ಕೊಪ್ಪಳ | ಎರಡು ದಶಕಗಳಿಂದ ವಾಸ; ಹಕ್ಕುಪತ್ರಕ್ಕೆ ಹರಸಾಹಸ

Date:

ಕಳೆದ 25 ವರ್ಷಗಳಿಂದ ಸರ್ಕಾರ ನೀಡಿರುವ ಜಾಗದಲ್ಲಿ ವಾಸಿಸುತ್ತಿರುವ ಹುಳ್ಕಿಹಾಳ ಕ್ಯಾಂಪಿನ 250ಕ್ಕೂ ಅಧಿಕ ಕುಟುಂಬಗಳು ಹಕ್ಕುಪತ್ರಕ್ಕೆ ಆಗ್ರಹಿಸಿ ಕಾರಟಗಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಊರಿನ ಪ್ರಮುಖ ಸಂಗಪ್ಪ ದಳಪತಿ ಮಾತನಾಡಿ, “ಎರಡು ದಶಕಗಳಿಂದ ಹಕ್ಕುಪತ್ರಗಳನ್ನು ಪಡೆಯಲು ಜನರು ಪ್ರತಿದಿನ ಕಚೇರಿಗೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈವರೆಗೆ ಹಕ್ಕುಪತ್ರಗಳೂ ದೊರೆತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಹುಳ್ಕಿಹಾಳ ಕ್ಯಾಂಪಿನ ಕಾಲುವೆ ಪಕ್ಕದಲ್ಲಿ ಗುಡಿಸಲು ಕಟ್ಟಿಕೊಂಡು ವಾಸವಾಗಿದ್ದ ಜನರಿಗೆ ಆಗಿನ ಸರ್ಕಾರ ಹಾಗೂ ಮಾಜಿ ಮಂತ್ರಿ ಮಲ್ಲಿಕಾರ್ಜುನ ನಾಗಪ್ಪನವರ ಪರಿಶ್ರಮದಿಂದ ಸರ್ವೇ ನಂ 72/1 ರಲ್ಲಿ 9 ಎಕರೆ ಜಮೀನು ಖರೀದಿಸಿ ನೀವೇಶನಗಳನ್ನು ಹಂಚಿಕೆ ಮಾಡಿದ್ದರು. ಈ ಹಂಚಿಕೆ ಮಾಡಿ 25 ವರ್ಷಗಳು ಕಳೆದಿದ್ದರೂ ಕೂಡ ಇಲ್ಲಿನ ನಿವಾಸಿಗಳು ಹಕ್ಕುಪತ್ರಕ್ಕಾಗಿ ಹಪಹಪಿಸುವಂತಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ನಿವೇಶನಗಳಿಗೆ ಹಕ್ಕುಪತ್ರಗಳು ಇಲ್ಲದಿರುವುದರಿಂದ ಸಾಲ ಪಡೆಯುವುದು, ಪರಭಾರೆ ಮಾಡುವುದು, ಖರೀದಿ ಪ್ರಕ್ರಿಯೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ. ಒಟ್ಟಿನಲ್ಲಿ ಎರಡು ದಶಕಗಳು ಕಳೆದರೂ ಹಕ್ಕುಪತ್ರಗಳಿಗಾಗಿ ಹರಸಾಹಸ ಪಡುವ ಸ್ಥಿತಿ ಕ್ಯಾಂಪಿನ ನಿವಾಸಿಗಳದ್ದಾಗಿದೆ. ಆದ್ದರಿಂದ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹಕ್ಕುಪತ್ರಗಳನ್ನು ವಿತರಿಸಬೇಕು” ಎಂದು ಒತ್ತಾಯಿಸಿದರು.

“ಸರ್ಕಾರವು ಇತ್ತೀಚೆಗೆ ಈ ಕ್ಯಾಂಪನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸುವ ವಿಷಯವೂ ಇಲ್ಲಿನ ನಿವಾಸಿಗಳಿಗೆ ತಿಳಿದಿಲ್ಲ. ಯಾವುದೇ ಮಾಹಿತಿ ಇರುವುದಿಲ್ಲ. ಕನಿಷ್ಠ ಪಕ್ಷ ಈ ಕುರಿತು ಕಂದಾಯ ಇಲಾಖೆಯ ಅಧಿಕಾರಿಗಳು ಪ್ರಚಾರ ಪಡಿಸುವ ಗೋಜಿಗೂ ಹೋಗಿಲ್ಲ. ತಾವು ಮನೆ ಕಟ್ಟಿಕೊಂಡು ವಾಸಿಸುತ್ತಿರುವುದು ನಮ್ಮದೇ ಸ್ವಂತ ನಿವೇಶನದಲ್ಲಿ ಕಟ್ಟಿಕೊಂಡ ಮನೆಗಳಾ ಅಥವಾ ಬೇರೆ ಯಾರದೋ ನಿವೇಶನದಲ್ಲಿ ಕಟ್ಟಿಕೊಂಡ ಮನೆಗಳಾ ಎಂಬ ಸಂಶಯ ಅವರಿಗೆ ಕಾಡುತ್ತಿದೆ. ಇದರಿಂದಾಗಿ ನಿವಾಸಿಗಳು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ” ಎಂದರು.

“ಒಟ್ಟಿನಲ್ಲಿ ಕಂದಾಯ ಗ್ರಾಮವನ್ನಾಗಿ ಪರಿವರ್ತನೆ ಮಾಡುವ ಮುನ್ನವೇ ತಮ್ಮ ನಿವೇಷನಗಳಿಗೆ ಹಕ್ಕುಪತ್ರಗಳನ್ನು ನೀಡಬೇಕು. ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿಯ ಮುಂದೆ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಗ್ರಾಮಸ್ಥರ ಪರವಾಗಿ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಮುಳುಗುತ್ತಿರುವ ಹಡಗಿನಂತಾಗಿದೆ: ಸಚಿವ ಎಂ ಬಿ ಪಾಟಿಲ್

ಈ ವೇಳೆ ನಿವಾಸಿಗಳಾದ ಕೇಶವ ಗಂಗಾವತಿ, ಬಾಳಪ್ಪ, ಹನುಮಂತಪ್ಪ ತಳುಗೇರಿ, ಬಸಪ್ಪ ಬಿಂಜವಾಡಗಿ, ಶಿವಪುತ್ರಪ್ಪ, ಮುತ್ತಪ್ಪ, ಬಸಲಿಂಗಪ್ಪ, ಲಕ್ಷ್ಮಣ, ಹನುಮಂತ ಗ್ವಾದಿ, ಶಿವರಾಜಕುಮಾರ, ಮಂಜುನಾಥ, ಪಾಂಡುರಂಗ, ಶರಣಪ್ಪ ಅಣ್ಣಿಗೇರಿ, ಶರಣಪ್ಪ ಸುಂಕದ, ನಾಗರಾಜ ಭೋವಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...