ಕ್ಷೌರ ಮಾಡಲು ನಿರಾಕರಿಸಿದ ಮುದುಕಪ್ಪ ಹಡಪದ್ ಆಸ್ತಿ ಮುಟ್ಟುಗೋಲು ಹಾಕಬೇಕು : ಮಾದಿಗ ಸಮುದಾಯ ಒತ್ತಾಯ

Date:

ಕೊಪ್ಪಳ ಜಿಲ್ಲೆಯ ಸಂಗನ ಹಾಲ ಗ್ರಾಮದಲ್ಲಿ ಕ್ಷೌರ ನಿರಾಕರಿಸಿ ಕೊಲೆ ಮಾಡಿದ ಮುದುಕಪ್ಪ ಹಡಪದ್ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ತಹಶೀಲ್ದಾರ್ ಗ್ರೇಡ್ 2 ವೆಂಕಟೇಶ್ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳು ಗತಿಸಿದರು ಇನ್ನೂ ಕೂಡ ಅಸ್ಪೃಶ್ಯತೆ ಎಂಬುದು ನಿವಾರಣೆ ಆಗದೆ ಇನ್ನೂ ಜೀವಂತವಾಗಿದೆ, ಇನ್ನೂ ಕೂಡ ಕೆಲ ಜಿಲ್ಲೆಗಳಲ್ಲಿ ಅಸ್ಪೃಶ್ಯರಿಗೆ ಇದುವರೆಗೂ ಗುಡಿ -ಗುಂಡಾರಗಳಲ್ಲಿ , ಚಹಾ ಹೋಟೆಲ್ಗಳಲ್ಲಿ, ಮತ್ತು ಅತಿ ಹೆಚ್ಚು ದಲಿತ ಅತ್ಯಾಚಾರ ಕೊಲೆ ಸುಲಿಗೆಯ ಘಟನೆಗಳು ಜಿಲ್ಲೆಯಲ್ಲಿ ಇನ್ನೂ ಜೀವಂತವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು .

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನ ಹಾಲ ಗ್ರಾಮದಲ್ಲಿ ಸೆಲ್ಯೂನ್ ಅಂಗಡಿಗೆ ತೆರಳಿದ ದಲಿತ ಯುವಕನಿಗೆ ನೀನು ಕೆಳ ಜಾತಿಯವನು ನಾನು ಮಾಡುವುದಿಲ್ಲ ಜಾತಿ ನಿಂದನೆ ಮಾಡಿ, ನಂತರ ಕೊಲೆ ಮಾಡಿದ್ದಾನೆ . ತೀವ್ರ ಕಡು ಬಡತನದಿಂದ ನರಳುತ್ತಿದ್ದ ಕುಟುಂಬಕ್ಕೆ ಸರಕಾರ ಪರಿಹಾರ ನೀಡಬೇಕು . ಕೊಲೆ ಮಾಡಿದ ಆರೋಪಿಯ ಆಸ್ತಿ ಸರ್ಕಾರ ಮುಟ್ಟುಗೊಲು ಹಾಕಬೇಕು, ನೊಂದ ಕುಟುಂಬಕ್ಕೆ ಪೊಲೀಸ್ ಬಂದೋಬಸ್ತ್ ನೀಡಬೇಕು ಎಂದು ಒತ್ತಾಯಿಸಿದರು .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಎಲ್ಲಾ ದಲಿತ ಕಾಲೋನಿಗಳಿಗೆ ಪೊಲೀಸ್ ರಕ್ಷಣೆ ನೀಡಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು , ಜಾಗೃತ ಮೂಡಿಸಬೇಕು ಎಂದು ಮನವಿ ಮಾಡಿದರು.

.ಈ ಸಂದರ್ಭದಲ್ಲಿ ಎಮ್ ಆರ್ ಎಚ್ ಎಸ್ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪುರ, ಗೌರವ ಸಲಹೆಗಾರ ಬಸವರಾಜ (ಜಯಂ) ಮಸರಕಲ್, ಬುರಪ್ಪ ಮರೆಡ್ಡಿ, ವಿಜಯಕುಮಾರ್ ಬಲ್ಲಿದವ್, ಸೇರಿದಂತೆ ಇತರರು ಇದ್ದರು

ವರದಿ :ಶಿವರಾಮ ಕಟ್ಟಿಮನಿ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...