ಕೊಪ್ಪಳ | ಭಗತ್ ಸಿಂಗ್‌ ಆಶಯದಂತೆ ಜನಸಾಮಾನ್ಯರೂ ಹೋರಾಟದ ರಾಜಕೀಯ ಮಾಡಬೇಕು: ರಾಮಾಂಜನಪ್ಪ ಆಲ್ದಳ್ಳಿ

Date:

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ ಜನತೆ ಜಾತಿ, ಧರ್ಮ ಮತ್ತು ಭಾಷೆಗಳ ಹೆಸರಿನಲ್ಲಿ ಕಚ್ಚಾಡುವುದನ್ನು ನೋಡುತ್ತಿದ್ದೇವೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಬಲ್ಯ ಹೊಂದಿದ್ದ ಪಂಥ ಇಂತಹ ಸಮಸ್ಯೆಗಳ ವಿರುದ್ಧ ರಾಜಿರಹಿತ ಹೋರಾಟವನ್ನು ಹರಿಬಿಡಲಿಲ್ಲ. ಹಾಗಾಗಿ ಭಗತ್ ಸಿಂಗ್‌ ಆಶಯದಂತೆ ಜನಸಾಮಾನ್ಯರೂ ಹೋರಾಟದ ರಾಜಕೀಯ ಮಾಡಬೇಕು ಎಂದು ಧಾರವಾಡ ಜನಜಾಗೃತಿ ಅಭಿಯಾನದ ಸಲಹೆಗಾರ ರಾಮಾಂಜನಪ್ಪ ಆಲ್ದಳ್ಳಿ ಹೇಳಿದರು.

ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್‌ ಜನ್ಮ‌ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲೆಯ ಉಳೇನೂರು ಗ್ರಾಮದಲ್ಲಿ ಎಐಡಿಎಸ್ಒ, ಎಐಡಿವೈಒ, ಎಐಎಂಎಸ್ಎಸ್ ಮತ್ತು ಎಐಕೆಕೆಎಂಎಸ್ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್‌ ಜನ್ಮ‌ದಿನಾಚರಣೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

“ಭಗತ್ ಸಿಂಗ್‌ ಅವರು ಮಹಿಳೆಯರು ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ದೌರ್ಜನ್ಯಗಳು, ನಿರುದ್ಯೋಗ ಸಮಸ್ಯೆ, ಶಿಕ್ಷಣ, ಆರೋಗ್ಯದ ವ್ಯಾಪಾರೀಕರಣ, ರೈತರ ಆತ್ಮಹತ್ಯೆಗಳಂತಹ ಹಲವಾರು ಸಮಸ್ಯೆಗಳು ಜನತೆಯ ಜೀವನವನ್ನು ನರಕ ಸದೃಶಗೊಳಿಸುತ್ತಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಭಗತ್‌ ಸಿಂಗ್‌ ಜನ್ಮದಿನಾಚರಣೆ 1

“ಸಾಂಸ್ಕೃತಿಕ ಅಂಧಃಪತನದಿಂದಾಗಿ ನೀತಿ-ನೈತಿಕತೆ ಮೌಲ್ಯಗಳು ಕುಸಿಯುತ್ತಿದ್ದು, ಸ್ವಾರ್ಥ ಸ್ವಕೇಂದ್ರೀಯತೆ ಹೆಚ್ಚಾಗುತ್ತಿದೆ. ವಿದ್ಯಾವಂತ ಯುವಜನತೆ ತಮ್ಮ ತಂದೆ ತಾಯಂದಿರನ್ನು ವೃದ್ಧಾಶ್ರಮಕ್ಕೆ ಸೇರಿಸುವುದು, ಬೀದಿಗಳಲ್ಲಿ ಅನಾಥರಾಗಿ ಬಿಟ್ಟು ಹೋಗುವುದನ್ನು ನೋಡುತ್ತಿದ್ದೇವೆ. ಇದು ಅತ್ಯಂತ ನೋವಿನ ವಿಷಯ. ಜತೆಗೆ ಇಂದಿನ ಸಾಮಾಜಿಕ ಮಾಧ್ಯಮಗಳಲ್ಲಿ ಅವ್ಯಾಹತವಾಗಿ ಪ್ರಸಾರವಾಗುತ್ತಿರುವ ಅಶ್ಲೀಲ ಸಿನಿಮಾ, ಸಾಹಿತ್ಯ, ಜಾಹೀರಾತುಗಳು ಆನ್ಲೈನ್ ಗೇಮ್‌ಗಳಿಗೆ ಸಣ್ಣಮಕ್ಕಳಿಂದ ಹಿಡಿದು ದೊಡ್ಡವರೂ ದಾಸರಾಗುತ್ತಿದ್ದಾರೆ” ಎಂದರು.

