ಕೊಪ್ಪಳ | ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ನೀಡಲು ಒತ್ತಾಯ

Date:

ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಂತೆ ಶೇ. 1ರಷ್ಟು ಒಳಮೀಸಲಾತಿಯನ್ನು ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ, ಅತಿಸೂಕ್ಷ್ಮ ಬುಡಕಟ್ಟು ಆದಿವಾಸಿ ಸಮುದಾಯಗಳಿಗೆ ಒದಗಿಸಬೆಕು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಜನಾಂಗಗಳು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದವು.

ಕೊಪ್ಪಳ ನಗರ ಅಶೋಕ ವೃತ್ತದಿಂದ ಜಿಲ್ಲಾಡಳಿತದವರೆಗೂ 30ಕ್ಕೂ ಹೆಚ್ಚು ಅಲೆಮಾರಿ, ಅರೆಅಲೆಮಾರಿ ಹಾಗೂ ಬುಡಕಟ್ಟು ಸಮುದಾಯಗಳ ಜನರು ತಮ್ಮ ವಿವಿಧ ಸಾಂಸ್ಕೃತಿಕ ವೇಷ-ಭೂಷಣ ಧರಿಸಿ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ವರದಿಯನ್ನು ಜಾರಿ ಮಾಡಬೇಕೆಂದು ಒತ್ತಾಯಿಸಿ ಸರಕಾರಕ್ಕೆ ಜಿಲ್ಲಾಧಿಕಾರಿ ಸುರೇಶ ಹಿಟ್ನಾಳ ಅವರ ಮೂಲಕ ಮನವಿ ಸಲ್ಲಿಸಿದರು.

ಅಲೆಮಾರಿಗಳ ಜೀವನ ಪದ್ಧತಿ, ಅವರ ಕಲೆ, ನಡೆಸುವ ಅತಂತ್ರ ಬದುಕಿನ ಚಿತ್ರಣವನ್ನು ಬೀದಿಗಳಲ್ಲಿ ಪ್ರದರ್ಶಿಸುವ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವ ಪ್ರಯತ್ನ ನಡೆಯಿತು. ಸುಡುಗಾಡು ಸಿದ್ಧರ ಕಲೆ, ಹಗಲು ವೇಷಗಾರರ ಕಲೆ, ಸಿಂಧೋಳ್ಳ ಸಮಾಜದವರ ಕಲೆ, ಹಕ್ಕಿಪಿಕ್ಕಿಗಳು, ಬುಡುಬುಡಿಕೆಯವರ ಜೀವನ ಸಹಿತ ಹಲವಾರು ಅಲೆಮಾರಿ ಸಮುದಾಯಗಳ ಜೀವನ ವೃತ್ತಾಂತ ಪ್ರತಿಭಟನೆಯ ಮೂಲಕವೇ ಪರಿಚಯವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 29 at 8.53.57 PM 2

ಬುಡ್ಗ ಜಂಗಮ ಸಮುದಾಯದ ರಾಜ್ಯಾಧ್ಯಕ್ಷ ಸಣ್ಣ ಮಾರಪ್ಪ ಮಾತನಾಡಿ, “ರಾಜ್ಯ ಸರಕಾರ ಎಡಗೈ ಹಾಗೂ ಬಲಗೈ ಸಮುದಾಯಗಳಿಗೆ ಶೇ 6-6ರಂತೆ ಒಳಮೀಸಲಾತಿ ಜಾರಿ ಮಾಡಿತು. ಆದರೆ, ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿಯ ಪ್ರಕಾರ ಅಲೆಮಾರಿ ಸಮುದಾಯಗಳಿಗೆ ಶೇ.1 ಮೀಸಲಾತಿ ಕೊಡದೇ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಅನ್ಯಾಯ ಮಾಡುತ್ತಿದೆ. ನಮ್ಮ ಸಮುದಾಯಗಳಿಗೆ ಮರಣ ಶಾಸನ ಬರೆಯಿತು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಕಟ್ಟಕಡೆಯ ಸಮುದಾಯಗಳು ಇವೆಯೋ, ಅಂತ ಸಮುದಾಯಗಳಿಗೆ ನ್ಯಾಯ ಕೊಡುವ ಬದಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಲೆಮಾರಿ ಸಮುದಾಯಗಳಿಗೆ ಮೋಸ ಮಾಡಿದರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾದಿಗ ಸಮುದಾಯದ ಯುವ ಮುಖಂಡ ಮಲ್ಲಿಕಾರ್ಜುನ ಪೂಜಾರ ಮಾತನಾಡಿ, “ಧ್ವನಿ ಇಲ್ಲದ ಅಲೆಮಾರಿ ಸಮುದಾಯಗಳಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಹಳ ದೊಡ್ಡ ಅನ್ಯಾವೆಸಗಿದೆ. ಎಲ್ಲಾ ಅಲೆಮಾರಿ ಸಮುದಾಯಗಳ ಜೊತೆ ಮಾದಿಗ ಸಮುದಾಯ ಜೊತೆಗಿರುತ್ತದೆ. ಶೇ.1‌ ಒಳಮೀಸಲಾತಿ ಅಲೆಮಾರಿಗಳಿಗೆ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ” ಎಂದು ಭರವಸೆ ನೀಡಿದರು.

