ಕೊಪ್ಪಳ | ಪಹಲ್ಗಾಮ್‌ ಉಗ್ರ ಕೃತ್ಯಕ್ಕೆ ಸಿಪಿಐಎಂಎಲ್ ಖಂಡನೆ

Date:

ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಿ ರೆಸಿಸ್ಟೆನ್ಸ್ ಫ್ರಂಟ್ ನಡೆಸಿದ ಭೀಕರ ಭಯೋತ್ಪಾದಕ ದಾಳಿ ದೇಶದ ಭದ್ರತೆಗೆ ಕಠಿಣ ಸವಾಲು ಎಸೆದಿದೆ. ಅಮಾಯಕರ ಜೀವ, ಜೀವನ ದ್ವಂಸಗೊಳಿಸಿದ ಈ ಕುಕೃತ್ಯವನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನ್‌ವಾದಿ) ಮಾಸ್ ಲೈನ್ ಕೇಂದ್ರ ಹಾಗೂ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.

“ವಿದೇಶಿ ಮತ್ತು ಸ್ವದೇಶಿ ಕಾರ್ಪೊರೇಟ್ ಶಕ್ತಿಗಳು, ಎಲ್ಲಾ ಧಾರ್ಮಿಕ ಮೂಲಭೂತವಾದಿಗಳ ಮತ್ತು ಕೋಮುವಾದಿಗಳ ಪೋಷಕರಾಗಿದ್ದಾರೆ. ಈ ಭೀಕರ ಭಯೋತ್ಪಾದನೆಯ ದುರ್ಘಟನೆ ಕಾರ್ಪೊರೇಟ್ ಕುಳಗಳಿಗೆ ಖುಷಿ ತಂದಿರಬಹುದು. ಈ ದಾಳಿಯು, ಜನರಿಗೆ ಜಾತಿ, ಭಾಷೆ, ಧರ್ಮದ ನಶೆ ಏರಿಸಿ ಪರಸ್ಪರ ಬಡಿದಾಡಿಕೊಳ್ಳುವಂತೆ ಮತ್ತು ಸಾಮೂಹಿಕ ಹತ್ಯೆಗಳಲ್ಲಿ ತೊಡಗಿಕೊಳ್ಳುವಂತೆ ಮಾಡುವ ಅವರ ಉದ್ದೇಶ ಫಲ ಕೊಟ್ಟಿದೆ. ದೇಶವನ್ನು ಲೂಟಿ ಮಾಡುವ ನೀತಿಗಳು ಮತ್ತು ಕಾಯ್ದೆಗಳು ಜನರಿಗೆ ಅರ್ಥವಾಗದಂತೆ ಮಾಡುವುದೇ ಅವರ ಮುಖ್ಯ ಅಜೆಂಡಾ. ಈ ಭೀಕರ ಭಯೋತ್ಪಾದಕ ದಾಳಿಯು ಕಾಶ್ಮೀರ ಒಟ್ಟಾರೆ ಪರಿಸ್ಥಿತಿಯನ್ನು ಸಂಪೂರ್ಣ ಸ್ಥಿರಗೊಳಿಸುವ ಮೋದಿ ಸರ್ಕಾರದ ಸಮರ್ಥನೆಯ ಪೊಳ್ಳನ್ನು ಸ್ಪಷ್ಟವಾಗಿ ಬಹಿರಂಗಪಡಿಸುತ್ತದೆ” ಎಂದು ಸಿಪಿಐಎಂಎಲ್‌ ರಾಜ್ಯ ಕಾರ್ಯದರ್ಶಿ ಡಿ ಎಚ್‌ ಪೂಜಾರ ಆಕ್ರೋಶ ವ್ಯಕ್ತಪಡಿಸಿದರು.

“370ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ರಾಜ್ಯವನ್ನು ಪೂರ್ಣ ಪ್ರಮಾಣದ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವುದು, ರಾಜಕೀಯ ಸಮಸ್ಯೆಗೆ ಸೂಕ್ತ ಉತ್ತರವಲ್ಲ ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸುತ್ತದೆ. ಜನರ ಆಶೋತ್ತರಗಳನ್ನು ಗಣನೆಗೆ ತೆಗೆದುಕೊಳ್ಳುವುದು ಮತ್ತು ಜನರಿಗೆ ಪೂರಕವಾದ ಅರ್ಥ ಪೂರ್ಣ ರಾಜಕೀಯ ಕಾರ್ಯಚಟುವಟಿಕೆಗಳನ್ನು ನಡೆಸುವುದು ಪ್ರಾಥಮಿಕ ಆದ್ಯತೆಯಾಗಬೇಕು. ಕೋಮುವಾದಿ ಶಕ್ತಿಗಳ ವಿಶೇಷವಾಗಿ ಹಿಂದುತ್ವ ಶಕ್ತಿಗಳ ದ್ವೇಷದ ಪ್ರತಿಯೊಂದು ಪ್ರಯತ್ನವನ್ನು ವಿರೋಧಿಸಲು ನಾವು ಭಾರತದ ಜನರಿಗೆ, ಮುಖ್ಯವಾಗಿ ಜಮ್ಮು ಮತ್ತು ಕಾಶ್ಮೀರದ ಜನರಿಗೆ ಮನವಿ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಪಹಲ್ಗಾಮ್‌ ಭಯೋತ್ಪಾದಕ ದಾಳಿ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಕೋಮು ಧ್ರುವೀಕರಣವನ್ನು ಮತ್ತು ಈ ಭಯೋತ್ಪಾದಕ ದಾಳಿಯನ್ನು ಕಾಶ್ಮೀರದ ಜನರು ಈಗಾಗಲೇ ಬಹಿರಂಗವಾಗಿ ಖಂಡಿಸಿದ್ದಾರೆ. ಮಾನವರನ್ನು ಬಲಿ ಪಡೆಯುವ ಮುಖ್ಯವಾಗಿ ಅಮಾಯಕ ಜನರನ್ನು ಕೊಲ್ಲುವ ಜಗತ್ತಿನ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ವಿರೋಧಿಸಿ ಹೋರಾಡಬೇಕು ಎಂದು ಸಿಪಿಐಎಂಎಲ್ ಮೂಲಕ ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...