ಕೊಪ್ಪಳ | ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ; AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

Date:

ರಾಜ್ಯಾದ್ಯಂತ ಪದವಿ ತರಗತಿಗಳು ಆರಂಭವಾಗಿ ಒಂದೂವರೆ ತಿಂಗಳು ಗತಿಸಿದರೂ ಅತಿಥಿ ಉಪನ್ಯಾಸಕರನ್ನ ನೇಮಕ ಮಾಡಿಕೊಂಡಿಲ್ಲ. ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಗಣನೀಯವಾಗಿ ಹೆಚ್ಚಿದ್ದು, ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗಿದೆ. ಆದ್ದರಿಂದ, ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು AIDSO ನೇತೃತ್ವದಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟಿಸಿದರು.

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ ಕೊಪ್ಪಳ ನಗರದ ಅಶೋಕ ವೃತ್ತದ ಬಳಿ ಎಐಡಿಎಸ್ಓ ನೇತೃತ್ವದಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯವರ ಮೂಲಕ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

ಎಐಡಿಎಸ್ಒ ನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಹಯ್ಯಾಳಪ್ಪ ಮಾತನಾಡಿ, “ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಧರ್ಮ ಮೀರಿ ಭಾವೈಕ್ಯತೆ ಸಾರಿದ ಇರಕಲ್ಲಗಡ ಗಣೆಶೋತ್ಸವ

ಎಐಡಿಎಸ್ಒ ರಾಜ್ಯ ಸಮಿತಿ ಸದಸ್ಯೆ ಸಿಂಧು.ಕೆ ಮಾತನಾಡಿ, “ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಸಮಸ್ಯೆಯನ್ನು ಹಾಗೂ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ರಾಜ್ಯ ಸರ್ಕಾರವು ಈ ಕೂಡಲೇ ಬಗೆಹರಿಸಬೇಕು” ಎಂದು ವಿದ್ಯಾರ್ಥಿಗಳ ಪರವಾಗಿ ಆಗ್ರಹಿಸಿದರು.

ಪ್ರತಿಭಟನೆಯ ನಂತರ ಜಿಲ್ಲಾ ಕಾರ್ಯಕರ್ತ ಪ್ರದೀಪ್, ಶರಣಪ್ಪ, ಅಪ್ಪಾಜಿ, ತಿರುಪತಿ, ವಿದ್ಯಾರ್ಥಿಗಳಾದ ರುಕ್ಸನಾ ಬೇಗಂ, ಸಾವಿತ್ರಿ, ತುಳಸಿ, ಆಕಾಶ್, ಹುಲಿಗಮ್ಮ, ಲಕ್ಷ್ಮಿ, ನೇತ್ರಾ, ದರ್ಶನ್, ಮಲ್ಲಪ್ಪ, ಸಂತೋಷ್ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...