ಕೊಪ್ಪಳ | ಚುಕ್ಕನಕಲ್ಲು ಗ್ರಾಮದ ದಲಿತ ಕಾಲೋನಿಗೆ ಮೂಲಸೌಕರ್ಯ ಕಲ್ಪಿಸಲು ದಸಂಸ ಆಗ್ರಹ

Date:

ಕೊಪ್ಪಳ ತಾಲೂಕಿನ ಚುಕ್ಕನಕಲ್ಲು ಗ್ರಾಮದ ದಲಿತ (ಎಸ್‌ಸಿ) ಕಾಲೋನಿಗೆ ಚರಂಡಿ, ರಸ್ತೆ, ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಕೊಡಲು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿಯ ಚಂದ್ರಕಾಂತ ಎಸ್ ಕಾದ್ರೋಳ್ಳಿ ಆಗ್ರಹಿಸಿದರು.

ಚುಕ್ಕನಕಲ್ಲ ಗ್ರಾಮ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡಲಿದ್ದು, ಗ್ರಾಮ ಪಂಚಾಯತ್ ಪಿಡಿಒ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ವೇಗಿ ಅವರಿಗೆ ಮನವಿ ಸಲ್ಲಿಸಿದರು.

ಕಾದ್ರೋಳ್ಳಿ ಬಣದ ಜಿಲ್ಲಾಧ್ಯಕ್ಷ ನಿಂಗಪ್ಪ ಜಿ.ಎಸ್. ಬೆಣಕಲ್ ಮಾತನಾಡಿ, “ಚುಕ್ಕನಕಲ್ಲು ಗ್ರಾಮದ ಎಸ್ಸಿ ಕಾಲೋನಿಗೆ ಹಲವಾರು ವರ್ಷಗಳಿಂದ ಶುದ್ಧ ಕುಡಿಯುವ ನೀರಿಲ್ಲ. ಓಡಾಡಲು ಜನರಿಗೆ ಸರಿಯಾದ ರಸ್ತೆಯಿಲ್ಲ ಮತ್ತು ಸರಿಯಾದ ಒಳಚರಂಡಿ ವ್ಯವಸ್ಥೆಯಿಲ್ಲ. ಇದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿದು ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಸೊಳ್ಳೆಗಳ ಕಾಟ ಹೆಚ್ಚಾಗಿದೆ, ಅಲ್ಲದೇ ರೋಗರುಜಿನಗಳ ಭೀತಿ ಉಲ್ಬಣಗೊಂಡಿದೆ. ಹೀಗೆ ಹಲವು ಸಮಸ್ಯಗಳಿಂದ ಜನರು ತತ್ತರಿಸಿ ಹೋಗಿದ್ದಾರೆ. ಎರಡು ವರ್ಷಗಳ ಹಿಂದೆ ಹಲವು ಬಾರಿ ಬಹದ್ದೂರ್ ಬಂಡಿ ಪಿಡಿಒ ಮತ್ತು ತಾಲ್ಲೂಕು ಪಂಚಾಯಿತಿ ಇಓ ಅವರಿಗೆ ಮನವಿ ಪತ್ರ ನೀಡಿದರೂ ಯಾವದೇ ಪ್ರಯೋಜನ ಆಗಿಲ್ಲ. ಹೀಗಾಗಿ ಸ್ಥಳಿಯ ಅಧಿಕಾರಿಗಳು ಯಾವುದೇ ರೀತಿಯ ಸ್ಪಂದಿಸಿರುವುದಿಲ್ಲ. ತಾವಾದರೂ ಚುಕ್ಕನಕಲ್ಲ ಗ್ರಾಮದ ಎಸ್‌ಸಿ ಸಮುದಾಯದ ಕಾಲೋನಿಗೆ ಸಮಸ್ಯೆಗಳನ್ನು ಬಗೆಹರಿಸಿ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಟಣಕನಕಲ್ಲ ಗ್ರಾಮದ ದಲಿತ ಕಾಲೋನಿಯ ಬೇಡಿಕೆ ಈಡೇರಿಕೆಗೆ ಒತ್ತಾಯ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣೀತ ವೇಗಿ ಮನವಿಗೆ ಸ್ವೀಕರಿಸಿ ಚಕ್ಕನಕಲ್ಲ ಗ್ರಾಮದ‌ ದಲಿತ ಕಾಲೋನಿ ಸಮಸ್ಯಗಳನ್ನ ಶೀಘ್ರದಲ್ಲೇ ಬಗೆಹರಿಸುತ್ತೆವೆ. ಮೂಲಭೂತ ಸೌಕರ್ಯ ಒದಗಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರಿಯಪ್ಪ ಮಣ್ಣಿನವರ, ಜಿಲ್ಲಾ ಸಂಚಾಲಕ ಮೈಲಪ್ಪ ಮಾದಿನೂರು, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಶಶಿಕಲಾ ಮಠದ, ಯಲಬುರ್ಗಾ ತಾಲ್ಲೂಕು ಉಪಾಧ್ಯಕ್ಷ ವೀರೇಶ್ ದೊಡ್ಡಮನಿ, ಚೈತ್ರಾ ಚುಕ್ಕನಕಲ್ಲು, ವಿದ್ಯಾಶ್ರೀ ಚುಕ್ಕನಕಲ್ಲು ಮತ್ತು ಲಕ್ಷ್ಮೀ ಚುಕ್ಕನಕಲ್ಲು ಹಾಗೂ ಇತರರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...