ಛಲವಾದಿ ಸಮುದಾಯದ ಯುವ ನಾಯಕ ಕಾಶ್ಯಪ್ಪ ಛಲವಾದಿ ಮಾತನಾಡಿ, “ಬಡವರ ಅನ್ನ ಕಿತ್ತು ರಾಕ್ಷಸರ ಬಾಯಲ್ಲಿ ಇಟ್ಟಂತಾಗಿದೆ ಈ ರಾಜ್ಯ ಸರಕಾರದ ನೀತಿ. ಧ್ವನಿಯೇ ಇಲ್ಲದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸದೇ ಘೋರ ಅನ್ಯಾಯ ಮಾಡಿದೆ. ಡಿ.ದೇವರಾಜ ಅರಸು ಅವರ ಸಾಮಾಜಿಕ ನ್ಯಾಯವನ್ನು ಕಡೆಗಣೆಸಿದೆ ಹಾಗೂ ನ್ಯಾ.ನಾಗಮೋಹನ ದಾಸ್ ಅವರ ಸಾಮಾಜಿಕ ನ್ಯಾಯಯುತ ವರದಿಯನ್ನು ಗಾಳಿಗೆ ತೂರಿದೆ. 49 ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗುವವರೆಗೂ ಛಲವಾದಿ ಸಮುದಾಯ ನಿಮ್ಮ ಜೊತೆ ಇರುತ್ತದೆ” ಎಂದು ವಿಸ್ವಾಸ ತುಂಬಿದರು.

ಹಿರಿಯ ಪತ್ರಕರ್ತ ಬಸವಾರಾಜ ಶೀಲವಂತರ ಹಾಗೂ ಅಲ್ಲಮ‌ಪ್ರಭು ಬೆಟ್ಟದೂರ ಮಾತನಾಡಿ, “ಒಳಮೀಸಲಾತಿಯನ್ನು ಜಾರಿ ಮಾಡುವ ಒತ್ತಡದಲ್ಲಿ ಸರ್ಕಾರ ಅಲೆಮಾರಿಗಳಂತಹ ಧ್ವನಿ ಇಲ್ಲದವರ ಧ್ವನಿ ಅಡಗಿಸಿದ್ದು ಅಕ್ಷಮ್ಯ. ಅಲೆಮಾರಿ ಸಮುದಾಯಗಳಿಗೆ ಮರಣ ಶಾಸನವನ್ನು ಸರ್ಕಾರ ಬರೆದುಬಿಟ್ಟಿದೆ, ಪ್ರತ್ಯೇಕ ಶೇ 1ರಷ್ಟು ಮೀಸಲಾತಿ ನೀಡುವ ಮೂಲಕ ನ್ಯಾಯ ನೀಡಲೇಬೇಕು” ಎಂದು ಒಕ್ಕೊರಲ ಒತ್ತಾಯ ಮಾಡಿದರು.

ಇದನ್ನೂ ಓದಿ: ಕೊಪ್ಪಳ | ಯುಕೆಇಎಂ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಎನ್‌ಒಸಿ ಕೊಡಲು ತಕರಾರು: ಗ್ರಾ.ಪಂ ಎದುರು ಗ್ರಾಮಸ್ಥರ ಪ್ರತಿಭಟನೆ

“ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಸರ್ಕಾರದ ಸಮೀಕ್ಷೆಯ ದತ್ತಾಂಶಗಳ ಹಿನ್ನೆಲೆಯಲ್ಲಿ 59 ಸೂಕ್ಷ್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳ ಸಮೂಹಕ್ಕೆ ಪ್ರವರ್ಗ-ಎ ರಲ್ಲಿ ವರ್ಗೀಕರಿಸಿರುವುದು ನ್ಯಾಯಸಮ್ಮತವಾಗಿತ್ತು. ಹೀಗಾಗಿ 59 ಸೂಕ್ಷ್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ ರಲ್ಲಿಯೇ ಇರಿಸಿ ಶೇ 1ರಷ್ಟು ಒಳ ಮೀಸಲಾತಿ ನಿಗದಿಗೊಳಿಸಬೇಕು” ಎಂದು ಆಗ್ರಹಿಸಿದರು.

ವಿವಿಧ ಅಲೆಮಾರಿ ಸಮುದಾಯಗಳು ಸಾವಿರಾರು ಸಂಖ್ಯೆಯಲ್ಲಿ ಜಿಲ್ಲಾಡಳಿತ ಭವನದ ಮುಂದೆ ಜಮಾವಣೆಯಾಗಿದ್ದರು. ಜಿಲ್ಲಾಧಿಕಾರಿಗಳ ಬದಲಾಗಿ ಅಲೆಮಾರಿಗಳ ಮನವಿ ಪತ್ರ ಸ್ವೀಕರಿಸಲು ಎಡಿಸಿ ಅವರನ್ನು ಕಳಿಸಲಾಗಿತ್ತು; ಆದರೆ, ಪ್ರತಿಭಟನೆ ನಿರತ ಜನ ಜಿಲ್ಲಾಧಿಕಾರಿಗಳೇ ಬರಬೇಕೆಂದು ಪಟ್ಟು ಹಿಡಿದರು. ಪೊಲೀಸ್‌ರು ಮನವೊಲಿಸಲು ಯತ್ನಿಸಿದರೂ ಮಣಿಯದೇ ಪಟ್ಟು ಸಡಿಲಿಸಲಿಲ್ಲ. ಕೊನೆಗೂ ಜಿಲ್ಲಾಧಿಕಾರಿಗಳೇ ಬಂದು ಮನವಿ ಸ್ವೀಕರಿಸಿದ ನಂತರ ಪ್ರತಿಭಟನಾಕಾರರು ಸುಮ್ಮನಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...