ಕೊಪ್ಪಳ | ದೇವದಾಸಿ ಪದ್ದತಿ ಜೀವಂತ: ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಕಳವಳ

Date:

ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ದತಿ ಮತ್ತು ವೇಶ್ಯೆವಾಟಿಕೆ ಈ ಹಿಂದೆಯೂ ಜಾರಿಯಲ್ಲಿತ್ತು. ಈ ದೇವದಾಸಿ ಪದ್ದತಿ ಈಗಲೂ ಜೀವಂತವಿದೆ ಎಂದು ಚಿಂತಕ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಹೇಳುದರು.

ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿ ‘ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್’ ಸಹಯೋಗದಲ್ಲಿ ನಡೆದ “75ನೇ ಸಂವಿಧಾನ ಸಮರ್ಪಣಾ ಅಮೃತ ಮಹೋತ್ಸವ” ಕಾರ್ಯಕ್ರಮದಲ್ಲಿ ಮಾತನಾಡಿದರು.

“ದೇವದಾಸಿ ಪದ್ಧತಿ ತಡೆಗಟ್ಟಲು ಯುವತಿಯರಿಗೆ ಉತ್ತಮ ಶಿಕ್ಷಣ ನೀಡಬೇಕು. ಜತೆಗೆ ಜೀವನವನ್ನು ರೂಪಿಸಬೇಕು. ಮುಗ್ದ ಯುವತಿಯರನ್ನು ದೇವದಾಸಿಯರನ್ನಾಗಿ ಮಾಡುವ ಪದ್ಧತಿ ನಿರ್ಮೂಲನೆಯಾಗಬೇಕು” ಎಂದು ಹೇಳುದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ನಿಂಗು ಜಿ ಎಸ್ ಬೆಣಕಲ್ ಪ್ರಸ್ತಾವಿಕ ಮಾತುಗಳನ್ನಾಡಿ, “ಈ ಕಾರ್ಯಕ್ರಮವನ್ನು ನಾವು ಯಾಕೆ ಹಿರೇಸಿಂದೋಗಿ ಗ್ರಾಮದಲ್ಲಿ ಆಯೋಜಿಸಿದ್ದೇವೆಂದರೆ, ಈ ಭಾಗದಲ್ಲಿ ಅಸ್ಪೃಶ್ಯತೆ, ಅಸಮಾನತೆ ಮತ್ತು ಮೂಲ ಸೌಕರ್ಯಗಳ ಜ್ವಲಂತ ಸಮಸ್ಯೆಗಳು ಇನ್ನೂ ಜೀವಂತ ಇವೆ. ಅವುಗಳನ್ನು ತೊಡದುಹಾಕಲು ಶೋಷಿತ ಸಮುದಾಯಗಳಿಗೆ ಕರೆಕೊಡಲು ಎಲ್ಲರೂ ಸೇರಿದ್ದೇವೆ” ಎಂದು ಹೇಳಿದರು.

ವಕೀಲರ ಸಂಘ ಕೊಪ್ಪಳ ಜಿಲ್ಲಾಧ್ಯಕ್ಷ ಎ ವಿ ಕಣವಿ ಮಾತನಾಡಿ, “ಸಂವಿಧಾನ ಎಲ್ಲ ಧರ್ಮದವರಿಗೂ ಮತ್ತು ಎಲ್ಲ ಸಮಾಜದವರಿಗೂ ಹಕ್ಕನ್ನು ಕೊಟ್ಟಿದೆ. ಎಲ್ಲ ಜನರಿಗೂ ಮತ್ತು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರೆಯಬೇಕಾದರೆ ಹಾಗೂ ಪ್ರತಿಯೊಬ್ಬರು ಸಾಮಾಜಿಕ ನ್ಯಾಯಕ್ಕಾಗಿ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಮತ್ತು ಪ್ರಾದೇಶಿಕ ಎಲ್ಲೆಯನ್ನು ಮೀರಿ ಸಂಘಟಿತ ಹೋರಾಟ ಮಾಡಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮಹಾ ಪರಿನಿಬ್ಬಾಣ ದಿನ; ದಲಿತಪರ ಸಂಘಟನೆಗಳಿಂದ ಅಂಬೇಡ್ಕರ್‌ ನೆನಪು

ವಕೀಲರು ರವಿಚಂದ್ರ ಆರ್ ಮಾಟಲದಿನ್ನಿ ಮಾತನಾಡಿ, “ಕರ್ತವ್ಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕಾನೂನಿನ ಸ್ಥಾನ ಪಡೆಯುವುದು ಬಹಳ ಮುಖ್ಯವಾಗಿದೆ. ಸಮರ್ಪಕ ಶಿಕ್ಷಣ ಒದಗಿಸುವುದರ ಮೂಲಕ ಉನ್ನತ ಹುದ್ದೆಗಳನ್ನು ಪಡೆಯಲು ಯುವಕ, ಯುವತಿಯರಿಗೆ ಪ್ರೇರೆಪಿಸಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶೈಲಜಾ ಹಿರೇಮಠ, ಸಲೀಮಾ ಜಾನ್, ಧರ್ಮರಾಜ್ ಗೋನಾಳ, ಸಲೀಮಾ ಜಾನ್ ಮತ್ತು ಮಲ್ಲಿ ಎಸ್ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...