ಲಿ ಆರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಒ ಪದಾಧಿಕಾರಿಗಳು ಕೊಪ್ಪಳದ ಹುಲಿಗಿ ಗ್ರಾಮದ ಜಾತ್ರೆಯಲ್ಲಿ ಜನರಿಂದ ಸಹಿ ಸಂಗ್ರಹ ಮಾಡಿದರು.

ಎಐಡಿಎಸ್ಒ ಸಂಘಟನೆಯು ರಾಜ್ಯಾದ್ಯಂತ ಸರ್ಕಾರಿ ಶಾಲೆಗಳ ಉಳಿವಿಗಾಗಿ ಹಮ್ಮಿಕೊಂಡಿರುವ 50 ಲಕ್ಷ ಸಹಿ ಸಂಗ್ರಹ ಅಭಿಯಾನದ ಭಾಗವಾಗಿ ಕೊಪ್ಪಳದ ಹುಲಿಗಿಯಲ್ಲಿ ಜಾತ್ರೆಯಲ್ಲಿ ಸಹಿ ಸಂಗ್ರಹಿಸಲಾಯಿತು.

ಎಐಡಿಎಸ್ಒನ ರಾಜ್ಯ ಸೆಕ್ರೆಟರಿಯೇಟ್ ಸದಸ್ಯ ಹಯ್ಯಾಳಪ್ಪ ಮಾತನಾಡಿ, “ರಾಜ್ಯದಲ್ಲಿ ಕಳೆದ ಬಿಜೆಪಿ ಸರ್ಕಾರ ಎನ್ಇಪಿ 2020ರಲ್ಲಿ 13,800 ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಆದೇಶಿಸಿತು. ಎಐಡಿಎಸ್ಒ ನಾಯಕತ್ವದಡಿ ರಾಜ್ಯದ ವಿದ್ಯಾರ್ಥಿಗಳೆಲ್ಲರೂ ಸೇರಿ 36 ಲಕ್ಷಕ್ಕೂ ಹೆಚ್ಚು ಸಹಿ ಸಂಗ್ರಹಿಸಿ, ಬೃಹತ್ ಆಂದೋಲನ ರೂಪಿಸಿತು. ಕೊನೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲಿ ಎನ್ಇಪಿ 2020 ರದ್ದುಪಡಿಸಿ, ಯಾವುದೇ ಮಾನದಂಡವಿಲ್ಲದೆ ಸರ್ಕಾರಿ ಶಾಲೆ, ಕಾಲೇಜು ಹಾಗೂ ವಿವಿಗಳನ್ನು ಮುಚ್ಚಲು ಮುಂದಾಗಿದೆ. ಇದರಿಂದ ಸರ್ಕಾರದ ಮೂಲ ಉದ್ದೇಶ, ಶಿಕ್ಷಣದ ಖಾಸಗೀಕರಣಗೊಳಿಸುವುದು ಎಂಬುದು ಸ್ಪಷ್ಟವಾಗಿದೆ. ಸರ್ಕಾರವು ʼಹಬ್ ಅಂಡ್ ಸ್ಪೋಕ್ʼ ಹೆಸರಿನಲ್ಲಿ ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 25 at 4.31.13 AM 1

“ರಾಜ್ಯದಲ್ಲಿ 23,436 ಕಿರಿಯ ಪ್ರಾಥಮಿಕ ಶಾಲೆ, 10 ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ 6 ಸಾವಿರ ಶಾಲೆ, 7,821 ಏಕೋಪಾಧ್ಯಾಯ ಶಾಲೆ, 3500ಕ್ಕೂ ಹೆಚ್ಚು ಶಾಲೆಗಳಲ್ಲಿ ಬಳಕೆಗೆ ಯೋಗ್ಯ ಶೌಚಾಲಯ ವ್ಯವಸ್ಥೆ ಇಲ್ಲ. ಹಲವು ಶಾಲೆಗಳ ಕಟ್ಟಡಗಳು ದುರಸ್ತಿ ಇಲ್ಲದೆ ಛಾವಣಿ ಸೋರುತ್ತಿದೆ. ರಾಜ್ಯ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಯಾವ ಗಂಭೀರ ಸಮಸ್ಯೆಯನ್ನೂ ಪರಿಹರಸದೇ, ಕಡಿಮೆ ದಾಖಲಾತಿ ಹೆಸರಿನಲ್ಲಿ ಶಾಲೆಗಳನ್ನು ಮುಚ್ಚುತ್ತಿರುವುದು ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ” ಎಂದು ಆರೋಪಿಸಿದರು.

WhatsApp Image 2025 05 25 at 4.31.14 AM

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಅಪಹರಣ ಪ್ರಕರಣ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಈ ವೇಳೆ ಕಾರ್ಯಕರ್ತ ಸದಾಶಿವ, ದಿಲೀಪ್, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...