“ವಿದ್ಯಾರ್ಥಿ-ಯುವಜನರನ್ನು ದಾಸ್ಯದಿಂದ ಹೊರತರಲು ಭಗತ್ ಸಿಂಗ್‌ರ ಆದರ್ಶಗಳು ಅತ್ಯವಶ್ಯಕವಾಗಿವೆ. ಇಲ್ಲಿ ಪ್ರಜ್ಞಾವಂತ ಜನತೆ, ಹಿರಿಯರು ಅತ್ಯಂತ ಜಾಗರೂಕತೆಯಿಂದ ಇಂದಿನ ಪೀಳಿಗೆಯನ್ನು ಉಳಿಸಿಕೊಳ್ಳಬೇಕಾಗಿದೆ. ಭಗತ್ ಸಿಂಗ್‌ ಅವರ ಆಶಯದಂತೆ ಜನತೆ ಹೋರಾಟದ ರಾಜಕೀಯವನ್ನು ಎತ್ತಿಹಿಡಿಯಬೇಕಾಗಿದೆ. ಅವರ ಕನಸಿನ ಸಮಾಜವಾದಿ ಸಮಾಜವನ್ನು ಕಟ್ಟುವುದರ ಮೂಲಕ ಎಲ್ಲ ಜನತೆ ಘನತೆ, ಗೌರವ, ನೆಮ್ಮದಿಯಿಂದ ಬದುಕುವಂತಾಗಬೇಕು. ಆಗ ಮಾತ್ರ ನಾವು ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಜನತೆ ಯೋಚಿಸಬೇಕು, ಕಾರ್ಯಗತಗೊಳ್ಳಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬಿಸಿ ಪಾನಕ ಬಿದ್ದು, ವಿದ್ಯಾರ್ಥಿಗೆ ಗಂಭೀರ ಗಾಯ: ಸ್ವಾಮಿ ನಾರಾಯಣ ಗುರುಕುಲ ವಿದ್ಯಾಪೀಠದ ಆಡಳಿ ನಿರ್ಲಕ್ಷ್ಯ

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಊರಿನ ಶಾಲಾ ಮಕ್ಕಳು ಭಗತ್ ಸಿಂಗ್‌ ಅವರ ಕುರಿತಾದ ನೃತ್ಯಗಳನ್ನು ಮತ್ತು ಕ್ರಾಂತಿಕಾರಿ ಗೀತೆಗಳನ್ನು ಹಾಡಿದರು.

ವಿವಿಧ ಸಂಘಟನೆಗಳ ರಾಜ್ಯ ಮುಖಂಡರುಗಳಾದ ಮಹಾಂತೇಶ್, ಗೋವಿಂದ್, ವಿಜಯಲಕ್ಷ್ಮಿ, ಶರಣು ಪಾಟೀಲ್, ಸೋಮಲಿಂಗಪ್ಪ, ಹೊನ್ನೂರಪ್ಪ, ಶಾರದಾ, ಸಿಂಧು, ಯರಿಸ್ವಾಮಿ, ಗಂಗರಾಜ ಅಳ್ಳಳ್ಳಿ, ದೊಡ್ಡಬಸವ, ಶಿವಪ್ಪ, ದೇವರಾಜ, ಅಂಜಿನಪ್ಪ, ಬಸವರಾಜಪ್ಪ ಸೇರಿದಂತೆ ಊರಿನ ಎಲ್ಲಾ ವಿದ್ಯಾರ್ಥಿ ಯುವಜನರುರು, ಮಹಿಳೆಯರು ಮತ್ತು ರೈತ ಕಾರ್ಮಿಕರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...