ಕೊಪ್ಪಳ | ಟಣಕನಕಲ್ಲ ಗ್ರಾಮದ ದಲಿತ ಕಾಲೋನಿಯ ಬೇಡಿಕೆ ಈಡೇರಿಕೆಗೆ ಒತ್ತಾಯ

Date:

ಕೊಪ್ಪಳದ ಟಣಕನಕಲ್ಲ ಗ್ರಾಮದ ದಲಿತ ಕಾಲೋನಿಯ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ಗ್ರಾಮ ಪಂಚಾಯತ್ ವಿವಿಧೋದ್ದೇಶ ಸಂಘಟನಾ ಕಾರ್ಯಗಳ ಒಕ್ಕೂಟ ಒತ್ತಾಯಿಸಿದೆ. ಓಜಿನಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಅನುಪಸ್ಥಿತಿಯಲ್ಲಿ ಆದಯ್ಯ ಸ್ವಾಮಿ ಹಾಗೂ ಗ್ರಾಂಪಂ ಅಧ್ಯಕ್ಷ ಹುಚ್ಚಪ್ಪ ಯಮನಪ್ಪ ಭೋವಿ ಅವರಿಗೆ ಈ ಕುರಿತು ಮನವಿ ಸಲ್ಲಿಸಲಾಗಿದೆ.

“ಕೊಪ್ಪಳ ತಾಲೂಕಿನ ಓಜಿನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಟಣಕನಕಲ್ಲ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ಮಹಿಳೆಯರಿಗೆ ಯಾವುದೇ ಸಾರ್ವಜನಿಕ ಶೌಚಾಲಯ ಇರುವುದಿಲ್ಲ. ಇದರಿಂದ ಅನಿವಾರ್ಯವಾಗಿ ಮಹಿಳೆಯರು ಬಹಿರ್ದೆಸೆಗೆ ಹೋಗಬೇಕಾಗಿದೆ. ಇದರಿಂದ ತುಂಬಾ ತೊಂದರೆ ಆಗುತ್ತಿದೆ. ಕೂಡಲೇ ಸಾರ್ವಜನಿಕ ಶೌಚಾಲಯ ನಿರ್ಮಿಸಿಕೊಡಬೇಕು. ಕುಡಿಯುವ ನೀರಿಗಾಗಿ ಸಾರ್ವಜನಿಕ ಸ್ಥಳದಲ್ಲಿ ನಳದ ವ್ಯವಸ್ಥೆಯನ್ನೂ ಮಾಡಿಕೊಡಬೇಕು” ಎಂದು ಮನವಿ ಮಾಡಿದ್ದಾರೆ.

“ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಅಡುಗೆ ಮಾಡುವ ಸಿಬ್ಬಂದಿಯಲ್ಲಿ ಯಾವುದೇ ದಲಿತ ಮಹಿಳೆಯರು ಇರುವುದಿಲ್ಲ. ಕೂಡಲೇ ಅಡಿಗೆ ಮಾಡುವ ಸಿಬ್ಬಂದಿಯಲ್ಲಿ ದಲಿತ ಮಹಿಳೆಯರನ್ನು ಆಯ್ಕೆ ಮಾಡಿಕೊಂಡು ಸಾಮಾಜಿಕ ಸಮಾನತೆ ಸಾಧಿಸಬೇಕು. ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು” ಎಂದು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷರಿಗೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ನಗರಸಭೆ ಅಧ್ಯಕ್ಷರ ಸಹೋದರ & ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಈ ವೇಳೆ ಕರ್ನಾಟಕ ಗ್ರಾಮ ಪಂಚಾಯತ್ ವಿವಿಧೋದ್ದೇಶ ಸಂಘಟನಾ ಕಾರ್ಯಗಳ ಒಕ್ಕೂಟದ ತಾಲೂಕು ಸಂಯೋಜಕ ಸುಂಕಪ್ಪ ಮೀಸಿ, ಟಣಕನಕಲ್ಲ ಗ್ರಾಮಸ್ಥರಾದ ಯಮನೂರಪ್ಪ ಕುಂಜಾಲಿ, ಮಾರುತಿ ಕುಂಜಾಲಿ, ಹನುಮವ್ವ ಕುಂಜಾಲಿ, ಯಮನವ್ವ ಕುಂಜಾಲಿ, ಹನುಮಪ್ಪ ಕುಂಜಾಲಿ, ಪರಶುರಾಮ್ ಕುಂಜಾಲಿ, ದುರಗವ್ವ ಕುಂಜಾಲಿ, ಈರವ್ವ ಕುಂಜಾಲಿ, ಸುರೇಶ ಕುಂಜಾಲಿ, ಗಾಳೆವ್ವ ಕುಂಜಾಲಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...