ಕೊಪ್ಪಳ | ವಿವಿಧ ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಆಗ್ರಹ

Date:

ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹೊಸದಾಗಿ ಜಾರಿಗೊಳಿಸಿರುವ ಗುರುತಿನ ಅರ್ಜಿಯನ್ನು ರದ್ದುಗೊಳಿಸುವುದು ಸೇರಿ ಕಟ್ಟಡ ಹಾಗೂ ಇತರೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಗಂಗಾವತಿ ಘಟಕ ಆಗ್ರಹಿಸಿತು.

ಕೊಪ್ಪಳ ನಗರದ ಜಿಲ್ಲಾ ಕ್ರಿಡಾಂಗಣದಿಂದ ಅಶೋಕ ವೃತ್ತದ ಮೂಲಕ ಹಾದು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಬೇಡಿಕೆ ಇಡೇರಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸಂಘಟನೆಯ ಸಂಚಾಲಕ ಎ.ಎಲ್ ತಿಮ್ಮಣ್ಣ ಮಾತನಾಡಿ, “ನೋಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ನೀಡಲಾಗುವ ಶೈಕ್ಷಣಿಕ ಸಹಾಯಧನ ಕಡಿತ ಮಾಡಿರುವ ಆದೇಶವನ್ನು ವಾಪಸ್ ಪಡೆಯಬೇಕು ಹಾಗೂ 2021ರ ಹೈಕೋರ್ಟ್ ಆದೇಶ ಅಧಿಸೂಚನೆ ಪ್ರಕಾರ ಸ್ಥಗಿತಗೊಳಿಸಿರುವ ಶೈಕ್ಷಣಿಕ ಧನ ಸಹಾಯವನ್ನು ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕರ ಮುಖಂಡ ಮೆಹಬೂಬ್ ಅಲಿ ಮಾತನಾಡಿ, “ಹಲವಾರು ತಿಂಗಳಿಂದ ಮಂಜೂರಾತಿ ಪಡೆದ ಫಲಾನುಭವಿಗಳಿಗೆ ಧನಸಹಾಯ ಬಿಡುಗಡೆ ಮಾಡಬೇಕು. ಪಿಂಚಣಿದಾರರಿಗೆ ಶೀಘ್ರವೇ ಅವರ ಪಿಂಚಣಿ ಹಣವನ್ನು ಬಿಡುಗಡೆ ಮಾಡಬೇಕು. ಪಿಂಚಣಿಯನ್ನು 60 ವರ್ಷಕ್ಕೆ ಇರುವ ನಿಯಮವನ್ನು ಕಡಿತಗೊಳಿಸಿ ಕಾರ್ಮಿಕರಿಗೆ 50 ವರ್ಷಕ್ಕೆ ಪಿಂಚಣಿ ನೀಡಬೇಕು. ನೈಜ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸುವುದನ್ನು ಕೂಡಲೆ ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 04 11 at 5.38.17 PM 1

ಕಾರ್ಮಿಕ ಮಹಿಳೆ ದುರ್ಗಮ್ಮ ಮಾತನಾಡಿ, “ಸೇವಾ ಸಿಂಧುವಿನಲ್ಲಿ ಮಂಜುರಾತಿಯಾದ ಅರ್ಜಿಗಳ ಫಲಾನುಭವಿಗಳ ಬಾಂಡ್ ಹಾಗೂ ಸಹಾಯಧನದ ಕುರಿತು ಮಂಡಳಿ ಹೊರಡಿಸಿದ ಆದೇಶದ ದಿನಾಂಕ ಕಟ್ಟಡ ಕಾರ್ಮಿಕರಿಗೆ ಸರಿಯಾದ ಮಾಹಿತಿ ಇಲ್ಲವಾದರಿಂದ ಸರಿಯಾದ ಸಮಯಕ್ಕೆ ಸಲ್ಲಿಸುವುದಕ್ಕೆ ಆಗಿರುವುದಿಲ್ಲ ಹಾಗಾಗಿ ಕಾರ್ಮಿಕರ ಬಾಕಿ ಉಳಿದ, ಮಂಜುರಾತಿಯಾದ ಫಲಾನುಭವಿಗಳಿಗೆ ಧನ ಸಹಾಯ ಬಿಡುಗಡೆ ಮಾಡಬೇಕು. ಹೆರಿಗೆ ಧನಸಹಾಯವನ್ನು ಬಾಂಡ್ ರೂಪದಲ್ಲಿ ನೀಡುತ್ತಿದ್ದು ಅದನ್ನು ಹಣದ ರೂಪದಲ್ಲಿ ನೀಡಬೇಕು. ಹೆರಿಗೆ ನಂತರ ಕಾರ್ಮಿಕರಿಗೆ ಕೆಲಸಕ್ಕೆ ಹೋಗಲು ಸುಮಾರು 4 ರಿಂದ 5 ತಿಂಗಳು ವಿನಾಯಿತಿ ನೀಡಬೇಕು. ಆ ಸಮಯದಲ್ಲಿ ಸಹಾಯಧನ ನೀಡಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಕೊಪ್ಪಳ | ಕಚೇರಿ ವೇಳೆ ಬದಲಾದರೂ ಬದಲಾಗದ ನೌಕರರು

ಶಿವಕುಮಾರ್ ಗೌಡ ಮಾತನಾಡಿ, “ಕರ್ನಾಟಕದ ಪ್ರತಿ ತಾಲೂಕುಗಳಲ್ಲಿ ಬಡ ಕಾರ್ಮಿಕರ ಅನುಕೂಲಕ್ಕಾಗಿ 5 ಕೋಟಿ ವೆಚ್ಚದಲ್ಲಿ ಕಾರ್ಮಿಕ ಭವನ ನಿರ್ಮಿಸಿಕೊಡಬೇಕು. ಕಾರ್ಮಿಕರಿಗೆ ವೈದ್ಯಕೀಯ ಅರ್ಜಿಯ ಸಲ್ಲಿಸಲು ಪ್ರತಿ ತಾಲೂಕಿಗೆ ಒಂದರಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಿ ನಗದು ರಹಿತ ಚಿಕಿತ್ಸೆ ನೀಡಬೇಕು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೀಡುಲಾಗುತ್ತಿರುವ ಮದುವೆ ಸಹಾಯಧನವನ್ನು ರೂ. 60,000 ದಿಂದ 1,00,000ಕ್ಕೆ ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...