ಕೊಪ್ಪಳ | ಶಿಥಿಲಗೊಂಡ ಅಕ್ಷರ ದಾಸೋಹ ಕಟ್ಟಡ; ಸಾರ್ವಜನಿಕರ ಆಕ್ರೋಶ

Date:

ಕೊಪ್ಪಳ ನಗರ ಬೇಲ್ದಾರ ಕಾಲೋನಿಯ ಸರಕಾರಿ ಪ್ರಾಥಮಿಕ ಶಾಲೆಯ ಬಿಸಿಯೂಟ ಕೇಂದ್ರ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. 3-4 ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಟ್ಟಡ ಸೋರುತ್ತಿದೆ. ಯಾವಾಗ ಕುಸಿಯುತ್ತದೋ ಎಂಬ ಅಪಾಯ ಇದ್ದರೂ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಬೇರೆ ದಾರಿ ಇಲ್ಲದೆ ಸೋರುತ್ತಿರುವ ಕಟ್ಟಡದಲ್ಲೇ ಸಿಬ್ಬಂದಿ ಅಡುಗೆ ಮಾಡಿದ್ದಾರೆ. ನೀರಿನಲ್ಲಿ ಪಾತ್ರೆ- ಪಗಡೆಗಳು ತೇಲಾಡುತ್ತಿರುವ ದೃಶ್ಯ ಕಂಡುಬಂದಿದ್ದು, ಪೋಷಕರು ಆತಂಕದಲ್ಲಿದ್ದಾರೆ.

WhatsApp Image 2025 07 21 at 7.22.22 PM

ಶಾಲಾ ಮುಖ್ಯೋಪಾಧ್ಯಾಯರು ಈ ಸಂಬಂಧ ಬಿಇಒ ಮತ್ತು ಅಕ್ಷರ ದಾಸೋಹ ಬಿಸಿಯೂಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಇದುವರೆಗೂ ಯಾರೂ ಕ್ರಮ ಕೈಗೊಂಡಿರುವುದಿಲ್ಲ. ಈ ಎಲ್ಲಾ ಸಮಸ್ಯಗಳಿಂದಾಗಿ ಬಿಸಿಯೂಟ ಸಿಬ್ಬಂದಿಗಳು ಭಯದ ವಾತಾವರಣದಲ್ಲಿ ಕೆಲಸವನ್ನು ಮಾಡಬೇಕಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಹೋರಾಟಗಾರ ಬಸವರಾಜ್ ಶೀಲವಂತರ ಮಾತನಾಡಿ, “ಬಿಸಿಯೂಟದ ಅಡುಗೆ ಕೊಠಡಿಯು ದುರಸ್ತಿಯಲ್ಲಿದ್ದು, ಅಧಿಕಾರಿಗಳು ಈ ಕುರಿತಂತೆ ಬೇಗ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ಅಪಾಯ ಸಂಭವಿಸಿದರೂ ಆಶ್ಚರ್ಯವಿಲ್ಲ. ಅನಾಹುತಕ್ಕೆ ಅವಕಾಶವನ್ನು ಮಾಡಿಕೊಡದೆ ಅಧಿಕಾರಿಗಳು ಬೇಗ ಎಚ್ಚೆತ್ತುಕೊಂಡರೆ ಒಳಿತು” ಎಂದು ಎಚ್ಚರಿಸಿದರು.

WhatsApp Image 2025 07 21 at 7.22.23 PM 1

ಇದನ್ನೂ ಓದಿ: ಕೊಪ್ಪಳ | ಐತಿಹಾಸಿಕ ಸಾಧನೆಗೆ ಶಕ್ತಿ ಯೋಜನೆ ಸಾಕ್ಷಿ: ಶಾಸಕ ರಾಘವೇಂದ್ರ ಹಿಟ್ನಾಳ

“ಕೊಠಡಿ ಬಹುತೇಕ ಕಡೆಗಳಲ್ಲಿ ಬಿರುಕು ಬಿಟ್ಟಿದ್ದು, ಕೊಠಡಿ ಬಹುತೇಕ ಹಾಳಾಗಿದ್ದು, ಕಟ್ಟಡದ ಒಳಭಾಗ ನಿರಿನಿಂದ ತುಂಬಿಕೊಂಡಿದೆ. ಕೊಠಡಿಯಲ್ಲೆಲ್ಲ ಯಾವತ್ತು ಬಿದ್ದು ಅಪಾಯ ತಮಡೋತ್ತದೋ ಎಂಬ ಆತಂಕ ವಿದ್ಯಾರ್ಥಿಗಳ ಪಾಲಕರಲ್ಲಿ ಆವರಿಸಿದೆ. ಕಟ್ಟಡಕ್ಕೆ ಅಳವಡಿಸಿರುವ ವಿದ್ಯುತ್ ವೈರ್ ಕಿತ್ತು ಹೊರಗೆ ಬಂದಿವೆ. ಇದು ಇನ್ನೊಂದು ರೀತಿಯ ಅಪಾಯದ ಗುರುತಾಗಿದೆ. ಮಾಳಿಗೆಯ ಚತ್ತು ಉದುರಿ ಬೀಳುತ್ತಿದೆ. ಇದರಿಂದ ಯಾವಾಗ ಯಾವ ರೀತಿಯ ಅಪಾಯ ಕಾದಿದೆಯೋ ಹೇಳಲಾಗದು. ಅಪಾಯ ಸಂಭವಿಸುವ ಮುನ್ನ ಕ್ರಮ ಕೈಗೊಳ್ಳಬೇಕು” ಎಂದು ಬಿಸಿಯೂಟ ಅಧಿಕಾರಿ ಮಲ್ಲಿಕಾರ್ಜುನ ಗೌಡರವರಿಗೆ ಒತ್ತಾಯಿಸಿರದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...